ಎಂ.ಸಿ.ನಾಣಯ್ಯ ಕಾಂಗ್ರೆಸ್ ಸೇರ್ತಾರಾ?
ಕೊಡಗು, ಜನವರಿ 09 : ಜೆಡಿಎಸ್ ನಾಯಕ, ಮಾಜಿ ಸಚಿವ ಎಂ.ಸಿ.ನಾಣಯ್ಯ ಕಾಂಗ್ರೆಸ್ ಸೇರಲಿದ್ದಾರೆಯೇ?. ಸಿದ್ದರಾಮಯ್ಯ ನಾಣಯ್ಯ ಮನೆಗೆ ಭೇಟಿ ನೀಡಲಿರುವುದು ಈ ಪ್ರಶ್ನೆಯನ್ನು ಹುಟ್ಟು ಹಾಕಿದೆ.
ರಾಜ್ಯ ಪ್ರವಾಸ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕೊಡಗಿಗೆ ಭೇಟಿ ನೀಡಿದ್ದಾರೆ. ಈ ಸಮಯದಲ್ಲಿ ಅವರು ಎಂ.ಸಿ.ನಾಣಯ್ಯ ಮನೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಜನತಾದಳ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಆಗ ಎಂ.ಸಿ.ನಾಣಯ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಆದ್ದರಿಂದ, ಇಬ್ಬರು ನಾಯಕರ ನಡುವೆ ಉತ್ತಮ ಬಾಂಧವ್ಯವಿದೆ.

ಜೆಡಿಎಸ್ ಪಕ್ಷದಲ್ಲಿರುವ ಎಂ.ಸಿ.ನಾಣಯ್ಯ ಪಕ್ಷದ ವರಿಷ್ಠರ ವರ್ತನೆಯಿಂದ ಬೇಸತ್ತಿದ್ದಾರೆ. ಆದ್ದರಿಂದ, ಪಕ್ಷದ ಚಟುವಟಿಕೆಗಳಿಂದ ದೂರವುಳಿದಿದ್ದಾರೆ. ಹಾಗಾಗಿ ಅವರು ಕಾಂಗ್ರೆಸ್ ಸೇರಬಹುದು ಎಂಬ ಸುದ್ದಿ ಹಬ್ಬಿದೆ.
ಎಂ.ಸಿ.ನಾಣಯ್ಯ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 'ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತೆನೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ. ಆದರೆ, ಮುಖ್ಯಮಂತ್ರಿಗಳು ನಮ್ಮ ಮನೆಗೆ ಭೇಟಿ ನೀಡುವ ಸಾಧ್ಯತೆ ಇದೆ' ಎಂದು ಹೇಳಿದ್ದಾರೆ.
'ಮುಖ್ಯಮಂತ್ರಿಗಳು ನಮ್ಮ ಮನೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಜನತಾ ಪರಿವಾರದಲ್ಲಿ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ನಮ್ಮ ಬಾಂಧವ್ಯ ಉತ್ತಮವಾಗಿದೆ. ಹೀಗಿರುವಾಗ ನಮ್ಮ ಮನೆಗೆ ಬಂದರೆ ತಪ್ಪೇನು?' ಎಂದು ಪ್ರಶ್ನಿಸಿದ್ದಾರೆ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications