50ಸಾವಿರ ಅಂತರದಿಂದ ಗೆಲ್ಲುತ್ತೇನೆ: ಬಿ.ಸಿ.ಪಾಟೀಲ್ ಗೆಲುವಿನ ಲೆಕ್ಕಾಚಾರ ಹೀಗೆ
ಬೆಂಗಳೂರು, ನ 14: ಮುಖ್ಯಮಂತ್ರಿ ಆದಿಯಾಗಿ ರಾಜ್ಯ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಅನರ್ಹ ಶಾಸಕರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅನರ್ಹರಲ್ಲಿ ಒಬ್ಬರಾದ ಬಿ.ಸಿ.ಪಾಟೀಲ್ ಭಾರೀ ಗೆಲುವಿನ ಲೆಕ್ಕಾಚಾರದಲ್ಲಿದ್ದಾರೆ.
ಬಿಜೆಪಿ ಸೇರ್ಪಡೆಗೊಂಡ ನಂತರ ಮಾತನಾಡಿದ ಪಾಟೀಲ್, "ಕಳೆದ ಬಾರಿ ಚುನಾವಣೆಯಲ್ಲಿ ನನ್ನ ಮತ್ತು ಬಣಕರ್ ನಡುವೆ, ಜಿದ್ದಾಜಿದ್ದಿನ ಪೈಪೋಟಿಯಿತ್ತು. ಈ ಬಾರಿ ಹಾಗಿಲ್ಲ" ಎನ್ನುವ ವಿಶ್ವಾಸದ ಮಾತನ್ನಾಡಿದ್ದಾರೆ.
"ಕಳೆದ ಬಾರಿ ನನಗೆ 72,461 ಮತಗಳು ಬಂದಿದ್ದವು, ಯು.ಬಿ,ಬಣಕರ್ ಅವರಿಗೆ 71,906 ಮತಗಳು ಬಂದು, ನಾನು 555 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದೆ. ಆದರೆ, ಈ ಬಾರಿ ಬಣಕರ್ ನಮ್ಮ ಜೊತೆಗಿದ್ದಾರೆ" ಎಂದು ಪಾಟೀಲ್ ಹೇಳಿದರು.

"ಬಣಕರ್ ನಮ್ಮ ಜೊತೆಗಿರುವುದರಿಂದ, ನಾನು ಕನಿಷ್ಟ ಐವತ್ತು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ" ಎನ್ನುವ ವಿಶ್ವಾಸದ ಮಾತನ್ನು ಬಿ.ಸಿ.ಪಾಟೀಲ್ ಆಡಿದ್ದಾರೆ.
"ನನ್ನ ಹಾಗೇ ನನ್ನ ಮಗಳು. ಅವಳು ಈಗಾಗಲೇ ಬಿಜೆಪಿಯಲ್ಲಿದ್ದಾಳೆ. ಶರತ್ ಬಚ್ಚೇಗೌಡ್ರ ತರ ಮಾಡೋಕೆ ಆಗುತ್ತಾ. ತಂದೆ ಎಲ್ಲಿರುತ್ತಾರೋ, ಅಲ್ಲೇ ಮಕ್ಕಳು. ಅದು ಸಂಸ್ಕಾರ" ಎಂದು ಪಾಟೀಲ್, ಬಚ್ಚೇಗೌಡ್ರಿಗೆ ಟಾಂಗ್ ನೀಡಿದ್ದಾರೆ.
ನಗರದ ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂಭಾಗದ ಬೃಹತ್ ವೇದಿಕೆಯ ಮೇಲೆ ಕೇಸರಿ ಶಾಲು ಹೊದ್ದು ಮಿಂಚುತ್ತಿದ್ದ ಅನರ್ಹ ಶಾಸಕರು ಒಬ್ಬೊಬ್ಬರಾಗಿಯೇ ಬಂದು ಬಿಎಸ್ ವೈಯಿಂದ ಪಕ್ಷದ ಬಾವುಟ ಸ್ವೀಕರಿಸಿ, ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications