ನೋಟಿಸ್ ನೀಡದೆ ಗುತ್ತಿಗೆದಾರರಿಗೆ ನಿರ್ಬಂಧ ಸಲ್ಲ- ಹೈಕೋರ್ಟ್ ಆದೇಶ
ಬೆಂಗಳೂರು. ಜೂ.9: ಗುತ್ತಿಗೆದಾರರನ್ನು ಗುತ್ತಿಗೆ ಒಪ್ಪಂದದಲ್ಲಿ ಭಾಗವಹಿಸದಂತೆ ನಿರ್ಬಂಧಿಸುವ ಮತ್ತು ಕಪ್ಪು ಪಟ್ಟಿಗೆ ಸೇರಿಸುವ ಮುಂಚಿತವಾಗಿ ನೋಟಿಸ್ ನೀಡಿ ವಿವರಣೆ ಕೇಳುವುದು ಕಡ್ಡಾಯ, ನಂತರವೇ ಅಂತಿಮ ಆದೇಶ ಹೊರಡಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಮೆರ್ಸೆಸ್ ಕ್ರೆಸ್ಟ್ ಫೆಸಿಲಿಟಿ ಮ್ಯಾನೇಜ್ಮೆಂಟ್ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಎಸ್.ಜಿ. ಪಂಡಿತ್ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ.
ಅರ್ಜಿದಾರ ಕಂಪನಿಯನ್ನು ಗುತ್ತಿಗೆ ಒಪ್ಪಂದದಿಂದ ನಿರ್ಬಂಧಿಸಿ 2019ರ ಏ.5ರಂದು ನೈರುತ್ಯ ರೈಲ್ವೆ ವಲಯದ ಹಿರಿಯ ವಾಣಿಜ್ಯ ವ್ಯವಸ್ಥಾಪಕರು ಜಾರಿ ಮಾಡಿದ್ದ ಪತ್ರವನ್ನು ರದ್ದುಪಡಿಸಿದೆ.

ಕೋರ್ಟ್ ಆದೇಶವೇನು?: ಅರ್ಜಿದಾರ ಕಂಪನಿಯನ್ನು ಗುತ್ತಿಗೆ ಒಪ್ಪಂದದಿಂದ ನಿರ್ಬಂಧಿಸುವ ಮುನ್ನ ನೋಟಿಸ್ ನೀಡಿ ಕೇಟರಿಂಗ್ ಸೇವೆ ಆರಂಭಿಸದ ಬಗ್ಗೆ ವಿವರಣೆ ಕೇಳಿಲ್ಲ. ಇದರಿಂದ ಕಂಪನಿಗೆ ನೀಡಿರುವ ಪತ್ರ ರದ್ದುಪಡಿಸಲು ಅರ್ಹವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕಂಪನಿಗೆ ಅವಕಾಶ ಕೊಟ್ಟು ಕೇಟರಿಂಗ್ ಸೇವೆ ಆರಂಭಿಸದ ಬಗ್ಗೆ ವಿವರಣೆ ಪಡೆಯಬೇಕು. ನಂತರ ತನ್ನ ಅಂತಿಮ ಆದೇಶ ಹೊರಡಿಸಬಹುದು ಎಂದು ರೈಲ್ವೆ ಇಲಾಖೆ ನಿರ್ದೇಶಿಸಿದೆ.
''ಗುತ್ತಿಗೆದಾರರನ್ನು ಗುತ್ತಿಗೆ ಒಪ್ಪಂದದಲ್ಲಿ ಭಾಗವಹಿಸದಂತೆ ನಿರ್ಬಂಧಿಸುವ ಮತ್ತು ಕಪ್ಪು ಪಟ್ಟಿಗೆ ಸೇರಿಸುವುದರಿಂದ ಅವರನ್ನು ಗುತ್ತಿಗೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಕಾಶ ಕಸಿದುಕೊಂಡಂತಾಗುತ್ತದೆ. ಜತೆಗೆ, ಇದು ಸಿವಿಲ್ ವ್ಯಾಜ್ಯಗಳಿಗೆ ದಾರಿ ಮಾಡಿಕೊಡುತ್ತದೆ. ಗುತ್ತಿಗೆದಾರನ ಜೀವನ ಹಕ್ಕು ಚ್ಯುತಿಯಾಗುತ್ತದೆ'' ಎಂದು ಹೈಕೋರ್ಟ್ ಹೇಳಿದೆ.

ಜತೆಗೆ, ಅಧಿಕಾರಿಗಳು ಗುತ್ತಿಗೆದಾರರನ್ನು ಗುತ್ತಿಗೆ ಒಪ್ಪಂದಲ್ಲಿ ಭಾಗಹಿಸದಂತೆ ನಿರ್ಬಂಧಿಸುವ ಹಾಗೂ ಕಪ್ಪುಪಟ್ಟಿಗೆ ಸೇರಿಸುವ ಮುನ್ನ ಆ ಸಂಬಂಧ ನೋಟಿಸ್ ಜಾರಿಗೊಳಿಸಬೇಕು. ಯಾವ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂಬ ಬಗ್ಗೆ ತಿಳಿಸಬೇಕು ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ನೈರುತ್ಯ ರೈಲ್ವೆ ಇಲಾಖೆಯು ಹೌಸ್ ಕೀಪಿಂಗ್, ಕೇಟರಿಂಗ್ ಮತ್ತು ಸರಕು ಲೋಡಿಂಗ್-ಅನ್ಲೋಡಿಂಗ್ ಸೇವೆಗಳಿಗೆ ಟೆಂಡರ್ ಕರೆದಿತ್ತು. ಅರ್ಜಿದಾರ ಸಂಸ್ಥೆ ಕೇಟರಿಂಗ್ ಸೇವೆಯ ಟೆಂಡರ್ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಆದರೆ, ಟೆಂಡರ್ ಅನ್ನು ಒಪ್ಪಿಕೊಂಡಿದ್ದ ನಂತರವೂ ಸೇವೆ ಆರಂಭಿಸುವಲ್ಲಿ ಕಂಪನಿ ವಿಫಲವಾಗಿದೆ ಎಂದು ತಿಳಿಸಿ ರೈಲ್ವೆ ಇಲಾಖೆಯು ಕಂಪನಿ ಗುತ್ತಿಗೆ ಒಪ್ಪಂದವನ್ನು ನಿರ್ಬಂಧಿಸಿತ್ತು. ಆ ಕುರಿತು ಕಂಪನಿಗೆ 2019ರ ಏ.5ರಂದು ರೈಲ್ವೆ ಇಲಾಖೆ ಪತ್ರ ಕಳುಹಿಸಿತ್ತು. ಇದರಿಂದ ಕಂಪನಿ ಹೈಕೋರ್ಟ್ ಮೆಟ್ಟಿಲೇರಿತ್ತು.
Recommended Video
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications