ವಾರೆಂಟ್ ಇಲ್ಲದೆ ಮದ್ಯದಂಗಡಿ ಮೇಲೆ ದಾಳಿ ನಡೆಸುವಂತಿಲ್ಲ:ಹೈಕೋರ್ಟ್ ಆದೇಶ
ಬೆಂಗಳೂರು ಡಿಸೆಂಬರ್ 28: ಮದ್ಯದಂಗಡಿ ಮೇಲೆ ದೂರು ಬಂದಾಗ ವಾರೆಂಟ್ ಇಲ್ಲದೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.
ಕೊಪ್ಪಳದ ಎಂ.ಸುದರ್ಶನಗೌಡ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಪೀಠ ಈ ಆದೇಶ ಮಾಡಿದೆ.
ಸಿಎಲ್-2 ಪರವಾನಗಿ ಷರತ್ತು ಉಲ್ಲಂಘನೆ ಸಂಬಂಧ ತಮ್ಮ ಮದ್ಯದಂಗಡಿ ಮೇಲೆ ವಾರೆಂಟ್ ಇಲ್ಲದೆ ದಾಳಿ ನಡೆಸಿ ಬಳಿಕ ಎಫ್ಐಆರ್ ದಾಖಲಿಸಿದ ಅಬಕಾರಿ ಇನ್ಸ್ಪೆಕ್ಟರ್ ಕ್ರಮವನ್ನು ಅರ್ಜಿದಾರರ ಪ್ರಶ್ನಿಸಿದ್ದರು.
ಮದ್ಯ ಮಾರಾಟಕ್ಕೆ ಮಾತ್ರ ಪರವಾನಗಿ ಪಡೆದಿದ್ದರೂ ಮದ್ಯಪಾನಕ್ಕೆ ಸ್ಥಳಾವಕಾಶ ಕಲ್ಪಿಸಿದ ಮತ್ತು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಿದ ಪ್ರಕರಣದಲ್ಲಿ ಈ ಆದೇಶವನ್ನು ಮಾಡಿದೆ.

ಸಿಎಲ್-2 ಪರವಾನಗಿದಾರರು ಪರವಾನಗಿ ಷರತ್ತು ಉಲ್ಲಂಘಿಸಿರುವ ಪ್ರಕರಣದಲ್ಲಿ ಅಬಕಾರಿ ನಿರೀಕ್ಷಕರು ವಾರೆಂಟ್ ಪಡೆದು ದಾಳಿ ನಡೆಸಬೇಕು. ಇಲ್ಲವೇ ಷರತ್ತು ಉಲ್ಲಂಘನೆಯಾಗಿದೆ ಎಂದು ತಿಳಿದುಬಂದರೆ, ಶೋಧ ನಡೆಸುವುದಕ್ಕೆ ಇರುವ ಅಗತ್ಯ ಕಾರಣಗಳನ್ನು ದಾಖಲಿಸಿದ ಬಳಿಕ ಮದ್ಯದಂಗಡಿ ಮೇಲೆ ದಾಳಿ ನಡೆಸಿ ಶೋಧ ಮಾಡಬಹುದು. ಜೊತೆಗೆ, ಅಲ್ಲಿ ಅಕ್ರಮ ನಡೆಯುತ್ತಿದ್ದರೆ ಜಪ್ತಿ ಕಾರ್ಯ ಮಾಡಬಹುದು. ಆದರೆ, ವಾರೆಂಟ್ ಇಲ್ಲದೆ ದಾಳಿ ನಡೆಸುವಂತಿಲ್ಲ ಎಂದು ಆದೇಶದಲ್ಲಿ ನ್ಯಾಯಪೀಠ ಅಭಿಪ್ರಾಯಟ್ಟಿದೆ.
ಅರ್ಜಿದಾರರ ವಾದ ಪರಿಗಣಿಸಿದ ನ್ಯಾಯಾಲಯ, ಅಬಕಾರಿ ಅಧಿಕಾರಿಗಳು ವಾರೆಂಟ್ ಇಲ್ಲದೆ ದಾಳಿ ಮಾಡಿ ಶೋಧ ನಡೆಸಿದ ಹಿನ್ನೆಲೆಯಲ್ಲಿ ಅರ್ಜಿದಾರರ ವಿರುದ್ಧ ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸಿದೆ.
ಪ್ರಕರಣದ ಹಿನ್ನೆಲೆ:
ಅರ್ಜಿದಾರ ಎಂ.ಸುದರ್ಶನ್ಗೌಡ ಕೊಪ್ಪಳ ಜಿಲ್ಲೆಯ ಆಗಲಕೆರೆ ಎಂಬಲ್ಲಿ ಸಿಎಲ್-2 ಪರವಾನಿಗೆ ಪಡೆದಿದ್ದರು. ಈ ಮಳಿಗೆಯಲ್ಲಿ ಮಾರಾಟಕ್ಕೆ ಮಾತ್ರ ಅವಕಾಶವಿದ್ದರೂ, ಗ್ರಾಹಕರಿಗೆ ಮದ್ಯಪಾನ ಮಾಡಲು ಅವಕಾಶ ನೀಡಿದ ಮತ್ತು ಎಂಆರ್ಪಿಗಿಂತ (ಗರಿಷ್ಠ ಚಿಲ್ಲರೆ ದರ) ಅಧಿಕ ದರಕ್ಕೆ ಮದ್ಯಬಾಟಲಿ ಮಾರಾಟ ಮಾಡಿದ ಸಂಬಂಧ ಅರ್ಜಿದಾರರ ಮೇಲೆ ಆರೋಪ ಕೇಳಿಬಂದಿತ್ತು.
ಹಾಗಾಗಿ ಕೊಪ್ಪಳ ವಲಯ ಅಬಕಾರಿ ನಿರೀಕ್ಷಕರು, ಅರ್ಜಿದಾರರ ಮದ್ಯದಂಗಡಿ ಮೇಳೆ ದಾಳಿ ನಡೆಸಿ ಶೋಧ ನಡೆಸಿದ್ದರು. ನಂತರ ಎಫ್ಐಆರ್ ದಾಖಲಿಸಿದ್ದರು. ಅದನ್ನು ರದ್ದುಪಡಿಸಲು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಸುದರ್ಶನ್, ವಾರೆಂಟ್ ಇಲ್ಲದೆ ದಾಳಿ ನಡೆಸಲಾಗಿದೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ವಾದ ಮಂಡಿಸಿದ್ದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications