ಯಡಿಯೂರಪ್ಪ ಕೈಗೆ ಅಧಿಕಾರವೋ, ರಾಷ್ಟ್ರಪತಿ ಆಳ್ವಿಕೆಯೋ?
Recommended Video
ಬೆಂಗಳೂರು, ಜುಲೈ 06 : ಕರ್ನಾಟಕದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಮೆರಿಕಕ್ಕೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಲಂಡನ್ನಿಗೆ, ಕಾಂಗ್ರೆಸ್ ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಣ್ಣಿಗೆ ಕಾಣದಿರುವ ಸಂದರ್ಭದಲ್ಲಿ ಭರ್ಜರಿ ನಾಟಕೀಯ ಬೆಳವಣಿಗೆಗಳು ನಡೆದಿದ್ದು, ಮೈತ್ರಿ ಸರಕಾರದ ಬುಡವೇ ಅಲ್ಲಾಡುವಂತಾಗಿದೆ.
ಎಚ್ ಡಿ ಕುಮಾರಸ್ವಾಮಿ ಅವರು ಒಂದು ವರ್ಷದ ಹಿಂದೆ ಅಧಿಕಾರ ಸ್ವೀಕರಿಸಿದ ಸಂದರ್ಭದಿಂದಲೇ ಮೈತ್ರಿ ಸರಕಾರ ಅಲುಗಾಡುತ್ತಲೇ ಇತ್ತು. ಇದೀಗ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ 13 ಶಾಸಕರು ವಿಧಾನಸಭಾಧ್ಯಕ್ಷರಿಗೆ ಶನಿವಾರ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸರಕಾರ ಬೀಳುವುದು ಹೆಚ್ಚೂಕಡಿಮೆ ಖಚಿತವಾಗುವಂತಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಕಾಲಕೆಳಗಿನ ಭೂಮಿ ಅಲುಗಾಡುವಂಥ ಬೆಳವಣಿಗೆ ನಡೆದಿರುವುದರಿಂದ ಮೈತ್ರಿ ಸರಕಾರ ಅಲ್ಪಮತಕ್ಕೆ ಕುಸಿಯುವ ಆತಂಕ ಎದುರಾಗಿದೆ. ಯಡಿಯೂರಪ್ಪನವರು ಈಗಾಗಲೆ ರಾಜಭವನಕ್ಕೆ ಧಾವಿಸಿದ್ದಾರೆ. ಇದೇ ಸಮಯದಲ್ಲಿ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರು ಬಂಡಾಯ ಶಾಸಕರ ಮನವೊಲಿಸಲು ವಿಧಾನಸೌಧಕ್ಕೆ ರಾಮನಗರದಿಂದ ಓಡೋಡಿ ಬಂದಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಶ್ವೇತ ಸಫಾರಿಧಾರಿಯಾದ ಯಡಿಯೂರಪ್ಪನವರು ಹೊಸ ಹುಮ್ಮಸ್ಸಿನಿಂದ ರಾಜಭವನಕ್ಕೆ ಆಗಮಿಸಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಸದ್ಯದ ಪರಿಸ್ಥಿತಿಯನ್ನು ವಿವರಿಸಲಿದ್ದಾರೆ. ಸರಕಾರ ರಚಿಸುವ ಕೆಲಸಕ್ಕೆ ಯಡಿಯೂರಪ್ಪ ಕೈಹಾಕುತ್ತಾರಾ? ಅಥವಾ ರಾಜ್ಯದಲ್ಲಿ ವಿಪರೀತ ಪರಿಸ್ಥಿತಿ ಉದ್ಭವಿಸಿರುವುದರಿಂದ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗುವುದಾ? ಇದನ್ನು ರಾಜ್ಯಪಾಲರು ನಿರ್ಧರಿಸಲಿದ್ದಾರೆ.
ಇಬ್ಬರು ಶಾಸಕರು ಈಗಾಗಲೆ ರಾಜೀನಾಮೆ ಸಲ್ಲಿಸಿರುವುದರಿಂದ ಸದನದ ಬಲಾಬಲ 224ರಿಂದ 222ಕ್ಕೆ ಕುಸಿದಿದೆ. ಅವರಲ್ಲಿ ಬಿಜೆಪಿ ಬಳಿ 105 ಶಾಸಕರಿದ್ದಾರೆ. ಇದೀಗ 13 ಶಾಸಕರ ಜೊತೆ ಇನ್ನಷ್ಟು ಶಾಸಕರು ಕೂಡ ರಾಜೀನಾಮೆ ಸಲ್ಲಿಸಲು ಸಿದ್ಧರಾಗಿರುವುದರಿಂದ ಯಡಿಯೂರಪ್ಪನವರಿಗೆ, ಸರಕಾರ ರಚಿಸಲು ಆಹ್ವಾನ ದೊರೆತರೆ ಬಹುಮತ ಸಾಬೀತುಪಡಿಸಲು ಕಷ್ಟವಾಗಲಿಕ್ಕಿಲ್ಲ. ಆದರೆ, ರಾಜ್ಯಪಾಲರು ಏನು ನಿರ್ಧಾರ ತೆಗೆದುಕೊಳ್ಳಲಿದ್ದಾರೆ?
ರಾಜೀನಾಮೆ ಸಲ್ಲಿಸಿರುವ ಶಾಸಕರು
ಹುಣಸೂರು ಜೆಡಿಎಸ್ ಶಾಸಕ ಎಚ್ ವಿಶ್ವನಾಥ್,
ಮಹಾಲಕ್ಷ್ಮಿ ಲೇಔಟ್ ಜೆಡಿಎಸ್ ಶಾಸಕ ಕೆ. ಗೋಪಾಲಯ್ಯ,
ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿಸಿ ಪಾಟೀಲ್,
ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ,
ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ,
ಕೆ.ಆರ್ ಪೇಟೆ ಜೆಡಿಎಸ್ ಶಾಸಕ ನಾರಾಯಣ ಗೌಡ,
ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್,
ರಾಜರಾಜೇಶ್ವರಿ ಕ್ಷೇತ್ರದ ಶಾಸಕ ವಿ. ಮುನಿರತ್ನ,
ಅಥಣಿ ಶಾಸಕ ಮಹೇಶ್ ಕುಮಟಳ್ಳಿ ,
ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್,
ಕೆಆರ್ ಪುರಂ ಶಾಸಕ ಭೈರತಿ ಬಸವರಾಜು,
ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications