ಹಂಪಿ, ಕೆಆರ್ಎಸ್ನಲ್ಲಿ ಜುಲೈ 1ರಿಂದ ವೈಫೈ ಸೇವೆ
ಬೆಂಗಳೂರು, ಜೂ. 29 : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ವೈಫೈ ಹಾಟ್ ಸ್ಪಾಟ್ಗಳನ್ನು ಆರಂಭಿಸಲು ಬಿಎಸ್ಎನ್ಎಲ್ ನಿರ್ಧರಿಸಿದೆ. ಹಂಪಿ, ಕೆಆರ್ಎಸ್, ಲಾಲ್ ಬಾಗ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಈ ಜುಲೈ 1ರಿಂದ ವೈಫೈ ಸೇವೆ ಆರಂಭವಾಗಿದೆ.
ಕರ್ನಾಟಕ ದೂರ ಸಂಪರ್ಕ ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕ ಪಿ.ನಾಗರಾಜ್ ಈ ಕುರಿತು ಮಾಹಿತಿ ನೀಡಿದ್ದಾರೆ. ಮೊದಲ 30 ನಿಮಿಷ ಗ್ರಾಹಕರಿಗೆ ಉಚಿತವಾಗಿ ವೈಫೈ ಸೇವೆ ಲಭ್ಯವಾಗಲಿದೆ. ನಂತರ ವೈಫೈ ಬಳಕೆ ಮಾಡಿದರೆ ಶುಲ್ಕ ಪಾವತಿ ಮಾಡಬೇಕಾಗುತ್ತದೆ. [ಇನ್ಮುಂದೆ ದೇಶದೆಲ್ಲೆಡೆ ವೈಫೈ ಜಾಲ]

ಬೆಂಗಳೂರಿನ ಎಂಜಿ ರಸ್ತೆಯ 1 ಎಂಜಿ ಮಾಲ್, ಕಬ್ಬನ್ ಪಾರ್ಕ್, ಲಾಲ್ ಬಾಗ್, ಕೆಆರ್ಎಸ್ನ ಬೃಂದಾವನ ಗಾರ್ಡ್ನ್ ಮತ್ತು ಹಂಪಿಯಲ್ಲಿ ವೈಫೈ ಜೋನ್ ಸ್ಥಾಪಿಸಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದೆ. ಜುಲೈ 1ರಿಂದ ವೈಫೈ ಸೇವೆ ಆರಂಭವಾಗಲಿದೆ. [ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರದಲ್ಲೂ ಉಚಿತ ವೈ ಫೈ]
ಮೊದಲ 30 ನಿಮಿಷ ಉಚಿತ : ಈ ಸ್ಥಳಗಳಲ್ಲಿ ಮೊದಲ 30 ನಿಮಿಷ ಉಚಿತವಾಗಿ ವೈಫೈ ಬಳಕೆ ಮಾಡಬಹುದಾಗಿದೆ. ನಂತರ 30 ನಿಮಿಷಕ್ಕೆ 30 ರೂ. ಪಾವತಿ ಮಾಡಬೇಕು. ನಂತರದ 60 ನಿಮಿಷಕ್ಕೆ 50 ರೂ. 120 ನಿಮಿಷಕ್ಕೆ
90 ಮತ್ತು ಒಂದು ದಿನಕ್ಕೆ 150 ರೂ. ಪಾವತಿ ಮಾಡಬೇಕಾಗಿದೆ.
ಹೈಸ್ಪೀಡ್ ಇಂಟರ್ನೆಟ್ ಸಂಪರ್ಕ ಕಲ್ಪಿಸಲು ರಾಜ್ಯದ 1,284 ಗ್ರಾಮ ಪಂಚಾಯಿತಿಗಳಲ್ಲಿ ನ್ಯಾಷನಲ್ ಆಪ್ಟಿಕಲ್ ಫೈಬರ್ ಜಾಲವನ್ನು ಆಳವಡಿಸಲಾಗುತ್ತಿದೆ. 30 ಜಿಲ್ಲೆಗಳ 330 ಸ್ಥಳಗಳಲ್ಲಿ ವೈಫೈ ಹಾಟ್ ಸ್ಪಾಟ್ಗಳನ್ನು ಸ್ಥಾಪಿಸುವ ಗುರಿಯನ್ನು ಬಿಎಸ್ಎನ್ಎಲ್ ಹೊಂದಿದೆ ಎಂದು ನಾಗರಾಜ್ ತಿಳಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications