Bengaluru Bandh: ಭಾಷಾತೀತವಾಗಿ, ಜಾತ್ಯಾತೀತವಾಗಿ ಎಲ್ಲರೂ ಬಂದ್ಗೆ ಬೆಂಬಲ ನೀಡಿ: ಮುಖ್ಯಮಂತ್ರಿ ಚಂದ್ರು
ಬೆಂಗಳೂರು, ಸೆಪ್ಟೆಂಬರ್ 25: ಕಾವೇರಿ ನೀರಿಗಾಗಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದ್ದು, ಭಾಷಾತೀತವಾಗಿ, ಜಾತ್ಯಾತೀತವಾಗಿ ಎಲ್ಲರೂ ಬಂದ್ಗೆ ಬೆಂಬಲ ನೀಡಬೇಕು. ಎಲ್ಲರಿಗೂ ನೀರು ಅನಿವಾರ್ಯವಾಗಿದ್ದು, ಎಲ್ಲರೂ ಬೀದಿಗಿಳಿಯಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಮನವಿ ಮಾಡಿದರು.
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹಾಗೂ ಕುರುಬೂರು ಶಾಂತಕುಮಾರ್ ಅವರ ನೇತೃತ್ವದ ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಿರುವ ಬೆಂಗಳೂರು ಬಂದ್ಗೆ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಪಕ್ಷಾತೀತವಾಗಿ ಎಲ್ಲರೂ ಬಂದ್ಗೆ ಬೆಂಬಲ ನೀಡಿದ್ದಾರೆ. ನೀರು ಖಾಲಿಯಾದ ಮೇಲೆ ಹೋರಾಟ ಮಾಡಿ ಪ್ರಯೋಜನ ಇಲ್ಲ. ತಕ್ಷಣವೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು, ಅಧಿವೇಶನ ಕರೆದು ಚರ್ಚೆ ನಡೆಸಿ ಸಂಕಷ್ಟ ಸೂತ್ರ ಜಾರಿ ಮಾಡುವವರೆಗೆ ನೀರು ಬಿಡುವುದಿಲ್ಲ ಎಂದು ನಿರ್ಣಯ ತೆಗೆದುಕೊಳ್ಳಬೇಕು. ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಕಾವೇರಿ ಪ್ರಾಧಿಕಾರದ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ವಾಸ್ತವ ಅರಿಯದೇ ಆದೇಶ ಮಾಡುತ್ತಿದ್ದು, ಇವುಗಳನ್ನು ರದ್ದು ಮಾಡಿ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವ ಮಂಡಳಿ ರಚಿಸಲು ಒತ್ತಾಯಿಸಿ ಬಂದ್ಗೆ ಕರೆ ನೀಡಲಾಗಿದೆ ಎಂದರು.
ಎಪಿಎಂಸಿ ಕಾರ್ಯಕರ್ತರ ಸಂಘ, ಸಮತಾ ಸೈನಿಕ ದಳ, ಉದ್ಯಮಿಗಳ ಸಂಸ್ಥೆ, ಕರ್ನಾಟಕ ಸಾಂಸ್ಕೃತಿಕ ವೇದಿಕೆ, ವಿವಿಧ ನೌಕರರ ಸಂಘ, ಬಿಎಂಟಿಸಿ ಚಾಲಕರ ಸಂಘ, ರೈತಪರ ಸಂಘಟನೆಗಳು, ಕನ್ನಡ ಪರ ಹೋರಾಟಗಾರರ ಸಂಘಟನೆಗಳು, ಆಟೋ ಚಾಲಕರ ಸಂಘಟನೆಗಳು, ಟ್ಯಾಕ್ಸಿ ಕ್ಯಾಬ್ ಚಾಲಕರ ಸಂಘಟನೆಗಳು, ಸಾರಿಗೆ ಸಂಘಟನೆಗಳು, ಐಟಿಬಿಟಿ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಸಂಘಗಳು, ಕಲಾವಿದರ ಸಂಘಗಳು, ಹೋಟೆಲ್ ಮಾಲಿಕರ ಸಂಘಟನೆಗಳು, ರಾಜಕೀಯ ಪಕ್ಷಗಳು, ಬೆಂಗಳೂರು ರಸ್ತೆ ಬದಿ ವ್ಯಾಪಾರಿಗಳ ಸಂಘ, ಬಿಬಿಎಂಪಿ ನೌಕರರ ಸಂಘ ಸೇರಿದಂತೆ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.
ಸೆಪ್ಟೆಂಬರ್ 26ರಂದು ಬೆಳಗ್ಗೆ 11 ಗಂಟೆಗೆ ಟೌನ್ಹಾಲ್ ಬಳಿ ಸೇರಲಾಗುವುದು. ಅಲ್ಲಿಂದ ಮೆರವಣಿಗೆ ಮೂಲಕ ಫ್ರೀಡಂ ಪಾರ್ಕ್ಗೆ ಬಂದು ಸೇರಲಾಗುವುದು. ಅಲ್ಲಿ ಪ್ರತಿಭಟನೆ ನಡೆಸಲಾಗುವುದು. ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯ ಪತ್ರ ನೀಡಲಾಗುವುದು. ಅವರು ಸರಿಯಾಗಿ ಸ್ಪಂದಿಸದಿದ್ದರೆ, ಹೋರಾಟ ತೀವ್ರಗೊಳಿಸಲಾಗುವುದು. ರಾಮನಗರ, ಮಂಡ್ಯ, ಮಳವಳ್ಳಿ, ಟಿ ನರಸೀಪುರ ಸೇರಿದಂತೆ ಹಲವು ಕಡೆಗಳಲ್ಲಿ ಬಂದ್ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಲಿದ್ದಾರೆ ಎಂದರು.
ಶಾಂತಿಯುತವಾಗಿ ಬಂದ್ ಆಚರಿಸಬೇಕು. ಬಂದ್ ಬೆಂಬಲಿಸುವ ಸಂಘಟನೆಗಳು ಕೂಡ ಶಾಂತ ರೀತಿಯಿಂದ ಜನರ ಮನವೊಲಿಸಿ ಬಂದ್ ಮಾಡಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬಾರದು. ಹೋರಾಟ ಹತ್ತಿಕ್ಕಲು ದುಷ್ಟಶಕ್ತಿಗಳು ಕೂಡ ಪ್ರಯತ್ನಿಸಬಹುದು. ಪೊಲೀಸರು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಒತ್ತಾಯಿಸಿದರು.
ಆಮ್ ಆದ್ಮಿ ಪಾರ್ಟಿಯ ಬೆಂಗಳೂರಿನ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಬೆಂಗಳೂರಿನ ಸುತ್ತಮುತ್ತಲಿರುವ ಎಲ್ಲಾ ಜಿಲ್ಲಾ ತಂಡಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಡಾ. ಮುಖ್ಯಮಂತ್ರಿ ಚಂದ್ರು ಹಾಗೂ ಉಪಾಧ್ಯಕ್ಷರಾದ ಮೋಹನ್ ದಾಸರಿ ಮನವಿ ಮಾಡಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications