ತೃತೀಯ ರಂಗಕ್ಕೆ ಬಲ ತುಂಬಿದ ಕರ್ನಾಟಕದಲ್ಲಿ ಬಿಜೆಪಿ ಸೋಲು
ಕರ್ನಾಟಕ ರಾಜಕೀಯದಲ್ಲಿ ಬಿಜೆಪಿಗೆ ಸ್ಪಷ್ಟ ಹಿನ್ನಡೆ ಆಗಿದೆ. ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ ಕೂಡ ಬಿಜೆಪಿ ಅಧಿಕಾರದಿಂದ ದೂರವೇ ಉಳಿಯಲಿದೆ. ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಸರ್ಕಾರ ರಚಿಸಲಿದೆ.
ಚುನಾವಣೆ ಸಂದರ್ಭದಲ್ಲಿ ಅಮಿತ್ ಶಾ ಅವರೇ ಹೇಳಿದ್ದಂತೆ ಕರ್ನಾಟಕದ ಚುನಾವಣೆ ಬಿಜೆಪಿಗೆ ಅತ್ಯಂತ ಮಹತ್ವವಾದುದು, ದಕ್ಷಿಣ ಭಾರತಕ್ಕೆ ಕರ್ನಾಟಕದ ಮೂಲಕ ಬಿಜೆಪಿ ಬಾಗಿಲು ತೆರೆಯಲಿದೆ ಎಂದಿದ್ದರು ಅವರು, ಆದರೆ ಅವರು ಎಣಿಸಿದಂತೆ ಆಗಲಿಲ್ಲ, ಇಲ್ಲಿ ಪ್ರಾದೇಶಿಕ ಪಕ್ಷವೊಂದು ಅಧಿಕಾರ ಹಿಡಿಯಲಿದೆ.
ಕರ್ನಾಟಕದಲ್ಲಿ ಜೆಡಿಎಸ್ ಅಧಿಕಾರ ಹಿಡಿಯಲು ಹೊರಟಿರುವುದು ಪ್ರಾದೇಶಿಕ ಪಕ್ಷಗಳಲ್ಲಿ ಉತ್ಸಾಹ ಮೂಡಿಸಿರುವುದು ಸುಳ್ಳಲ್ಲ, ಇದಕ್ಕೆ ಪೂರಕವೆಂಬಂತೆ ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳು ಜೆಡಿಎಸ್-ಕಾಂಗ್ರೆಸ್ ಮೈತ್ರಿಯನ್ನು ಸ್ವಾಗತಿಸಿದ್ದು, ಬಿಜೆಪಿ ಅಧಿಕಾರಕ್ಕೆ ಧಕ್ಕದಾದ ಬೆಳವಣಿಗೆಯನ್ನು ಸ್ವಾಗತಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಅಧಿಕಾರ ಹಿಡಿಯುತ್ತಿರುವುದು ತೃತೀಯ ರಂಗಕ್ಕೆ ಬಲ ತುಂಬಲಿದಿಯೇ ಎಂಬ ಚರ್ಚೆಯೊಂದು ಪ್ರಾರಂಭವಾಗುತ್ತಿರುವ ಹೊತ್ತು ಇದು. ಹೌದು ಎನ್ನುತ್ತದೆ ಪರಿಸ್ಥಿತಿಗಳು.
ಈಗಾಗಲೇ ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ ರಾವ್ ಅವರ ನೇತೃತ್ವದಲ್ಲಿ ಶಕ್ತಿಶಾಲಿ ತೃತೀಯ ರಂಗ ಕಟ್ಟುವ ಪ್ರಯತ್ನ ಪ್ರಾರಂಭವಾಗಿದ್ದು. ಕರ್ನಾಟಕದಲ್ಲಿ ಜೆಡಿಎಸ್ಗೆ ಸಿಕ್ಕಿರುವ ಮುನ್ನಡೆ ತೃತೀಯ ರಂಗಕ್ಕೆ ಬಲ ತುಂಬುವುದರಲ್ಲಿ ಸಂಶಯವಿಲ್ಲ ಎನ್ನಲಾಗುತ್ತಿದೆ.
ಇದಕ್ಕೆ ಪೂರಕವೆಂಬಂತೆ ಕುಮಾರಸ್ವಾಮಿ ಅವರು ತಮ್ಮ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಲ್ಲಾ ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ, ಮಾಯಾವತಿ, ಕೆಸಿಆರ್, ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಪ್ರಾದೇಶಿಕ ಮುಖಂಡರನ್ನು ಆಹ್ವಾನಿಸಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರದಲ್ಲಿದೆ ಈ ಸಂದರ್ಭದಲ್ಲಿ ತೃತೀಯ ರಂಗ ಬಲಗೊಂಡಲ್ಲಿ ಅದು ಬಿಜೆಪಿಗೆ ಹೊಡೆತವೇ, ತೃತೀಯ ರಂಗಕ್ಕೆ ಬಲ ಬಂದರೆ ಕಾಂಗ್ರೆಸ್ನ ಅಧಿಕಾರದ ಆಸೆ ಚಿಗುರುತ್ತದೆ ಎಂಬುದು ಹಳೆಯ ಗಾದೆ. ಬಹಳ ವಿಧಾನಸಭೆ ಚುನಾವಣೆಗಳ ನಂತರ ಮೊದಲ ಬಾರಿಗೆ ಬಿಜೆಪಿ ಅಧಿಕಾರದಿಂದ ವಂಚಿತವಾಗಿದೆ, ಇದು ಬಿಜೆಪಿಯ ಕುಸಿತದ ಆರಂಭವೇ ಅಥವಾ ಕಾಂಗ್ರೆಸ್ನ ಕುಸಿತವಾ ಕಾದು ನೋಡಬೇಕಿದೆಯಷ್ಟೆ.
-
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications