DK Shivakumar: ಬೆಂಗಳೂರಿನ ಸಮಸ್ಯೆಗಳನ್ನು ಬಗೆಹರಿಸಲು ಪಣತೊಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ನವೆಂಬರ್‌ 19: ರಾಜ್ಯ ರಾಜಧಾನಿ ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಇದರಿಂದಾಗಿ ಹಲವಾರು ಸಮಸ್ಯೆಗಳು ಉದ್ಭವಿಸುತ್ತಿವೆ. ಈ ಸಮಸ್ಯೆಗಳು ಬೃಹದಾಕಾರವಾಗಿ ಬೆಳಯುವ ಮೊದಲು ನಾವೆಲ್ಲರೂ ಸೇರಿ ಅದನ್ನು ಸರಿಪಡಿಸಬೇಕಾಗಿದೆ. ಬೆಂಗಳೂರು ಉಸ್ತುವಾರಿ ಹೊತ್ತಿರುವ ನಾನು ಈ ಸಮಸ್ಯೆಗಳನ್ನು ಸರಿಪಡಿಸುವ ತನಕ ವಿರಮಿಸುವುದಿಲ್ಲ ಎಂದು ಡಿ ಕೆ ಶಿವಕುಮಾರ್‌ ಭರವಸೆ ನೀಡಿದರು.

ನಗರದ ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ಬೆಂಗಳೂರು ಟೆಕ್ ಸಮ್ಮಿಟ್ 2024 ರ ಉದ್ಘಾಟನಾ ಸಮಾರಂಭದಲ್ಲಿ ಶಿವಕುಮಾರ ಅವರು ಮಾತನಾಡಿ, ದೆಹಲಿ, ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ಪೇಟೆಂಟ್ ವಿಚಾರದಲ್ಲಿ ಮುಂಚೂಣಿಯಲ್ಲಿದೆ. ಪೇಟೆಂಟ್ ಅರ್ಜಿಗಳ ಸಂಖ್ಯೆಯಲ್ಲಿ ಕರ್ನಾಟಕ ಇಡೀ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ. ಕರ್ನಾಟಕ ಮಾಹಿತಿ ತಂತ್ರಜ್ಞಾನದ ಜೊತೆಗೆ ಚಿಪ್ ವಿನ್ಯಾಸದಲ್ಲಿ ದೇಶದಲ್ಲಿಯೇ ತನ್ನದೇ ಆದ ಛಾಪು ಮೂಡಿಸಿದೆ ಎಂದರು.

Will not rest until Bengaluru s problems are fixed Says DK Shivakumar

"ನಾವು ಅಧಿಕಾರಕ್ಕೆ ಬಂದ ಕಡಿಮೆ ಅವಧಿಯಲ್ಲಿಯೇ ಬೆಂಗಳೂರಿನ ಅಭಿವೃದ್ದಿಗೆ ಅನೇಕ ಬೃಹತ್ ಯೋಜನೆಗಳನ್ನು ಪ್ರಾರಂಭಿಸಿದ್ದೇವೆ. ಸುರಂಗ ರಸ್ತೆ ಯೋಜನೆ ಹಾಗೂ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬೆಂಗಳೂರು ಬಿಜಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ ನೀಡಿದ್ದೇವೆ. ಮುಂದಿನ 6 ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ಈ ಯೋಜನೆಯಿಂದ ನಗರದ ಸಂಚಾರ ದಟ್ಟಣೆಗೆ ಪರಿಹಾರ ದೊರೆಯಲಿದೆ. ಸುರಂಗ ರಸ್ತೆ ಯೋಜನೆಗೆ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ಆದಷ್ಟು ಬೇಗ ಈ ಕನಸನ್ನು ನನಸು ಮಾಡಲಾಗುವುದು ಎಂದು ತಿಳಿಸಿದರು.

