Menstrual Leave: ಇನ್ಮುಂದೆ ವಿದ್ಯಾರ್ಥಿನಿಯರಿಗೂ ಸಿಗಲಿದೆಯಾ ಋತುಚಕ್ರ ರಜೆ?
ಬೆಂಗಳೂರು: ಕರ್ನಾಟಕದಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ನೀಡುವ ಬಗ್ಗೆ ಕರ್ನಾಟಕ ಸರ್ಕಾರ ಚಿಂತನೆ ನಡೆಸುತ್ತಿದೆ. ಇತ್ತೀಚೆಗೆ, ಶಿಕ್ಷಕಿಯರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಲಾಗಿದೆ. ವಿದ್ಯಾರ್ಥಿನಿಯರು ಕೂಡ ರಜೆಗಾಗಿ ಒತ್ತಾಯಿಸುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಪ್ರಸ್ತಾವನೆಗಳು ಬಂದಿವೆ, ಆದರೆ ಅಂತಿಮ ನಿರ್ಧಾರಕ್ಕಾಗಿ ಕಾಯಬೇಕಾಗಿದೆ.
ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ನೀಡುವ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ಮಾತನಾಡಿ, ಕಾಲೇಜು ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀರ್ಮಾನ ಅಂತಿಮ. ಈ ಬಗ್ಗೆ ಸದ್ಯದವರೆಗೆ ನಮ್ಮ ಇಲಾಖೆಗಳಿಗೆ ಯಾವುದೇ ಸೂಚನೆ ಬಂದಿಲ್ಲ. ಬಂದರೆ ಜಾರಿಗೊಳಿಸಲಾಗುವುದು ಎಂದುಹೇಳಿದರು.

ಋತುಚಕ್ರ ರಜೆ ನೀಡುವ ಬಗ್ಗೆ ಸೂಚನೆ ಬಂದರೆ ಬೋರ್ಡ್ ಪರೀಕ್ಷೆ ಬರೆಯಲು ಶೇ.75 ಹಾಜರಾತಿ ಕಡ್ಡಾಯ ನಿಯಮದ ಒಳಗೆ ಈ ರಜೆಯನ್ನು ತರಬೇಕೇ, ಬೇಡವೇ ಎಂಬ ಬಗ್ಗೆ ಚರ್ಚಿಸಬೇಕಾಗುತ್ತದೆ. ಹಾಗೆಯೇ ಸೆಮಿಸ್ಟರ್ ಒಂದಕ್ಕೆ 90 ದಿನಗಳ ತರಗತಿ ನಡೆಯುವುದು ಕಡ್ಡಾಯ ಎಂಬ ನಿಯಮವಿದೆ. ಇದೆಲ್ಲವನ್ನು ಪರಿಶೀಲಿಸಿ ನಿರ್ಧರಿಸಬೇಕಾಗುತ್ತದೆ. ಸದ್ಯದ ವರೆಗೆ ಸರ್ಕಾರದಿಂದ ಇಲಾಖೆಗಳಿಗೆ ಯಾವುದೇ ಮಾಹಿತಿ ಬಂದಿಲ್ಲ. ಬಂದ ಬಳಿಕ ಎಲ್ಲವನ್ನೂ ಪರಿಶಿಲಿಸಲಾಗುವುದು ಎಂದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.
ಇನ್ನೂ ಈ ಕುರಿತು ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರು ಮಾತನಾಡಿ, ಕಾಲೇಜುಗಳಲ್ಲಿ ಹೆಣ್ಣುಮಕ್ಕಳಿಗೆ ಋತುಚಕ್ರ ರಜೆ ನೀಡಲು ಸಿಎಂ ಸೂಚನೆ ನೀಡಿದ್ರೆ ರಜೆ ಘೋಷಣೆ ಮಾಡಲಾಗುತ್ತದೆ. ಕಾಲೇಜುಗಳಲ್ಲಿ ಹೆಣ್ಣುಮಕ್ಕಳಿಗೆ ರಜೆ ಕೊಡಬೇಕು ಅಂದರೆ ಕೊಡ್ತೀವಿ. ಸಿಎಂ ಅವರು ಈ ಬಗ್ಗೆ ಹೇಳಿದ್ರೆ ಅದೇ ಅಂತಿಮ. ಕಾಲೇಜು ವಿದ್ಯಾರ್ಥಿನಿಯಯರು, ವಿವಿ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ಕೊಡೋ ಬಗ್ಗೆ ಸಿಎಂ ಅವರು ಸೂಚನೆ ಕೊಟ್ಟರೆ ಮಾಡ್ತೀವಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶವೇ ಅಂತಿಮ ಎಂದು ಹೇಳಿದರು.
ವಿದ್ಯಾರ್ಥಿನಿಯರಿಗೂ ಮುಟ್ಟಿನ ರಜೆಗೆ ಶಿಫಾರಸು
ಮಹಿಳಾ ನೌಕರರಿಗೆ ತಿಂಗಳಲ್ಲಿ ಒಂದು ದಿನ ಮುಟ್ಟಿನ ರಜೆಯ ಸೌಲಭ್ಯ ಕಲ್ಪಿಸಿದ ನೀತಿಯನ್ನು ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಶೀಘ್ರ ಶಿಫಾರಸು ಮಾಡಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಅಪರ್ಣಾ ಎಂ.ಕೊಳ್ಳ ಭರವಸೆ ನೀಡಿದರು. ವಿದ್ಯಾರ್ಥಿನಿಯರು ಮುಟ್ಟಿನ ರಜೆಯ ಸೌಲಭ್ಯ ಕೇಳಿದ್ದು ಸ್ವಾಗತಾರ್ಹ. ಉತ್ತಮ ವಿಚಾರವನ್ನು ಬಾಲಕಿ ಮುಂದಿಟ್ಟಿದ್ದಾಳೆ. ಇದು ಸರ್ಕಾರದ ಹಂತದಲ್ಲಿ ತೀರ್ಮಾನ ಆಗಬೇಕಿದೆ. ಈ ಕುರಿತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರ್ಕಾರಕ್ಕೆ ಕೂಡಲೇ ಶಿಫಾರಸು ಮಾಡಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಬಾಲ್ಯವಿವಾಹ ಹೆಚ್ಚಾಗಿರುವುದನ್ನು ಅಂಕಿ-ಅಂಶಗಳು ಖಚಿತಪಡಿಸಿವೆ. ಫೆಬ್ರುವರಿ, ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಇಂತಹ ವಿಚಾರಗಳು ಗಮನಕ್ಕೆ ಬಂದ ಕೂಡಲೇ ಮಕ್ಕಳ ಸಹಾಯವಾಣಿಗೆ ದೂರು ನೀಡಿ ಎಂದು ಸಲಹೆ ನೀಡಿದರು. ಪ್ರೀತಿ, ಪ್ರೇಮದ ನೆಪದಲ್ಲಿ ಲೈಂಗಿಕ ದೌರ್ಜನ್ಯ ಹೆಚ್ಚಾಗಿದೆ. ಪೋಟ್ರೊ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಪ್ರೀತಿ-ಪ್ರೇಮಕ್ಕೆ ಸಂಬಂಧಿಸಿದವು ಹೆಚ್ಚಾಗಿವೆ. ಈ ಬಗ್ಗೆ ಬಾಲಕ-ಬಾಲಕಿಯರು ಎಚ್ಚರಿಕೆಯಿಂದ ಇರುವ ಅಗತ್ಯವಿದೆ ಎಂದು ಹೇಳಿದರು.
-
ಕನ್ನಡಿಗರ ಮುಕ್ತಜ್ಞಾನದ ತಾಣ ‘ಕಣಜ’ಕ್ಕೆ ಸಿಕ್ಕಿಬಿಟ್ಟಿತೆ ಮುಕ್ತಿ? 3 ತಿಂಗಳಿಂದ ಕಣ್ಮರೆಯಾದ ವೆಬ್ಸೈಟ್ -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು












Click it and Unblock the Notifications