50ಸಾವಿರ ಅಂತರದಿಂದ ಗೆಲ್ಲುತ್ತೇನೆ: ಬಿ.ಸಿ.ಪಾಟೀಲ್ ಗೆಲುವಿನ ಲೆಕ್ಕಾಚಾರ ಹೀಗೆ
ಬೆಂಗಳೂರು, ನ 14: ಮುಖ್ಯಮಂತ್ರಿ ಆದಿಯಾಗಿ ರಾಜ್ಯ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಅನರ್ಹ ಶಾಸಕರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅನರ್ಹರಲ್ಲಿ ಒಬ್ಬರಾದ ಬಿ.ಸಿ.ಪಾಟೀಲ್ ಭಾರೀ ಗೆಲುವಿನ ಲೆಕ್ಕಾಚಾರದಲ್ಲಿದ್ದಾರೆ.
ಬಿಜೆಪಿ ಸೇರ್ಪಡೆಗೊಂಡ ನಂತರ ಮಾತನಾಡಿದ ಪಾಟೀಲ್, "ಕಳೆದ ಬಾರಿ ಚುನಾವಣೆಯಲ್ಲಿ ನನ್ನ ಮತ್ತು ಬಣಕರ್ ನಡುವೆ, ಜಿದ್ದಾಜಿದ್ದಿನ ಪೈಪೋಟಿಯಿತ್ತು. ಈ ಬಾರಿ ಹಾಗಿಲ್ಲ" ಎನ್ನುವ ವಿಶ್ವಾಸದ ಮಾತನ್ನಾಡಿದ್ದಾರೆ.
"ಕಳೆದ ಬಾರಿ ನನಗೆ 72,461 ಮತಗಳು ಬಂದಿದ್ದವು, ಯು.ಬಿ,ಬಣಕರ್ ಅವರಿಗೆ 71,906 ಮತಗಳು ಬಂದು, ನಾನು 555 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದೆ. ಆದರೆ, ಈ ಬಾರಿ ಬಣಕರ್ ನಮ್ಮ ಜೊತೆಗಿದ್ದಾರೆ" ಎಂದು ಪಾಟೀಲ್ ಹೇಳಿದರು.

"ಬಣಕರ್ ನಮ್ಮ ಜೊತೆಗಿರುವುದರಿಂದ, ನಾನು ಕನಿಷ್ಟ ಐವತ್ತು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ" ಎನ್ನುವ ವಿಶ್ವಾಸದ ಮಾತನ್ನು ಬಿ.ಸಿ.ಪಾಟೀಲ್ ಆಡಿದ್ದಾರೆ.
"ನನ್ನ ಹಾಗೇ ನನ್ನ ಮಗಳು. ಅವಳು ಈಗಾಗಲೇ ಬಿಜೆಪಿಯಲ್ಲಿದ್ದಾಳೆ. ಶರತ್ ಬಚ್ಚೇಗೌಡ್ರ ತರ ಮಾಡೋಕೆ ಆಗುತ್ತಾ. ತಂದೆ ಎಲ್ಲಿರುತ್ತಾರೋ, ಅಲ್ಲೇ ಮಕ್ಕಳು. ಅದು ಸಂಸ್ಕಾರ" ಎಂದು ಪಾಟೀಲ್, ಬಚ್ಚೇಗೌಡ್ರಿಗೆ ಟಾಂಗ್ ನೀಡಿದ್ದಾರೆ.
ನಗರದ ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂಭಾಗದ ಬೃಹತ್ ವೇದಿಕೆಯ ಮೇಲೆ ಕೇಸರಿ ಶಾಲು ಹೊದ್ದು ಮಿಂಚುತ್ತಿದ್ದ ಅನರ್ಹ ಶಾಸಕರು ಒಬ್ಬೊಬ್ಬರಾಗಿಯೇ ಬಂದು ಬಿಎಸ್ ವೈಯಿಂದ ಪಕ್ಷದ ಬಾವುಟ ಸ್ವೀಕರಿಸಿ, ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡರು.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications