ಟಿಕಾಯತ್ ವಿರುದ್ಧದ ಕೇಸು ವಾಪಸ್ ಪಡೆಯಲು ಗೃಹ ಸಚಿವರಿಗೆ ಪತ್ರ

ಮೈಸೂರು, ಮಾರ್ಚ್ 24: ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ಶಿವಮೊಗ್ಗದ ಕೋಟೆ ಠಾಣೆಯಲ್ಲಿ ದಾಖಲಿಸಿರುವ ಕೇಸು ಹಾಗೂ ರಾಜ್ಯದ ಇತರೆ ಯಾವುದೇ ಠಾಣೆಗಳಲ್ಲಿ ದಾಖಲಿಸಿರುವ ಕೇಸುಗಳನ್ನು ಕೂಡಲೇ ಹಿಂಪಡೆಯುವಂತೆ ಗೃಹ ಸಚಿವರನ್ನು ಒತ್ತಾಯಿಸಲಾಗಿದೆ.

ರೈತ ಚಳವಳಿಯ ಪರವಾಗಿ ಚುಕ್ಕಿ ನಂಜುಡಸ್ವಾಮಿ, ಕೆ. ಟಿ. ಗಂಗಾಧರ್ ಸೇರಿದಂತೆ ಇತರರು ಬುಧವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರವನ್ನು ಬರೆದಿದ್ದಾರೆ.

ಕೇಂದ್ರ ಸರ್ಕಾರ ಇತ್ತೀಚೆಗೆ ತಂದ ಮೂರು ಕೃಷಿ ಕಾಯಿದೆಗಳನ್ನು ಹಿಂಪಡೆಯಬೇಕು ಮತ್ತು ಎಂಎಸ್‌ಪಿ ಶಾಸನ ಬದ್ಧಗೊಳಿಸಬೇಕೆಂಬ ಹಕ್ಕೋತ್ತಾಯದ ರೈತ ಚಳುವಳಿ ದೆಹಲಿಯ ಎಲ್ಲಾ ಗಡಿಗಳಲ್ಲಿ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವುದು ಮುಖ್ಯಾವಾಹಿನಿಯಲ್ಲಿರುವ ಮಾಧ್ಯಮಗಳ ನಿರ್ಲಕ್ಷದ ನಡುವೆಯೂ ಇಡೀ ಲೋಕಕ್ಕೆ ತಿಳಿದ ವಿಷಯವಾಗಿದೆ.

Withdraw Case Against Rakesh Tikait Letter To Home Minister

ಇದರ ಮುಂದುವರಿಕೆಯ ಭಾಗವಾಗಿ ಕರ್ನಾಟಕದಲ್ಲೂ ರೈತ ಮಹಾಪಂಚಾಯತ್ ಆಯೋಜನೆಗೊಂಡಿತ್ತು. ಮಾರ್ಚ್ 20ರಂದು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ರಾಕೇಶ್ ಟಿಕಾಯತ್ ಭಾಗವಹಿಸಿದ್ದರು.

ತಮ್ಮ ಭಾಷಣದಲ್ಲಿ "ರಾಜ್ಯದ ರೈತರು ಬೆಂಗಳೂರಿಗೆ ದಿಗ್ಭಂಧನ ಹಾಕಬೇಕು. ಟ್ರಾಕ್ಟರ್ ಗಳನ್ನೇ ಅಸ್ತ್ರವಾಗಿ ಬಳಸಬೇಕು" ಎಂದು ಹೇಳಿದ್ದರೆನ್ನಲಾದ ಅಂಶವನ್ನು ಆಧರಿಸಿ ಐಪಿಸಿ ಕಲಂ 153 ರ ಅಡಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.

ಪೊಲೀಸರ ಈ ನಡೆಯು ದೇಶದಲ್ಲಿನ ಬಂಡಾಯದ ಧ್ವನಿಗೆ ಮತ್ತು ಎಲ್ಲ ನಾಗರೀಕರಿಗೂ ಇರುವ ವಾಕ್‌ಸ್ವಾತಂತ್ರದ ಹರಣದಂತೆ ಕಾಣುತ್ತಿದೆ. ಅಷ್ಟೇ ಅಲ್ಲದೆ ಪೊಲೀಸರು ಒಂದು ಪಕ್ಷದ ವಕ್ತಾರಿಕೆಯನ್ನು ವಹಿಸಿಕೊಂಡು ಪ್ರಭುತ್ವದ ವಿರುದ್ಧದ ಧ್ವನಿಯನ್ನು ಅಡಗಿಸಲು ಕೆಲಸ ಮಾಡುತ್ತಿರುವಂತೆ ತೋರುತ್ತಿದೆ.

ಹಾಗಾಗಿ ಈ ಕೂಡಲೇ ಕರ್ನಾಟಕ ರಾಜ್ಯದಲ್ಲಿ ರಾಕೇಶ್ ಟಿಕಾಯತ್ ವಿರುದ್ಧ ದಾಖಲಿಸಿರುವ ಎಲ್ಲಾ ಕೇಸುಗಳನ್ನು ಹಿಂಪಡೆಯಬೇಕೆಂದು ಈ ಮೂಲಕ ನಾಡಿನ ಸಮಸ್ತ ರೈತ ಕುಲದ ಪರವಾಗಿ ನಮ್ಮ ಹಕ್ಕೋತ್ತಾಯವನ್ನು ಮಂಡಿಸುತ್ತಿದ್ದೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+