ಹೊಸ ಇತಿಹಾಸ ನಿರ್ಮಿಸಿದ ಕಾಗೋಡು ತಿಮ್ಮಪ್ಪ
ಶಿವಮೊಗ್ಗ, ಏಪ್ರಿಲ್ 25: ಕರ್ನಾಟಕದ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರು ಈ ಬಾರಿ ಚುನಾವಣಾ ಕಣಕ್ಕೆ ಇಳಿಯುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. 13ನೇ ಬಾರಿಗೆ ನಾಮಪತ್ರ ಸಲ್ಲಿಸುತ್ತಿರುವ ತಿಮ್ಮಪ್ಪ ಅವರು 1980ರಲ್ಲಿ ಪರಿಷತ್ ಚುನಾವಣೆಗೂ ನಾಮಪತ್ರ ಸಲ್ಲಿಸಿದ್ದರು.
ಸೋಮವಾರದಂದು ಕಾಗೋಡು ತಿಮ್ಮಪ್ಪ ಅವರು, ಅಳಿಯ ಬೇಳೂರು ಗೋಪಾಲಕೃಷ್ಣ ಅವರ ಜತೆಗೂಡಿ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಸ್ವಾತಂತ್ರ್ಯ ನಂತರ 1952 ರಿಂದ 2013ರ ತನಕ 14 ಬಾರಿ ಚುನಾವಣೆಗಳನ್ನು ನಮ್ಮ ನಾಡು ಕಂಡಿದ್ದು, 2018ರ ಚುನಾವಣೆ 15ನೇ ವಿಧಾನಸಭೆಗೆ ಶಾಸಕರನ್ನು ಆಯ್ಕೆ ಮಾಡಲು ಪ್ರಜಾತಂತ್ರ ನೀಡಿರುವ ವ್ಯವಸ್ಥೆಯಾಗಿದೆ.

1962ರಲ್ಲಿ ಮೊದಲ ಬಾರಿಗೆ ತಿಮ್ಮಪ್ಪ ಅವರು ಚುನಾವಣೆ ಎದುರಿಸಿದರು. ಸಾಗರ ಕ್ಷೇತ್ರದಿಂದ ಮೊದಲ ಯತ್ನದಲ್ಲೇ ಸೋಲು ಕಂಡಿದ್ದರು. 1967ರಲ್ಲೂ ತಿಮ್ಮಪ್ಪ ಅವರಿಗೆ ಯಶಸ್ಸು ಸಿಕ್ಕಿರಲಿಲ್ಲ.
1972ರಲ್ಲಿ ಕಾಂಗ್ರೆಸ್ಸಿನ ಎಲ್. ಟಿ ತಿಮ್ಮಪ್ಪ ಹೆಗ್ಡೆ ಅವರನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು. ಮೊದಲ ಗೆಲುವು ಸಾಧಿಸಿದ್ದು ಸೋಷಿಯಲಿಸ್ಟ್ ಪಾರ್ಟಿ ಮೂಲಕ ಎಂಬುದು ವಿಶೇಷ. ಆದರೆ, ನಂತರ 1978ರಲ್ಲಿ ಸೋಲು ಕಂಡು ಅಚ್ಚರಿ ಮೂಡಿಸಿದರು.
ನಂತರ ಕಾಂಗ್ರೆಸ್ ಪಕ್ಷ ಸೇರಿದ ತಿಮ್ಮಪ್ಪ ಅವರು 1980ರಲ್ಲಿ ವಿಧಾನಪರಿಷತ್ ಸದಸ್ಯರಾದರು. ಹೀಗೆ, ಅಂದಿನಿಂದ ಚುನಾವಣೆಗಳನ್ನು ಎದುರಿಸುತ್ತಾ ಬರುತ್ತಿರುವ ತಿಮ್ಮಪ್ಪ ಅವರಿಗೆ ಈಗ 85 ವರ್ಷ ವಯಸ್ಸು. ಕರ್ನಾಟಕದ ಹಿರಿಯ ಸಕ್ರಿಯ ರಾಜಕಾರಣಿ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications