Get Updates
Get notified of breaking news, exclusive insights, and must-see stories!

ರಾಮಮಂದಿರ ನಿರ್ಮಿಸದಿದ್ದರೆ ಬಿಜೆಪಿ ವಿರುದ್ಧ ಮತ: ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಬೆಂಗಳೂರು, ನವೆಂಬರ್ 12: ಸಾರ್ವತ್ರಿಕ ಚುನಾವಣೆಗೆ ಮೊದಲು ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡದೇ ಇದ್ದರೆ ಬಿಜೆಪಿಗೆ ವಿರುದ್ಧವಾಗಿ ಮತಚಲಾಯಿಸುವಂತೆ ಶ್ರೀರಾಮಸೇನೆ ಕರೆ ನೀಡಲಿದೆ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಮಡಿಕೇರಿಯ ಗೋಣಿಕೊಪ್ಪದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಜನರು ಅಭಿವೃದ್ಧಿ ಮತ್ತು ಹಿಂದುತ್ವದ ಕಾರಣದಿಂದ ಬಿಜೆಪಿಗೆ ಮತ ನೀಡಿದ್ದಾರೆ, ಈ ಬಾರಿಯೂ ಗೆಲ್ಲಬೇಕು ಎಂದರೆ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಬೇಕು ಎಂದರು.

ಸಮಸ್ತ ಹಿಂದೂಗಳ ಭಾವನೆಯ ಪ್ರತೀಕವಾದ ರಾಮಮಂದಿರವನ್ನು ಬಿಜೆಪಿ ನಿರ್ಮಾಣ ಮಾಡಲೇ ಬೇಕು ಎಂದು ಒತ್ತಾಯಿಸಿದ ಅವರು, ಶಬರಿಮಲೆ ವಿವಾದದ ಬಗ್ಗೆ ಮಾತನಾಡಿ, ತೀರ್ಪು ನೀಡುವಾಗಿ ಸುಪ್ರಿಂಕೋರ್ಟ್‌ ಧರ್ಮದ ಹಿರಿಯರ ಪಡೆಯಬೇಕಿತ್ತು ಎಂದರು.

will vote against BJP if it not start building Ram Mandir before elections

ಟಿಪ್ಪು ಜಯಂತಿ ಆಚರಣೆಗೆ ಗೈರಾಗಿರುವ ಸಿಎಂ ಕುಮಾರಸ್ವಾಮಿ ಹಾಗೂ ಪರಮೇಶ್ವರ್‌ಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದ ಅವರು, ಜಯಂತಿಯನ್ನು ಸ್ವತಃ ಮುಸ್ಲಿಮರೇ ವಿರೋಧಿಸುತ್ತಿದ್ದಾರೆ, ವರ್ಷದಿಂದ ವರ್ಷಕ್ಕೆ ಜಯಂತಿ ಕಳೆ ಕಳೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+