ಮಗನಿಗಾಗಿ ರಾಜಕೀಯ ನಿವೃತ್ತಿ ಪಡೆಯುತ್ತಾರಾ ಡಾ. ಹೆಚ್. ಸಿ ಮಹದೇವಪ್ಪ?
Recommended Video

ಮೈಸೂರು, ಮಾರ್ಚ್ 20 : ಪ್ರತಿಷ್ಠಿತ ಕ್ಷೇತ್ರ ಮೈಸೂರು ಚುನಾವಣಾ ಕಣ ತಂದೆ- ಮಕ್ಕಳ ಸೆಣೆಸಾಟಕ್ಕೆ ಸೆಡ್ಡು ಹೊಡೆದಂತಿದೆ. ಇದಕ್ಕೆ ಪೂರಕವಾಗಿರುವುದು ಟಿ. ನರಸೀಪುರ. ಪಕ್ಷದಿಂದ ಈಗಾಗಲೇ ಸ್ಪರ್ಧಿಸಿ ಗೆದ್ದಿರುವ ಹೆಚ್. ಸಿ ಮಹದೇವಪ್ಪ ಹಾಗೂ ಪುತ್ರ ಇಬ್ಬರು ಸಹ ಒಂದೇ ಕ್ಷೇತ್ರದಿಂದ ಸ್ಪರ್ಧಿಸಲು ಹೈ ಕಮಾಂಡ್ ಗೆ ಈಗಾಗಲೇ ಅರ್ಜಿ ಗುಜರಾಯಿಸಿದ್ದಾರೆ. ಯಾರಿಗೆ ಪಕ್ಷ ಸ್ಪರ್ಧೆಗೆ ಅವಕಾಶ ನೀಡಲಿದೆ ಎಂಬುದು ಮಾತ್ರ ಯಕ್ಷ ಪ್ರಶ್ನೆ
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ನಾನು ಸಿ.ವಿ ರಾಮನ್ ನಗರದಿಂದ ನಿಲ್ಲುವುದಿಲ್ಲ ಎಂದ ಮಹದೇವಪ್ಪ
ನಾಲ್ಕು ದಶಕಗಳ ಕಾಲ ರಾಜಕೀಯ ಬದುಕು ನೀಡಿದ ಮೈಸೂರು ಜಿಲ್ಲೆಯ ಜನರನ್ನು ಬಿಟ್ಟು ಹೋಗಲು ಮನಸ್ಸಿಲ್ಲ. ಬೆಂಗಳೂರು ನಗರದ ಸಿ.ವಿ.ರಾಮನ್ ಕ್ಷೇತ್ರದಿಂದ ಸ್ಪರ್ಧಿಸುವ ಯಾವುದೇ ಇರಾದೆ ಇಲ್ಲ. ಮುಂಬರುವ ಚುನಾವಣೆಯಲ್ಲಿ ಕಾರ್ಯಕರ್ತರ ಅಭಿಲಾಷೆ ಮತ್ತು ಮುಖಂಡರ ಒತ್ತಾಯದಂತೆ ಟಿ.ನರಸೀಪುರ ಕ್ಷೇತ್ರದಲ್ಲಿ ಪುತ್ರ ಸುನಿಲ್ ಬೋಸ್ ಸ್ಪರ್ಧೆಗೆ ಅವಕಾಶ ಕಲ್ಪಿಸುತ್ತೇನೆ ಎಂದು ಲೋಕೋಪಯೋಗಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ನಿನ್ನೆ ಟಿ. ನರಸೀಪುರದ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಮೀಸಲು ಕ್ಷೇತ್ರಗಳು ಸೇರಿ 16 ಪ್ರಮುಖ ಮೀಸಲು ಕ್ಷೇತ್ರಗಳಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸಲು ಆ ಭಾಗದ ಮುಖಂಡರು ಒತ್ತಡ ಹೇರುತ್ತಿದ್ದರಾದರೂ ಹಣವಿಲ್ಲದ ಸಂದರ್ಭದಲ್ಲಿ ಹಣ ಮತ್ತು ಅಧಿಕಾರ ಎರಡನ್ನೂ ನೀಡಿದ ಜಿಲ್ಲೆಯ ಜನರನ್ನು ಬಿಟ್ಟು ಹೋಗಲು ಮನಸ್ಸಿಲ್ಲ. ಹೀಗಾಗಿ ಸ್ಪರ್ಧೆಗೆ ಯಾವುದೇ ಕ್ಷೇತ್ರವನ್ನು ಇನ್ನೂ ಆಯ್ಕೆ ಮಾಡಿಕೊಂಡಿಲ್ಲ ಎಂದಿದ್ದಾರೆ.

ಪುತ್ರ ಸ್ಪರ್ಧಿಸಲಿದ್ದಾರೆ!
ಮುಂದಿನ ಅವಧಿಗೂ ಕಾಂಗ್ರೆಸ್ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ. ಮತ್ತೆ ಸಚಿವನಾಗಲು ಚುನಾವಣೆಯಲ್ಲಿ ಗೆಲ್ಲಲೆಬೇಕೆಂದೇನೂ ಇಲ್ಲ. ಮೇಲ್ಮನೆ ಸದಸ್ಯನಾಗಿ ಮತ್ತೆ ಸಚಿವನಾಗುತ್ತೇನೆ. ಪ್ರಸಕ್ತ ಚುನಾವಣೆಯಲ್ಲಿ ಸುನಿಲ್ ಬೋಸ್ ಅಭ್ಯರ್ಥಿಯಾಗಬೇಕೆಂದು ಕ್ಷೇತ್ರದ ಜನ ಅಪೇಕ್ಷೆಪಟ್ಟಿರುವುದರಿಂದ ನರಸೀಪುರದಲ್ಲಿ ಕಣಕ್ಕಿಳಿಯಲಿದ್ದಾನೆ. ಆತನನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರು ಮತ್ತು ಮುಖಂಡರ ಮೇಲಿದೆ. ಚುನಾವಣೆಗೆ ಸ್ಪರ್ಧಿಸದಿರುವ ಕಾರಣ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರೊಟ್ಟಿಗೆ ದುಡಿಯುತ್ತೇನೆ. ಸಿಎಂ ಸಿದ್ದರಾಮಯ್ಯ ನಾಯಕತ್ವವನ್ನು ಬಲಪಡಿಸುತ್ತೇನೆ ಎಂದರು.
ಅಪ್ಪನಿಗೆ ಟಿಕೇಟ್ ಕೊಟ್ಟರೂ ತೊಂದರೆಯಿಲ್ಲ ಎಂದ ಸುನೀಲ್ ಬೋಸ್
ಇತ್ತ ಈ ಕುರಿತು ಮಾಹಿತಿ ನೀಡಿದ ಡಾ. ಹೆಚ್. ಸಿ ಮಹದೇವಪ್ಪ ಪುತ್ರ ಸುನೀಲ್ ಬೋಸ್, ನಾನು ಕೂಡ ಟಿಕೇಟ್ ಆಕಾಂಕ್ಷಿ. ತಂದೆ ಚುನಾವಣೆಗೆ ನಿಲ್ಲದಿದ್ದರೆ ನಾನು ಚುನಾವಣೆಗೆ ನಿಲ್ಲುತ್ತೇನೆ. ಟಿ. ನರಸೀಪುರದಿಂದ ನಾನು ಅರ್ಜಿ ಹಾಕಿದ್ದೇನೆ. ಕಾಂಗ್ರೆಸ್ ಹೈಕಮಾಂಡ್ ಗೆ ಅರ್ಜಿ ಹಾಕಿದ್ದೇನೆ. ನನ್ನ ತಂದೆಯ ಹೆಸರಿನಲ್ಲೂ ಅರ್ಜಿ ಹಾಕಲಾಗಿದೆ. ಹೈಕಮಾಂಡ್ ಯಾರನ್ನು ನಿಲ್ಲಿಸುತ್ತಾರೆ ಅವರೇ ಸ್ಪರ್ಧೆ ಮಾಡಲಿದ್ದಾರೆ. ತಂದೆ ನಿಲ್ಲುವುದಿಲ್ಲ ಎಂದರೆ ನಾನು ಖಂಡಿತ ಸ್ಪರ್ಧೆ ಮಾಡುತ್ತೇನೆ. ನಾನು ಬೆಂಗಳೂರಿನಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣೆಗೆ ನಿಲ್ಲುವುದಾದರೆ, ಟಿ. ನರಸಿಪುರದದಲ್ಲೇ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications