Get Updates
Get notified of breaking news, exclusive insights, and must-see stories!

ಹಾಸನ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಬೊಮ್ಮಾಯಿ ಬಂದರೆ ಪ್ರತಿಭಟಿಸುತ್ತೇವೆ: ಹೆಚ್‌ಡಿ ರೇವಣ್ಣ ಹೇಳಿದ್ದೇನು?

ಹಾಸನ, ಮಾರ್ಚ್‌ 10: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಸನದಲ್ಲಿ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರೆ ಅವರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಜೆಡಿಎಸ್‌ ಹೇಳಿದೆ. ಜೆಡಿಎಸ್ ಮುಖಂಡ, ಮಾಜಿ ಸಚಿವ ಎಚ್‌ಡಿ ರೇವಣ್ಣ ಮಾತನಾಡಿ, ಸುಮಾರು 20 ವರ್ಷಗಳ ಹಿಂದೆಯೇ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು ಎಂದು ತಿಳಿಸಿದ್ದಾರೆ.

ಮಹಿಳೆಯರು ಮತ್ತು ಮಕ್ಕಳಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ತಪಾಸಣೆ ಬಂಗಲೆ ಮತ್ತು ಎಂಜಿನಿಯರಿಂಗ್ ಕಾಲೇಜು ಸೇರಿದಂತೆ ಹಲವು ಯೋಜನೆಗಳನ್ನು ಉದ್ಘಾಟಿಸಲು ಬೊಮ್ಮಾಯಿ ಅವರು ಮಾರ್ಚ್ 13 ರಂದು ಹಾಸನಕ್ಕೆ ಭೇಟಿ ನೀಡುವ ಯೋಜನೆಯನ್ನು ಹೊಂದಿದ್ದಾರೆ ಎಂದು ವರದಿಯಾಗಿದೆ. ವಿಮಾನ ನಿಲ್ದಾಣಕ್ಕೆ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Will protest against Bommai if he lays foundation stone for Hassan airport: HD Revanna

'ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಸಕರು ಅಪೂರ್ಣವಾಗಿರುವ ಯೋಜನೆಗಳನ್ನು ಉದ್ಘಾಟನೆ ಮಾಡುವ ಆತುರದಲ್ಲಿದ್ದಾರೆ. ಈ ಎಲ್ಲಾ ಯೋಜನೆಗಳು ಜೆಡಿ(ಎಸ್)-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮಂಜೂರಾಗಿವೆ. ಯೋಜನೆಗಳ ಉದ್ಘಾಟನೆ ಮಾಡುವ ನೈತಿಕ ಹಕ್ಕು ಬಿಜೆಪಿ ನಾಯಕರಿಗೆ ಇಲ್ಲ' ಎಂದು ರೇವಣ್ಣ ಹಾಸನದಲ್ಲಿ ಹೇಳಿದರು.

ಸ್ಥಳೀಯ ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ಹಾಸನದಲ್ಲಿ ಮುಖ್ಯಮಂತ್ರಿಗಳ ಭೇಟಿ ಮತ್ತು ಇತರ ಕಾರ್ಯಕ್ರಮಗಳನ್ನು ಯೋಜಿಸಿದ್ದಾರೆ ಎಂದು ವರದಿಯಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಯೋಜನೆಗಳ ಕ್ರೆಡಿಟ್ ತೆಗೆದುಕೊಳ್ಳಲು ಆತುರದಲ್ಲಿದೆ ಎಂದು ಮಾಜಿ ಸಚಿವರು ಹೇಳಿದ್ದಾರೆ.

Will protest against Bommai if he lays foundation stone for Hassan airport: HD Revanna

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಜೆಡಿ(ಎಸ್)-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಮಂಜೂರು ಮಾಡಿದ ಹಳೆಯ ಚೆಕ್‌ಗಳನ್ನು ಜನರಿಗೆ ಬಿಡುಗಡೆ ಮಾಡುತ್ತಿದೆ ಎಂದು ರೇವಣ್ಣ ಆರೋಪಿಸಿದರು.

ಹಾಸನ ವಿಧಾನಸಭಾ ಕ್ಷೇತ್ರವು ಜೆಡಿಎಸ್ ಭದ್ರಕೋಟೆಯಾಗಿದ್ದು, ಪಕ್ಷವು ತನ್ನ ಅಭ್ಯರ್ಥಿಯನ್ನು ಇನ್ನೂ ಅಂತಿಮಗೊಳಿಸಿಲ್ಲ. ರೇವಣ್ಣ ಅವರು ತಮ್ಮ ಪತ್ನಿ ಭವಾನಿ ಅವರ ಹೆಸರನ್ನು ನಾಮನಿರ್ದೇಶನ ಮಾಡಲು ಬಯಸಿದ್ದರೆ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಲು ಬಯಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡು ತಿಂಗಳಷ್ಟೇ ಬಾಕಿ ಇದೆ. ಈ ವೇಳೆ, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರವನ್ನು ಹಲವು ಯೋಜನೆಗಳನ್ನು ಉದ್ಘಾಟಿಸುತ್ತಿದೆ. ಇದು ಚುನಾವಣಾ ಗಿಮಿಕ್‌ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಜೆಡಿಎಸ್‌ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಹಾಸನಕ್ಕೆ ಯಾರು ನಿಲ್ಲಲಿದ್ದಾರೆ ಎಂಬುದನ್ನು ತಿಳಿಸಿಲ್ಲ. ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನಷ್ಟೇ ಬಿಡುಗಡೆ ಮಾಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+