ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮಮಂದಿರ ನಿರ್ಮಿಸದಿದ್ದರೆ ಬಿಜೆಪಿ ವಿರುದ್ಧ ಮತ: ಪ್ರಮೋದ್ ಮುತಾಲಿಕ್ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ನವೆಂಬರ್ 12: ಸಾರ್ವತ್ರಿಕ ಚುನಾವಣೆಗೆ ಮೊದಲು ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡದೇ ಇದ್ದರೆ ಬಿಜೆಪಿಗೆ ವಿರುದ್ಧವಾಗಿ ಮತಚಲಾಯಿಸುವಂತೆ ಶ್ರೀರಾಮಸೇನೆ ಕರೆ ನೀಡಲಿದೆ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಅಯೋಧ್ಯೆ ವಿವಾದ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ ಅಯೋಧ್ಯೆ ವಿವಾದ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

ಮಡಿಕೇರಿಯ ಗೋಣಿಕೊಪ್ಪದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಜನರು ಅಭಿವೃದ್ಧಿ ಮತ್ತು ಹಿಂದುತ್ವದ ಕಾರಣದಿಂದ ಬಿಜೆಪಿಗೆ ಮತ ನೀಡಿದ್ದಾರೆ, ಈ ಬಾರಿಯೂ ಗೆಲ್ಲಬೇಕು ಎಂದರೆ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಬೇಕು ಎಂದರು.

ರಾಮಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ಬೆಂಗಳೂರಲ್ಲಿ ವಿಎಚ್‌ಪಿ ರ‍್ಯಾಲಿರಾಮಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ಬೆಂಗಳೂರಲ್ಲಿ ವಿಎಚ್‌ಪಿ ರ‍್ಯಾಲಿ

ಸಮಸ್ತ ಹಿಂದೂಗಳ ಭಾವನೆಯ ಪ್ರತೀಕವಾದ ರಾಮಮಂದಿರವನ್ನು ಬಿಜೆಪಿ ನಿರ್ಮಾಣ ಮಾಡಲೇ ಬೇಕು ಎಂದು ಒತ್ತಾಯಿಸಿದ ಅವರು, ಶಬರಿಮಲೆ ವಿವಾದದ ಬಗ್ಗೆ ಮಾತನಾಡಿ, ತೀರ್ಪು ನೀಡುವಾಗಿ ಸುಪ್ರಿಂಕೋರ್ಟ್‌ ಧರ್ಮದ ಹಿರಿಯರ ಪಡೆಯಬೇಕಿತ್ತು ಎಂದರು.

ಮಂದಿರ್ ಥಾ, ಹೈ ಔರ್ ರಹೇಗಾ: ಯೋಗಿಯಿಂದ ರಾಮಮಂದಿರ ನಿರ್ಮಾಣದ ಸೂಚನೆಮಂದಿರ್ ಥಾ, ಹೈ ಔರ್ ರಹೇಗಾ: ಯೋಗಿಯಿಂದ ರಾಮಮಂದಿರ ನಿರ್ಮಾಣದ ಸೂಚನೆ

will vote against BJP if it not start building Ram Mandir before elections

ಟಿಪ್ಪು ಜಯಂತಿ ಆಚರಣೆಗೆ ಗೈರಾಗಿರುವ ಸಿಎಂ ಕುಮಾರಸ್ವಾಮಿ ಹಾಗೂ ಪರಮೇಶ್ವರ್‌ಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದ ಅವರು, ಜಯಂತಿಯನ್ನು ಸ್ವತಃ ಮುಸ್ಲಿಮರೇ ವಿರೋಧಿಸುತ್ತಿದ್ದಾರೆ, ವರ್ಷದಿಂದ ವರ್ಷಕ್ಕೆ ಜಯಂತಿ ಕಳೆ ಕಳೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು.

English summary
Sriram sene will give call to vote against Ram Mandir if BJP did not start to build Ram Mandir before the Lok Sabha elections 2018 said Sriram Sene president Pramod Muthalik.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X