ಗೌಡ್ರು ಇರೋ ತನಕ ನಿಯತ್ತು ಜೆಡಿಎಸ್ ಮೇಲೆ: ಆಫರ್ ತಿರಸ್ಕರಿಸಿದ ವೈಎಸ್ ವಿ ದತ್ತ
ಬೆಂಗಳೂರು, ಸೆ 30: "ದೇವೇಗೌಡ್ರು ಇರುವ ತನಕ ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ"ಎಂದು ಮಾಜಿ ಶಾಸಕ, ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತ ಸ್ಪಷ್ಟವಾಗಿ ಹೇಳುವ ಮೂಲಕ, ಆಮ್ ಆದ್ಮಿ ಪಾರ್ಟಿ ನೀಡಿದ ಆಫರ್ ಅನ್ನು ತಿರಸ್ಕರಿಸಿದ್ದಾರೆ.
Recommended Video
ಆಮ್ ಆದ್ಮಿ ಪಕ್ಷದ ನೂತನ ಉಸ್ತುವಾರಿಯಾಗಿರುವ ರೋಮಿ ಭಾಟಿ, ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹಾಗೂ ರಾಜ್ಯ ಕಾರ್ಯದರ್ಶಿ ಸಂಚಿತ್ ಸಹಾನಿ ಜೊತೆಗೆ, ದತ್ತ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು.
ಸುಮಾರು ಎರಡು ತಾಸು ಸುಧೀರ್ಘ ಚರ್ಚೆ ನಡೆಸಿದ ಆಮ್ ಆದ್ಮಿ ಮುಖಂಡರು, ದತ್ತ ಅವರನ್ನು ಆಪ್ ಸೇರುವಂತೆ ಮನವಿ ಮಾಡಿದ್ದಾರೆ. ಸದ್ಯದ ರಾಜ್ಯದ ರಾಜಕೀಯ ಸನ್ನಿವೇಶ, ಮುಂದಾಗಬಹುದಾದ ಸ್ಥಿತ್ಯಂತರಗಳ ಬಗ್ಗೆ ವಿಸ್ಕೃತವಾಗಿ ಮುಖಂಡರು ಚರ್ಚಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸೂಚನೆಯ ಮೇರೆಗೆ ನಿಮ್ಮನ್ನು ಪಕ್ಷಕ್ಕೆ ಆಹ್ವಾನಿಸಲು ಬಂದಿದ್ದೇನೆ ಎಂದು ರೋಮಿ ಭಾಟಿ, ದತ್ತ ಅವರ ಬಳಿ ಹೇಳಿ, ಅವರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.
ಆದರೆ, ಆಮ್ ಆದ್ಮಿ ಪಕ್ಷದ ಆಫರ್ ಅನ್ನು ನಯವಾಗಿ ತಿರಸ್ಕರಿಸಿರುವ ದತ್ತ, ಜೆಡಿಎಸ್ ಪಕ್ಷ ಬಿಡುವ ಬಗ್ಗೆ ಯಾವುದೇ ಆಲೋಚನೆಯನ್ನು ಮಾಡಿಲ್ಲ. ನನ್ನ ಬಾಸ್ ಏನಿದ್ದರೂ ದೇವೇಗೌಡ್ರು ಎಂದು ಹೇಳಿದ್ದಾರೆ.
ಜೆಡಿಎಸ್ ನಲ್ಲಿನ ಇತ್ತೀಚಿನ ಬೆಳವಣಿಗೆಯಿಂದ ಬೇಸತ್ತು ವೈ.ಎಸ್.ವಿ ದತ್ತ ಪಕ್ಷ ತೊರೆಯಲಿದ್ದಾರೆ ಎನ್ನುವ ಗುಸುಗುಸು ಸುದ್ದಿ ಹರಿದಾಡುತ್ತಿದ್ದವು. ಇದರ ಮಧ್ಯೆ, ಆಮ್ ಆದ್ಮಿ ಪಕ್ಷದ ಮುಖಂಡರು, ದತ್ತ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications