ಮಡಿಕೇರಿಯಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ

ಮಡಿಕೇರಿ, ಮಾರ್ಚ್ 24 : ಕಾಡಾನೆ ದಾಳಿಗೆ ಮಹಿಳೆಯೊಬ್ಬಳು ಬಲಿಯಾಗಿರುವ ಘಟನೆ ಸೋಮವಾಪೇಟೆ ತಾಲೂಕಿನ ಚೆಟ್ಟಳ್ಳಿ ಸಮೀಪದ ಮತ್ತಿಕಾಡುವಿನಲ್ಲಿ ನಡೆದಿದೆ.

ಪೊನ್ನತಮೊಟ್ಟೆಯ ನಿವಾಸಿ ಆಮೀನಾ (50) ಆನೆದಾಳಿಗೆ ಬಲಿಯಾದ ದುರ್ದೈವಿ. ಇವರು ಚೆಟ್ಟಳ್ಳಿ ಸಮೀಪದ ಗ್ರೀನ್‌ಲ್ಯಾಂಡ್ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದರು. [ಆನೆಯನ್ನು ತುಂಡರಿಸಿ ಬಾವಿಗೆ ಹಾಕಿದ ರೈತ]

Wild elephant kills woman in Madikeri

ತನ್ನ ನಾಲ್ವರು ಸಹೋದ್ಯೋಗಿ ಮಹಿಳೆಯರೊಂದಿಗೆ ತೋಟದ ಕೆಲಸಕ್ಕೆ ಟಾಟಾ ಕಾಫಿತೋಟದ ಮೂಲಕ ದೇವರಕಾಡಿನಲ್ಲಿ ನಡೆದು ಹೋಗುತ್ತಿದ್ದ ವೇಳೆ ಕಾಡಾನೆ ಇವರ ಮೇಲೆ ದಾಳಿ ಮಾಡಿದೆ. ಮೂವರು ಮಹಿಳೆಯರು ಓಡಿ ಹೋದರಾದರೂ ಆಮೀನಾಗೆ ಓಡಲು ಸಾಧ್ಯವಾಗದ ಕಾರಣ ಆನೆ ಅವರ ಮೇಲೆ ದಾಳಿ ನಡೆಸಿದೆ. ಪರಿಣಾಮ ತಲೆ ಒಡೆದು ಮೆದುಳು ಹೊರಬಂದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆನೆ ಸ್ಥಳದಿಂದ ತೆರಳಿದ ಬಳಿಕ ಶವವನ್ನು ತರಲಾಗಿದೆ. ಶವವನ್ನು ಆಟೋದಲ್ಲಿ ಚೆಟ್ಟಳ್ಳಿಯ ಆಸ್ಪತ್ರೆಗೆ ಸಾಗಿಸುತ್ತಿದ್ದಂತೆ ಆಮೀನಾಳ ಶವವನ್ನು ನೋಡಲು ಜನತೆ ಮುಗಿಬಿದ್ದರು. [ಪ್ರಾಣಿಗಳ ಮೂತ್ರ ವಾಸನೆ ಬಂದೆಡೆ ಆನೆಗಳು ಸುಳಿಯುವುದಿಲ್ಲವಂತೆ!]

Wild elephant kills woman in Madikeri

ಸುದ್ದಿ ತಿಳಿದ ತಕ್ಷಣ ಕುಶಾಲನಗರ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಡಿಎಫ್‌ಓ ಬರಬೇಕೆಂದು ಸಾರ್ವಜನಿಕರು ಪಟ್ಟು ಹಿಡಿದು ಅರ್ಧಗಂಟೆಕಾಲ ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. ಮೃತರ ಕುಟುಂಬಕ್ಕೆ 5 ಲಕ್ಷ ರು.ಗಳ ಪರಿಹಾರ ಘೋಷಿಸಿ 1 ಲಕ್ಷ ರು. ಚೆಕ್ಕನ್ನು ಸ್ಥಳದಲ್ಲೇ ನೀಡಲಾಗಿದೆ.

ಅರಣ್ಯದಲ್ಲಿ ಬಿಸಿಲಿಗೆ ಆಹಾರ ನೀರು ಸಮಸ್ಯೆ ಉಂಟಾಗಿರುವ ಪರಿಣಾಮ ಆನೆಗಳು ಸೇರಿದಂತೆ ಕಾಡುಪ್ರಾಣಿಗಳು ನಾಡಿಗೆ ಬರುತ್ತಿದ್ದು ಕಾಡಂಚಿನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+