ಪತಿ ರಾಜೀನಾಮೆ ಪತ್ನಿ ವಾಪಸ್ ಪಡೆಯಲಾಗದು; ಹೈಕೋರ್ಟ್
ಬೆಂಗಳೂರು, ನವೆಂಬರ್ 07; ಉದ್ಯೋಗಿಯು ಉದ್ಯೋಗದಾತರಿಗೆ ಸಲ್ಲಿಸಿದ ರಾಜೀನಾಮೆ ಪತ್ರವನ್ನು ಆತನ ಪತ್ನಿ ಅಥವಾ ಮಕ್ಕಳು ಹಿಂಪಡೆಯಲು ಸಾಧ್ಯವಿಲ್ಲ, ಕಾನೂನಿನಲ್ಲಿ ಅದಕ್ಕೆ ಅವಕಾಶವೂ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಪತ್ನಿಯ ಮನವಿ ಮೇರೆಗೆ ತನ್ನ ರಾಜೀನಾಮೆ ಪತ್ರವನ್ನು ಅಂಗೀಕರಿಸದಿರಲು ಉದ್ಯೋಗದಾತ ಸಂಸ್ಥೆ ಕೈಗೊಂಡಿದ್ದ ನಿರ್ಣಯವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಮಂಡ್ಯ ಜಿಲ್ಲೆಯ ಮದ್ದೂರಿನ ಡಿ. ವೆಂಕಟೇಶ್ ಎಂಬಾತ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ನ್ಯಾಯಾಲಯದ ಆದೇಶವೇನು?; ಇದೀಗ ಮೇಲ್ಮನವಿಯನ್ನು ವಜಾಗೊಳಿಸಿರುವ ವಿಭಾಗೀಯ ಪೀಠ, ಉದ್ಯೋಗಿಯೇ ರಾಜೀನಾಮೆ ಪತ್ರ ಹಿಂಪಡೆಯಬೇಕು. ಹಿಂಪಡೆಯುವ ಮನವಿಯು ಉದ್ಯೋಗಿಯಿಂದಲೇ ಸಲ್ಲಿಕೆಯಾಗಬೇಕು. ಈ ಪ್ರಕರಣದಲ್ಲಿ ನೌಕರನ ರಾಜೀನಾಮೆಯನ್ನು ಹಿಂತೆಗೆದುಕೊಳ್ಳಲು ಆತನ ಪತ್ನಿ ಕೋರಿದ್ದಾರೆ ಎಂದು ನ್ಯಾಯಾಲಯ ಆದೇಶಿಸಿದೆ.
ಉದ್ಯೋಗಿಯ ಪತ್ನಿಯ ಅಂತಹ ಹಕ್ಕು ಹೊಂದಿರುವುದನ್ನು ದೃಢಿಕರಿಸುವ ಯಾವುದೇ ನಿಯಮವನ್ನು ನ್ಯಾಯಾಲಯದ ಗಮನಕ್ಕೆ ತಂದಿಲ್ಲ. ಇಂತಹ ಪರಿಕಲ್ಪನೆಯು ಸೇವಾ ಕಾನೂನಿಗೆ ವಿರುದ್ಧವಾಗಿದೆ ಎಂದು ಆದೇಶಿಸಿ, ಏಕಸದಸ್ಯ ಪೀಠದ ತೀರ್ಪನ್ನು ಪುರಸ್ಕರಿಸಿದೆ.
ಸ್ವತಃ ನೌಕರನೇ ಉದ್ಯೋಗದಲ್ಲಿ ಇರಲು ಸಿದ್ಧರಿಲ್ಲದೆ ರಾಜೀನಾಮೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಆತನ ಪತ್ನಿ ಅಥವಾ ಮಕ್ಕಳು ಉದ್ಯೋಗಿ ಸೇವೆಯಲ್ಲಿ ಮುಂದುವರಿಯಲು ಹೇಗೆ ಕಾರಣವಾಗುತ್ತಾರೆ. ಇದು ಬಾಯಾರಿಕೆಯಿಲ್ಲದಿದ್ದರೂ ಇಷ್ಟವಿಲ್ಲದ ಕುದುರೆಯನ್ನು ನೀರು ಕುಡಿಯಲು ನದಿಗೆ ಎಳೆದಂತಾಗುತ್ತದೆ ಎಂದು ಕೋರ್ಟ್ ಹೇಳಿದೆ.
ರಾಜೀನಾಮೆಯು ಉದ್ಯೋಗಿಯ ಸ್ವಯಂಪ್ರೇರಿತ ಕ್ರಿಯೆಯಾಗಿದೆ. ಅದನ್ನು ಸಲ್ಲಿಸುವ ಮೂಲಕ ಆತ ಸೇವೆಯನ್ನು ತೊರೆಯಲು ಪ್ರಯತ್ನಿಸುತ್ತಾನೆ. ಹೀಗಾಗಿ, ಉದ್ಯೋಗದಾತ ಸಂಸ್ಥೆಯು ಅಂಗೀಕರಿಸುವ ಮೊದಲೇ ರಾಜೀನಾಮೆಯನ್ನು ಸ್ವತಃ ಉದ್ಯೋಗಿ ಹಿಂಪಡೆಯಬೇಕು. ಅದು ಹೊರತುಪಡಿಸಿ ಪತ್ನಿ ಮತ್ತು ಮಕ್ಕಳು ಉದ್ಯೋಗಿಯ ಪರವಾಗಿ ರಾಜೀನಾಮೆ ಹಿಂಪಡೆಯಲು ಅವಕಾಶವಿಲ್ಲ ಎಂದು ಪೀಠ ಹೇಳಿದೆ.
ಪ್ರಕರಣದ ಹಿನ್ನೆಲೆ?; ಮಂಡ್ಯದ ಮದ್ದೂರಿನ ಡಿ. ವೆಂಕಟೇಶ್ ಎಂಬುವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದಲ್ಲಿ ಉದ್ಯೋಗಿಯಾಗಿದ್ದರು. ಅವರು 2021ರ ನ.11ರಂದು ತಮ್ಮ ಉದ್ಯೋಗಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಅಂಗೀಕರಿಸುವ ನಿರ್ಣಯವನ್ನು ಸಂಘವು ಕೈಗೊಂಡಿತ್ತು. ಬಳಿಕ ಉದ್ಯೋಗಿಯ ಪತ್ನಿ ರಾಜೀನಾಮೆ ಪತ್ರ ಹಿಂಪಡೆಯಲು ಅನುಮತಿ ಕೋರಿ ಉದ್ಯೋಗ ಸಂಸ್ಥೆಗೆ ಪತ್ರ ಸಲ್ಲಿಸಿದ್ದರು. ಅದನ್ನು ಆಧರಿಸಿ ರಾಜೀನಾಮೆ ಅಂಗೀಕರಿಸದಿರಲು ಸಂಘವು ನಿರ್ಣಯ ತೆಗೆದುಕೊಂಡಿತ್ತು.
ಅದನ್ನು ಪ್ರಶ್ನಿಸಿ ಸಂಘದ ಮತ್ತೋರ್ವ ಉದ್ಯೋಗಿ ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯಪೀಠ, ವೆಂಕಟೇಶ್ ಅವರ ರಾಜೀನಾಮೆ ಅಂಗೀಕರಿಸದಿರಲು ಸಂಘ ಕೈಗೊಂಡಿದ್ದ ನಿರ್ಣಯವನ್ನು ರದ್ದುಪಡಿಸಿ 2022ರ ಅ.13ರಂದು ಆದೇಶಿಸಿತ್ತು. ಆ ಆದೇಶ ರದ್ದು ಕೋರಿ ವೆಂಕಟೇಶ್ ವಿಭಾಗೀಯ ಪೀಠದ ಮೊರೆ ಹೋಗಿದ್ದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications