ಹನುಮಂತನ ಆಶೀರ್ವಾದವಿದ್ದರೆ ನಾನು ಮತ್ತೆ ಶೀಘ್ರದಲ್ಲಿ ಬಳ್ಳಾರಿಗೆ ಹೋಗುತ್ತೇನೆ: ಜನಾರ್ದನ ರೆಡ್ಡಿ
ಕೊಪ್ಪಳ, ಜನವರಿ 22: : ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಯಾಗಿದೆ. ಹನುಮಂತನ ಆಶೀರ್ವಾದವಿದ್ದರೆ ನಾನು ಮತ್ತೆ ಶೀಘ್ರದಲ್ಲಿ ಬಳ್ಳಾರಿಗೆ ಹೋಗುತ್ತೇನೆ ಎಂದು ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಸೋಮವಾರ ಅಂಜನಾದ್ರಿಯಲ್ಲಿ ಹನುಮನ ಪೂಜೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ, ಇಂದು ಕೇವಲ ಭಾರತ ದೇಶವಲ್ಲ ಇಡೀ ವಿಶ್ವದಲ್ಲಿಯೇ ಸಂತೋಷವಾಗಿದೆ. ರಾಮಮೂರ್ತಿ ಪ್ರತಿಷ್ಠಾಪನೆಯ ವಿಷಯದಲ್ಲಿ ಸಂತೋಷಪಡುವ ಮೊದಲ ವ್ಯಕ್ತಿ ಎಂದರೆ ಅದು ಹನುಮಂತ ಎಂದು ಹೇಳಿದರು.

ಹನುಮಂತ ಕೊಪ್ಪಳ ಜಿಲ್ಲೆಯಲ್ಲಿ ಜನಿಸಿದ್ದಾನೆ. ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ರಾಮಲಲ್ಲಾ ಮೂರ್ತಿಗೆ ಹಾಗೂ ಅಂಜನಾದ್ರಿಯಲ್ಲಿ ಏಕಕಾಲದಲ್ಲಿ ಮಹಾಮಂಗಳಾರತಿ ಆಗೋದನ್ನು ನೋಡೋದೆ ಪುಣ್ಯ ಎಂದರು.
ರಾಮ ಭಕ್ತಿ ಅಂದ್ರೆ ಅದು ರಾಷ್ಟ್ರಭಕ್ತಿ. ದೇಶದ ಎಲ್ಲ ಜನರ ಜೊತೆಗೆ ಅಂಜನಾದ್ರಿಯಲ್ಲೂ ಹನುಮ ಸಂಭ್ರಮಿಸಿದ್ದಾನೆ. ಅಯೋಧ್ಯೆ ಹೇಗೆ ಅಭಿವೃದ್ಧಿಯಾಗಿದೆಯೋ ಅದೇ ರೀತಿ ಅಂಜನಾದ್ರಿ ಅಭಿವೃದ್ಧಿಗಾಗಿ, ಆಂಜನೇಯನ ಸೇವೆ ಮಾಡುತ್ತೇನೆ. ಅಂಜನಾದ್ರಿಯೂ ವಿಶ್ವಮಟ್ಟದಲ್ಲಿ ಅಭಿವೃವೃದ್ಧಿಯಾಗೋದ್ರಲ್ಲಿ ಸಂದೇಹವಿಲ್ಲ. ಹನುಮನ ಸೇವೆಯೊಂದನ್ನು ಬಿಟ್ಟು ದೊಡ್ಡ ಪದವಿ ಯಾವುದು ಇಲ್ಲ. ಭಗವಂತನ ಸೇವೆ ಮಾಡಲು ಶಕ್ತಿ ಕೊಡು ಎಂದು ಸಂಕಲ್ಪ ಮಾಡಿದ್ದೇನೆ. ಹನುಮಂತ, ಕಲಿಯುಗದಲ್ಲಿ ನಮ್ಮ ನಡುವೆ ಇರುವ ಪ್ರತ್ಯಕ್ಷವಾಗಿ ಓಡಾಡುವ ದೇವರು ಎಂದರು.
ಮಂಡಲ ಪೂಜೆ ಸಮಯಕ್ಕೆ ಗಂಗಾವತಿ ಕ್ಷೇತ್ರದಿಂದ ತುಂಗಾಭದ್ರಾ ಜಲ ತೆಗೆದುಕೊಂಡು ಹೋಗುತ್ತೇವೆ. 108 ಬಂಗಾರ ಲೇಪಿತ ಕಲಶಗಳನ್ನು ತೆಗೆದುಕೊಂಡು ಹೋಗುತ್ತೇವೆ. ಇಡೀ ಒಂದು ರೈಲನ್ನು ಬುಕ್ ಮಾಡಿ ಅಯೋಧ್ಯೆಗೆ ಹೋಗುತ್ತೇನೆ. ಅತ್ತ ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿದ್ದರೆ. ಇತ್ತ ಅಂಜನಾದ್ರಿ ಬೆಟ್ಟದಲ್ಲಿ ಸಂಭ್ರಮ ಮನೆ ಮಾಡಿತ್ತು. ರಾಮ,ಆಂಜನೇಯನ ಭಜನೆ ಮಾಡುವ ಮೂಲಕ.ಆರ್ಟ್ ಆಫ್ ಲಿವಿಂಗ್ ನ ತಂಡದಿಂದ ಭಜನೆ ಮಾಡಿದರು.
ಗಂಗಾವತಿ ತಾಲೂಕಿನ ಆಂಜನೇಯನ ಬೆಟ್ಟದಲ್ಲಿ ಭಜನೆಭಜನೆಗೆ ಹೆಜ್ಜೆ ಹಾಕಿದ ಶ್ರೀರಾಮ,ಆಂಜನೇಯನ ವೇಷಧಾರಿಗಳು ಸಂತಸದಿಂದ ಸಾಧುಗಳು ಕುಪ್ಪಳಿಿಸಿದರು. ಅಯೋಧ್ಯೆ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಅಂಜನಾದ್ರಿಯಲ್ಲಿ ದೀಪೋತ್ಸವ ನರೆವೇರಿದೆ. ಅಂಜನಾದ್ರಿಯ 575 ಮೆಟ್ಟಲು ಗಳಲ್ಲಿ ದೀಪ ಹಚ್ಚಿ ಸಂಭ್ರಮ ಮನೆ ಮಾಡಿತ್ತು. ಇದೇ ವೇಳೆ ಆಂಜನೇಯ ನ ದೇವಸ್ಥಾನ ಹೂವಿನಿಂದ ಅಲಂಕಾರ ಮಾಡಲಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications