ಪ್ರಜ್ವಲ್ ರೇವಣ್ಣ ಜರ್ಮನ್ ಗೆ ಹೋಗಿದ್ದಾನೆ; ಯಾವ ವಿಡಿಯೋ ಬರತ್ತೋ: ಸಿಎಂ ಇಬ್ರಾಹಿಂ
ಹುಬ್ಬಳ್ಳಿ,, ಮೇ 01: ಹಾಸನದಲ್ಲಿ ಭಾರೀ ಸದ್ದು ಮಾಡಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ದೇವೇಗೌಡರ ಕುಟುಂಬದ ವಿರುದ್ಧ ಸಿಎಂ ಇಬ್ರಾಹಿಂ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಸಿಎಂ ಇಬ್ರಾಹಿಂ ಮಾತನಾಡಿದ ಅವರು, ಇವತ್ತು ಅವನು ಜರ್ಮನ್ಗೆ ಹೋಗಿದ್ದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲವೆಂದು ಹೇಳಿದ್ದಾರೆ. ಪ್ರಜ್ವಲ್ 600 ಜನ ಹುಡ್ಗೀರಿಗೆ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಆದರೂ ಯಡಿಯೂರಪ್ಪ, ಜೋಶಿ ಯಾಕೆ ಮಾತಾಡಿಲ್ಲ? ಇದೇನಾ ಅಚ್ಚೇದಿನ್ ಎಂದು ಸಿಎಂ ಇಬ್ರಾಹಿ ವಾಗ್ದಾಳಿ ನಡೆಸಿದ್ದಾರೆ.

ಪ್ರಜ್ವಲ್ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ. ಅವರು ಗರ್ಭಿಣಿ ಆದ ಮೇಲೆ ಹೊರಗಡೆ ಹಾಕಿದರೇನು, ಅವರ ಮಕ್ಕಳಿಗೆ ಪರಿಹಾರ ಕೊಡುವುದು ಯಾರು? ನಾನು ಆವತ್ತೆ ದೇವೆಗೌಡರಿಗೆ ಹೇಳಿದ್ದೆ, ಇವತ್ತು ಅವನು ಜರ್ಮನ್ಗೆ ಹೋಗಿದ್ದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ಮಠಾಧೀಶರು, ದಲಿತರು, ಮುಸ್ಲಿಂರ ಮೂರನೇ ಶಕ್ತಿ ಹುಟ್ಟು ಹಾಕುತ್ತೇವೆ ಜೊತೆಗೆ ಒಬ್ಬರು ಬ್ರಹ್ಮಾಚಾರಿಗೆ ಶಕ್ತಿ ಕೊಡುತ್ತೇವೆ. ಮುಂದೆ ಕರ್ನಾಟಕದಲ್ಲಿ ಮೂರನೇ ಶಕ್ತಿ ಹೊಸ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುತ್ತದೆ. ಈ ಕುರಿತು ನಾನು ದಿಂಗಾಲೇಶ್ವರ ಸ್ವಾಮೀಜಿ ಜೊತೆ ಮೂರು ಗಂಟೆ ಮಾತಾಡಿದ್ದೇನೆ. ಕರ್ನಾಟಕದಲ್ಲಿ ಕಾಂಗ್ರೆಸ್ ತಪ್ಪಿನಿಂದ ಬಿಜೆಪಿ ಬೆಳೆಯುತ್ತಿದೆ. ಇವತ್ತು ಬಸವತತ್ವದ ಆಧಾರದ ಮೇಲೆ ಸಂಘಟನೆ ಮಾಡಬೇಕಿದೆ. ನಾವು ಇದನ್ನು ತೀರ್ಮಾನ ಮಾಡಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿ ಕೆಲವೇ ದಿನಗಳಲ್ಲಿ ಈ ಕುರಿತು ಹೇಳುತ್ತಾರೆ ಎಂದು ದಿಂಗಾಲೇಶ್ವರ ಸ್ವಾಮೀಜಿ ರಾಜಕೀಯ ನಡೆ ಕುರಿತು ಸಿಎಂ ಇಬ್ರಾಹಿಂ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ಕುಮಾರಸ್ವಾಮಿ ಮುಸ್ಲಿಂ ರ ವೋಟ್ ತೆಗೆದುಕೊಂಡು 17 ಸೀಟ್ ಗೆದ್ದಿದ್ದು ನನ್ನಿಂದ. ಬಿಜೆಪಿಗೆ ಗತಿ ಇಲ್ಲ, ಅವರಿಗೆ ಮತಿ ಇಲ್ಲ. ಮೇಕಪ್ ನೋಡಿ ಹೋಗಿಬಿಟ್ಟರು, ಹಾಸನ, ಮಂಡ್ಯದಲ್ಲಿ ಏನೂ ಸಿಗಲಿಲ್ಲ. ಬಿಜೆಪಿಯವರು ಮಂಚ ಮುರಿದವರೆ, ಜೆಡಿಎಸ್- ಬಿಜೆಪಿ ಇಬ್ಬರು ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳು ಎಂದು ವ್ಯಂಗ್ಯವಾಡಿದ್ದಾರೆ. ನಾನು ಕೇಶವಕೃಪದಲ್ಲಿ ಗೌರವ ಸಿಗಲ್ಲ, ಬಸವಕೃಪದಲ್ಲಿರೋದು ಒಳ್ಳೆದು ಎಂದು ದೇವೆಗೌಡರಿಗೆ ಹೇಳಿದ್ದೆ. ಅದರಂತೆ ದೇವೆಗೌಡರು ಚುನಾವಣೆಯಾದ ಕೆಲವೇ ದಿನಗಳಲ್ಲಿ ಬಿಜೆಪಿಯವರು ಸಹಾಯ ಮಾಡಲಿಲ್ಲ ಎಂದು ಹೇಳಿದ್ದಾರೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications