ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಬಳಕೆಗೆ ಅವಕಾಶ ನೀಡುವುದಿಲ್ಲ: ಯಡಿಯೂರಪ್ಪ
ಬೆಂಗಳೂರು,ಫೆಬ್ರವರಿ 22: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಬಳಕೆಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕಾವೇರಿ-ಗುಂಡಾರ್ ನದಿ ಜೋಡಣೆಗೆ ಯೋಜನೆಗೆ ತಮಿಳುನಾಡು ಮುಂದಾಗಿದೆ. ಹೆಚ್ಚುವರಿ ನೀರು ಬಳಕೆಗೆ ಕರ್ನಾಟಕ ವಿರೋಧಿಸಿದ್ದು, ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ , ಹೇಳಿಕೆ ಕೊಡುವುದರಿಂದ ಯಾವುದೇ ಉಪಯೋಗವಿಲ್ಲ. ಈ ಸಂಬಂಧ ಬಿಗಿ ಕ್ರಮ ಕೈಗೊಳ್ಳುತ್ತೇವೆ. ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ ಎಂದು ಹೇಳಿದ್ದಾರೆ.
ಗೋದಾವರಿ,ಕಾವೇರಿ ನದಿ ಜೋಡಣೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ: ಪಳನಿಸ್ವಾಮಿ
ಪಂಚಮಸಾಲಲಿ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿ, ಇಂದು ಪಂಚಮಸಾಲಿ ಸಮಾಜದ ಸಚಿವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಎಲ್ಲಾ ಪ್ರಶ್ನೆಗಳಿಗೂ ಅವರೇ ಉತ್ತರ ನೀಡಲಿದ್ದಾರೆ ಎಂದರು.
Recommended Video
ಇದೇ ವೇಳೆ ರಾಜ್ಯ ಬಜೆಟ್ ಕುರಿತು ಮಾತನಾಡಿ, ರಾಜ್ಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಇವತ್ತು ಎಲ್ಲಾ ಇಲಾಖೆಗಳ ಸಭೆ ಮುಗಿಯುತ್ತದೆ. ನಾಳೆಯಿಂದ ಬಜೆಟ್ ಸಿದ್ಧತೆಗೆ ಏನೇನು ಮಾಡಬೇಕೋ ಅದನ್ನು ಮಾಡಲಿದ್ದೇವೆ. ಇತರೆ ಇಲಾಖೆಗಳ ಪ್ರಮುಖರ ಜೊತೆ ಚರ್ಚೆ ಮಾಡುತ್ತೇನೆಂದು ಹೇಳಿದ್ದಾರೆ.