ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಿರಿ : ಎಚ್ಡಿಕೆ
ಬೆಂಗಳೂರು, ಆಗಸ್ಟ್ 19 : ಬೆಂಗಳೂರಲ್ಲಿ ಹಿಂದಿ ಭಾಷೆಯಲ್ಲಿ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಕನ್ನಡಪರ ಹೋರಾಟಗಾರರ ಬಂಧನವಾಗಿದೆ. ಹೋರಾಟಗಾರರ ಮೇಲಿನ ಪ್ರಕರಣ ವಾಪಸ್ ಪಡೆಯಿರಿ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದರು.
ಎಚ್. ಡಿ. ಕುಮಾರಸ್ವಾಮಿ ಸೋಮವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. "ಮಾನ್ಯ ಮುಖ್ಯಮಂತ್ರಿಗಳೇ ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ಹಿಂಪಡೆಯಿರಿ" ಎಂದು ಆಗ್ರಹಿಸಿದರು.
ಉರ್ದು ಎಂದರೆ ಒಪ್ಪಿಗೆ, ಹಿಂದಿ ಎಂದರೆ ವಿರೋಧ ಎನ್ನುವುದು ಮೂರ್ಖತನ: ರಕ್ಷಿತ್ ಬರಹ
"ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯದ ಪಾಲಿನ ನೆರವಿನ ಹಣವನ್ನು ಪಡೆದುಕೊಂಡು ಬರುವುದರಲ್ಲಿ ತೋರಿಸಿ" ಎಂದು ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದರು.
ಹಿಂದಿ ಬ್ಯಾನರ್, ಕನ್ನಡಿಗರ ಬಂಧನ; ಏನಿದು ವಿವಾದ?
ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯ ಬಳಿ ಇರುವ ಮಾರವಾಡಿಗಳ ಗಣೇಶ್ ಬಾಗ್ ಪ್ರಾರ್ಥನಾ ಮಂದಿರದ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ಮಂದಿರದ ಮುಂದೆ ಹಿಂದಿ ಭಾಷೆಯ ಬ್ಯಾನರ್ ಹಾಕಲಾಗಿತ್ತು. ಇದನ್ನು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಹರಿದು ಹಾಕಿದ್ದಾರೆ.
ಕನ್ನಡ ಅಭಿಮಾನಿಗಳಲ್ಲಿ ಕಿಡಿ ಹಚ್ಚಿಸಿದ ತೇಜಸ್ವಿ ಸೂರ್ಯ ಟ್ವೀಟ್
ಜೈನ ಸಮುದಾಯದವರು ಈ ಕುರಿತು ಕರ್ಮರ್ಷಿಯಲ್ ಸ್ಟ್ರೀಟ್ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ 6 ಕನ್ನಡ ಪರ ಹೋರಾಟಗಾರರನ್ನು ಬಂಧಿಸಲಾಗಿದೆ. ಬಂಧನ ಖಂಡಿಸಿ ಸೋಮವಾರ ಸಂಜೆ ಟೌನ್ ಹಾಲ್ ಬಳಿ ಪ್ರತಿಭಟನೆಗೆ ಕರೆ ಕೊಡಲಾಗಿದೆ.