"ಹಲವಾರು ಯೋಜನೆಗಳ ಮೂಲಕ ಬೆಂಗಳೂರನ್ನು ಭವಿಷ್ಯದಲ್ಲಿ ವ್ಯಾಪಾರಿ, ನಾಗರಿಕ ಸ್ನೇಹಿ, ವಾಸಿಸಲು ಯೋಗ್ಯವಾದ ನಗರವನ್ನಾಗಿ ಮಾಡಲು ನಮ್ಮ ಕರ್ನಾಟಕ ಸರ್ಕಾರ ಬದ್ದವಾಗಿದೆ. ಬೆಂಗಳೂರು ಟೆಕ್ ಸಮ್ಮಿಟ್ ವಿಶ್ವದ ಅತ್ಯಂತ ಮಹತ್ವದ ಟೆಕ್ ಸಮ್ಮಿಟ್ ಗಳಲ್ಲಿ ಒಂದು. ಎಲ್ಲಾ ಸರ್ಕಾರಗಳು, ಐಟಿ ಉದ್ಯಮ, ಅಧಿಕಾರಿಗಳು, ರಾಜಕೀಯ ಮುಖಂಡರು ಈ ಕಾರ್ಯಕ್ರಮ ಇಷ್ಟು ದೊಟ್ಟ ಮಟ್ಟಕ್ಕೆ ಬೆಳೆಯಲು ಶ್ರಮಪಟ್ಟಿದ್ದಾರೆ" ಎಂದು ಅಭಿಪ್ರಾಯಪಟ್ಟರು.

ಆಯೋಗದ ಆವಿಷ್ಕಾರ ಸೂಚ್ಯಂಕದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಅಲ್ಲದೇ ಐಟಿ- ಬಿಟಿ ಹಾಗೂ ನವೋದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಕರ್ನಾಟಕ ಅದರಲ್ಲೂ ಬೆಂಗಳೂರು ದೇಶದ ತಂತ್ರಜ್ಞಾನ ವಲಯದ ಹೃದಯ ಬಡಿತವಾಗಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ಯಂತ್ರೋಪಕರಣಗಳ ತಯಾರಿಕೆಯಲ್ಲಿಯೂ ಕರ್ನಾಟಕ ಮುಂದಿದ್ದು, ಸುಮಾರು 85 ಕ್ಕೂ ಹೆಚ್ಚು ಫ್ಯಾಬ್ಲೆಸ್ ಚಿಪ್ ವಿನ್ಯಾಸ ಘಟಕಗಳು ನಮ್ಮ ರಾಜ್ಯದಲ್ಲಿವೆ. ಸೆಮಿ ಕಂಡಕ್ಟರ್ ತಯಾರಿಕೆಗೆ ಕರ್ನಾಟಕವೇ ಆಧಾರ. ದೇಶದ ಜೈವಿಕ ತಂತ್ರಜ್ಞಾನ ವಲಯಕ್ಕೆ ಶೇ.52 ರಷ್ಟು ಉದ್ಯೋಗಿಗಳನ್ನು ಕರ್ನಾಟಕವೇ ಪೂರೈಕೆ ಮಾಡುತ್ತದೆ ಎಂದರು.

ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಬೆಂಗಳೂರನ್ನು ಕೇಂದ್ರವಾಗಿಟ್ಟುಕೊಂಡು ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪಿಸಿದ ಕಾರಣಕ್ಕೆ ಇಂದು ನಮ್ಮ ನಗರ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಹಲವಾರು ಶಿಕ್ಷಣತಜ್ಞರು ಹೆಸರಾಂತ ಇಂಜಿನಿಯರಿಂಗ್ ಕಾಲೇಜುಗಳು, ತಂತ್ರಜ್ಞಾನ ಸಂಸ್ಥೆಗಳನ್ನು ಸ್ಥಾಪಿಸಿದ ಕಾರಣಕ್ಕೆ ಇಂದು ಬೆಂಗಳೂರು ತನ್ನ ಅಸ್ತಿತ್ವವನ್ನು ಕಾಪಾಡಿಕೊಂಡಿದೆ. ಬೆಂಗಳೂರು ಬೆಳವಣಿಗೆಗೆ ನೆಹರು ಅವರು ಹಾಗೂ ಅನೇಕರ ದೂರದೃಷ್ಟಿಯ ಕೊಡುಗೆಯಿದೆ ಎಂದು ತಿಳಿಸಿದರು.

ಅಜೀಂ ಪ್ರೇಮ್ ಜೀ ಅವರು ಮತ್ತು ನಾರಾಯಣ ಮೂರ್ತಿ ಅವರು ಬೆಂಗಳೂರು ಹೊರತು ಪಡಿಸಿ ಬೇರೆ ನಗರಗಳನ್ನು ಆಯ್ಕೆ ಮಾಡಿಕೊಂಡಿದ್ದರೆ ಬೆಂಗಳೂರು ಐಟಿ ಹಬ್ ಬೆಳೆಯುತ್ತಿರಲಿಲ್ಲ. ಸಾವಿರಾರು ಜನರು ತಮ್ಮ ಸ್ಟಾರ್ಟ್ ಅಪ್ ಗಳಿಗೆ ಬೆಂಗಳೂರನ್ನು ಆಯ್ಕೆ ಮಾಡದೇ ಇದ್ದಿದ್ದರೆ ಬೆಂಗಳೂರು ಲಕ್ಷಾಂತರ ಜನರಿಗೆ ಆಸರೆ ಒದಗಿಸುತ್ತಿರಲಿಲ್ಲ ಎಂದರು.

ಬೆಂಗಳೂರು ಟೆಕ್ ಸಮ್ಮಿಟ್ ನವೋದ್ಯಮಿಗಳ, ಉದ್ಯಮಿಗಳು, ತಂತ್ರಜ್ಞರು, ಸೃಜನಶೀಲರು ಮತ್ತು ಅಸಾಧಾರಣ ಕನಸುಗಾರರ ಸಮ್ಮೇಳನ. ಕರ್ನಾಟಕ ದಾರ್ಶನಿಕರ, ಆಧುನಿಕ ಚಿಂತಕರ ಭೂಮಿ. ಭಾರತದ ಐಟಿ ಕ್ರಾಂತಿಯ ಹಾಗೂ ಜೈವಿಕ ತಂತ್ರಜ್ಞಾನದ ಹುಟ್ಟೂರು. ಮಾಹಿತಿ ತಂತ್ರಜ್ಞಾನದ ಮೂಲಕ ನಮ್ಮ ರಾಜ್ಯದ ಹೆಸರು ಜಾಗತಿಕ ಮಟ್ಟದಲ್ಲಿದೆ ಎಂದರು.

ಕರ್ನಾಟಕವು ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್ಟೆಂಡೆಡ್ ರಿಯಾಲಿಟಿ (ಎವಿಜಿಸಿ-ಎಕ್ಸ್ಆರ್) ವಲಯಗಳಲ್ಲಿ ಅಂತರರಾಷ್ಟ್ರೀಯ ಮಾನದಂಡಗಳನ್ನು ಅನುಸರಿಸುತ್ತಿದೆ. ಈ ವಲಯದಲ್ಲಿ ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಕರ್ನಾಟಕವು 2025 ರ ವೇಳೆಗೆ ಈ ಕ್ಷೇತ್ರದಲ್ಲಿ ಸುಮಾರು 25,000 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಗುರಿ ಹೊಂದಿದೆ. ಈ ಕ್ಷೇತ್ರಕ್ಕೆ ಬೆಂಬಲವಾಗಿ ನಿಂತ ಪರಿಣಾಮ ಸುಮಾರು ಶೇ.70 ರಷ್ಟು ಉದ್ಯೋಗ ಸೃಷ್ಟಿಯಾಗಿಯಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+