ಗೌರಿ ಲಂಕೇಶ್ ಹತ್ಯೆ : ಪಿಸ್ತೂಲ್ ಖರೀದಿ ಮಾಡಿದ್ದು ಎಲ್ಲಿಂದ?
Recommended Video

ಬೆಂಗಳೂರು, ಸೆಪ್ಟೆಂಬರ್ 15 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಪೊಲೀಸರು ಶಸ್ತ್ರಾಸ್ತ್ರ ಡೀಲರ್ಗಳ ವಿಚಾರಣೆ ನಡೆಸಿದ್ದಾರೆ. ಹತ್ಯೆ ಮಾಡಲು ಬಳಸಿರುವ ಪಿಸ್ತೂಲ್ಗಳನ್ನು ಡೀಲರ್ಗಳಿಂದ ಖರೀದಿ ಮಾಡಿರಬಹುದೇ? ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕುಣಿಗಲ್ ಗಿರಿ ಮತ್ತು ಆತನ ಸಹಚರರು ನ್ಯಾಯಾಂಗ ಬಂಧನದಲ್ಲಿದ್ದು, ಪೊಲೀಸರು ನಗರದಲ್ಲಿ ನಡೆಯುವ ಶಸ್ತ್ರಾಸ್ತ್ರ ಖರೀದಿ ಬಗ್ಗೆ ಆತನಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಎಂ.ಎಂ.ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆಗೆ ಒಂದೇ ಮಾದರಿ ಪಿಸ್ತೂಲ್ ಬಳಸಲಾಗಿದೆ ಎಂದು ಪೊಲೀಸರಿಗೆ ತಿಳಿದುಬಂದಿದೆ.

ಗೌರಿ ಲಂಕೇಶ್ ಹತ್ಯೆ ಮಾಡಿರುವ ವ್ಯಕ್ತಿ ಸ್ಥಳೀಯನಲ್ಲ. ಆದರೆ, ಸ್ಥಳೀಯರ ನೆರವು ಪಡೆದು ಆತ ಹತ್ಯೆ ನಡೆಸಿದ್ದಾನೆ ಎಂದು ಪೊಲೀಸರು ತನಿಖೆ ವೇಳೆ ಪತ್ತೆ ಹಚ್ಚಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ ಪೊಲೀಸರು ಹತ್ಯೆ ಮಾಡಿದ ವ್ಯಕ್ತಿ 3 ಸಲ ಸ್ಥಳಕ್ಕೆ ಭೇಟಿ ನೀಡಿದ್ದ ಎಂದು ಪತ್ತೆ ಹಚ್ಚಿದ್ದಾರೆ. ಸಂಜೆ 7.30ಕ್ಕೆ ಆತ ಕೊನೆಯ ಬಾರಿ ಆತ ಗೌರಿ ಲಂಕೇಶ್ ಮನೆ ಸಮೀಪ ಸಂಚರಿಸಿದ್ದ.
ಎಸ್ಐಟಿ ಬೆಳಗಾವಿ ಪೊಲೀಸರನ್ನು ಸಂಪರ್ಕ ಮಾಡಿದ್ದು ಶಸ್ತ್ರಾಸ್ತ್ರ ಡೀಲರ್ಗಳನ್ನು ವಿಚಾರಣೆ ನಡೆಸಲು ಅನುಮತಿ ಕೇಳಿದೆ. ಹತ್ಯೆ ಕುರಿತು ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ಸೆ.5ರಂದು ಬೆಂಗಳೂರಿನ ಆರ್.ಆರ್.ನಗರದ ನಿವಾಸದ ಮುಂದೆ ಗೌರಿ ಲಂಕೇಶ್ ಹತ್ಯೆ ನಡೆದಿತ್ತು.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್










Click it and Unblock the Notifications