ಜಯಲಲಿತಾ ಮೇಲ್ಮನವಿ ತೀರ್ಪು ಏ.30ಕ್ಕೆ?
ಬೆಂಗಳೂರು, ಏ. 27 : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ವಿಶೇಷ ನ್ಯಾಯಪೀಠ ಏ.30ರಂದು ಪ್ರಕಟಿಸುವ ಸಾಧ್ಯತೆ ಇದೆ. ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಈಗಾಗಲೇ ಪೂರ್ಣಗೊಳಿಸಿದ್ದಾರೆ.
ಮೇ 1ರಿಂದ ಒಂದು ತಿಂಗಳ ಕಾಲ ಹೈಕೋರ್ಟ್ಗೆ ಬೇಸಿಗೆ ರಜೆ ಇದೆ. ಆದ್ದರಿಂದ, ಏ.30ರಂದು ತೀರ್ಪು ಪ್ರಕಟವಾಗಬಹುದು ಎಂದು ಅಂದಾಜಿಸಲಾಗಿದೆ. ಈಗಾಗಲೇ ಪ್ರಕರಣದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಪ್ರಕಟಿಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. [ಜಯಲಲಿತಾ ಕೇಸ್ ತೀರ್ಪು ಪ್ರಕಟಿಸಲು ಸುಪ್ರೀಂ ಒಪ್ಪಿಗೆ]

ಏ.15ರಂದು ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಪ್ರಕರಣದ ತೀರ್ಪು ನೀಡಲು ಇನ್ನೂ 15 ದಿನಗಳ ಕಾಲಾವಕಾಶ ಬೇಕು ಎಂದು ಹೇಳಿದ್ದರು. ಪ್ರಕರಣದ ವಕೀಲರಾಗಿರುವವರು ಏ.30ರಂದು ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ ಒನ್ ಇಂಡಿಯಾಕ್ಕೆ ತಿಳಿಸಿದ್ದಾರೆ. [ಆಸ್ತಿಗಳಿಕೆ ಪ್ರಕರಣ, ಜಯಾ ತೀರ್ಪು ಕಾಯ್ದಿರಿಸಿದ ಕೋರ್ಟ್]
ಅಕ್ರಮ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಮುಖಂಡ ಅನ್ಬಳಗನ್ ಅವರು ನೀಡಿರುವ ಸಾಕ್ಷಿ ಹಾಗೂ ಇತ್ತೀಚಿನ ಮನವಿಯನ್ನು ಪರಿಗಣಿಸಿ ತೀರ್ಪು ಪ್ರಕಟಿಸಬಹುದು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. 80 ಪುಟಗಳ ದಾಖಲೆಗಳನ್ನು ಅನ್ಬಳಗನ್ ಅವರು ಸೋಮವಾರ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಸಲ್ಲಿಸಿದ್ದಾರೆ.
ಮಂಗಳವಾರ ಸರ್ಕಾರದ ದಾಖಲೆ ಸಲ್ಲಿಕೆ : ಈ ಪ್ರಕರಣದ ಕುರಿತು ಕರ್ನಾಟಕ ಸರ್ಕಾರ ಹೈಕೋರ್ಟ್ಗೆ ದಾಖಲೆಗಳನ್ನು ಸಲ್ಲಿಸಬೇಕಾಗಿದೆ. ಸುಪ್ರೀಂಕೋರ್ಟ್ ಆದೇಶದ ಅನ್ವಯ ಮಂಗಳವಾರ ಸರ್ಕಾರ ದಾಖಲೆಗಳನ್ನು ಸಲ್ಲಿಕೆ ಮಾಡಲಿದೆ. ಇದನ್ನು ಪರಿಶೀಲನೆ ಮಾಡಿದ ಬಳಿಕ ನ್ಯಾಯಮೂರ್ತಿಗಳು ಏ.30ರಂದು ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.
ಏನಿದು ತೀರ್ಪು? : 2014ರ ಸೆ. 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪು ನೀಡಿದ್ದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಡಿ.ಕುನ್ಹ ಅವರು, ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ತಪ್ಪಿತಸ್ಥರು ಎಂದು ಆದೇಶಿದ್ದರು.
ಜಯಲಲಿತಾ ಅವರಿಗೆ 100 ಕೋಟಿ ಹಾಗೂ ಇತರರಿಗೆ ತಲಾ 10 ಕೋಟಿ ದಂಡ ಮತ್ತು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಜಯಲಲಿತಾ ಮತ್ತು ಇತರ ಮೂವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿ ವಿಶೇಷ ಈ ತೀರ್ಪನ್ನು ಪ್ರಶ್ನಿಸಿದ್ದರು, ಜಾಮೀನು ನೀಡುವಂತೆ ಮನವಿ ಮಾಡಿದ್ದರು.
ಸುಪ್ರೀಂಕೋರ್ಟ್ ಎಲ್ಲರಿಗೂ ಜಾಮೀನು ನೀಡಿತ್ತು ಮತ್ತು ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನಡೆಸಲು ವಿಶೇಷ ಪೀಠವನ್ನು ರಚನೆ ಮಾಡುವಂತೆ ಕರ್ನಾಟಕ ಹೈಕೋರ್ಟ್ಗೆ ಸೂಚಿಸಿತ್ತು. ಆದರಂತೆ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರ ಏಕ ಸದಸ್ಯ ಪೀಠ ರಚನೆಯಾಗಿತ್ತು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications