ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.18ರ ಬಳಿಕ ಸರ್ಕಾರದ ದೊಡ್ಡ ಹಗರಣ ಬೆಳಕಿಗೆ : ಎಚ್ಡಿಕೆ

|
Google Oneindia Kannada News

ಬೆಂಗಳೂರು, ಡಿಸೆಂಬರ್. 14 : 'ಮೈಸೂರು ಮಿನರಲ್ಸ್ ಕಂಪನಿಯಲ್ಲಿ ನಡೆದ ದೊಡ್ಡ ಭ್ರಷ್ಟಾಚಾರದ ಹಗರಣದ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.

ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, 'ಡಿಸೆಂಬರ್ 18 ರ ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಈ ಸರ್ಕಾರದ ದೊಡ್ಡ ಹಗರಣವನ್ನು ದಾಖಲೆ ಸಮೇತ ಜನರ ಮುಂದಿಡುತ್ತೇನೆ' ಎಂದರು.

ಮೈಸೂರು ಮಿನರಲ್ಸ್ ಹಗರಣ, ಮಹೇಂದ್ರ ಜೈನ್ ಗೆ ಜಾಮೀನುಮೈಸೂರು ಮಿನರಲ್ಸ್ ಹಗರಣ, ಮಹೇಂದ್ರ ಜೈನ್ ಗೆ ಜಾಮೀನು

Will release documents on Mysore minerals Ltd scam says HD Kumaraswamy

'ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದ ಸಂಪತ್ತನ್ನು ಹೇಗೆ ಲೂಟಿ ಹೊಡೆದಿದ್ದಾರೆ? ಎಂಬುದು ಹಗರದ ಮೂಲಕದ ಬೆಳಕಿಗೆ ಬರಲಿದೆ' ಎಂದು ಕುಮಾರಸ್ವಾಮಿ ಹೇಳಿದರು.

ಡಿ.18ರ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ!ಡಿ.18ರ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ!

'ಗುಜರಾತ್ ವಿಧಾನಸಭೆ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗಲಿದೆ. ಗುಜರಾತ್‌ನಲ್ಲಿ ಯಾರು ಅಧಿಕಾರಕ್ಕೆ ಬರಲಿದ್ದಾರೆ? ಎಂಬ ಬಗ್ಗೆ ನನಗೆ ಕುತೂಹಲವಿಲ್ಲ' ಎಂದರು.

'ಫಲಿತಾಂಶ ಪ್ರಕಟವಾದ ಬಳಿಕ ಜೆಡಿಎಸ್, ಕಾಂಗ್ರೆಸ್ ನಾಯಕರು ಬಿಜೆಪಿ ಸೇರಲಿದ್ದಾರೆ. ಬಿಜೆಪಿಯವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಹೇಳಿಕೆಗಳನ್ನು ಕೆಲವರು ನೀಡುತ್ತಿದ್ದಾರೆ. ರಾಜ್ಯದಲ್ಲಿ ಮಹತ್ವದ ಬದಲಾವಣೆಯಾಗುವುದಂತೂ ಖಚಿತ' ಎಂದು ತಿಳಿಸಿದರು.

ಗುಜರಾತ್‌ನಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿದೆ. ಡಿ.18ರ ಸೋಮವಾರ ಫಲಿತಾಂಶ ಪ್ರಕಟವಾಗಲಿದೆ.

ಒನ್ಇಂಡಿಯಾದಲ್ಲಿ ಗುಜರಾತ್, ಹಿಮಾಚಲ ಫಲಿತಾಂಶ ಡಿ.18ರಂದು ಲೈವ್ಒನ್ಇಂಡಿಯಾದಲ್ಲಿ ಗುಜರಾತ್, ಹಿಮಾಚಲ ಫಲಿತಾಂಶ ಡಿ.18ರಂದು ಲೈವ್

English summary
The Janata Dal (Secular) Karnataka state president HD Kumaraswamy said that, He will release documents after December 18 on alleged corruption in State-owned mining company Mysore Minerals Ltd. (MML).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X