ವಾರೆಂಟ್ ಇಲ್ಲದೆ ಮದ್ಯದಂಗಡಿ ಮೇಲೆ ದಾಳಿ ನಡೆಸುವಂತಿಲ್ಲ:ಹೈಕೋರ್ಟ್ ಆದೇಶ
ಬೆಂಗಳೂರು ಡಿಸೆಂಬರ್ 28: ಮದ್ಯದಂಗಡಿ ಮೇಲೆ ದೂರು ಬಂದಾಗ ವಾರೆಂಟ್ ಇಲ್ಲದೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.
ಕೊಪ್ಪಳದ ಎಂ.ಸುದರ್ಶನಗೌಡ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಪೀಠ ಈ ಆದೇಶ ಮಾಡಿದೆ.
ಸಿಎಲ್-2 ಪರವಾನಗಿ ಷರತ್ತು ಉಲ್ಲಂಘನೆ ಸಂಬಂಧ ತಮ್ಮ ಮದ್ಯದಂಗಡಿ ಮೇಲೆ ವಾರೆಂಟ್ ಇಲ್ಲದೆ ದಾಳಿ ನಡೆಸಿ ಬಳಿಕ ಎಫ್ಐಆರ್ ದಾಖಲಿಸಿದ ಅಬಕಾರಿ ಇನ್ಸ್ಪೆಕ್ಟರ್ ಕ್ರಮವನ್ನು ಅರ್ಜಿದಾರರ ಪ್ರಶ್ನಿಸಿದ್ದರು.
ಮದ್ಯ ಮಾರಾಟಕ್ಕೆ ಮಾತ್ರ ಪರವಾನಗಿ ಪಡೆದಿದ್ದರೂ ಮದ್ಯಪಾನಕ್ಕೆ ಸ್ಥಳಾವಕಾಶ ಕಲ್ಪಿಸಿದ ಮತ್ತು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಿದ ಪ್ರಕರಣದಲ್ಲಿ ಈ ಆದೇಶವನ್ನು ಮಾಡಿದೆ.

ಸಿಎಲ್-2 ಪರವಾನಗಿದಾರರು ಪರವಾನಗಿ ಷರತ್ತು ಉಲ್ಲಂಘಿಸಿರುವ ಪ್ರಕರಣದಲ್ಲಿ ಅಬಕಾರಿ ನಿರೀಕ್ಷಕರು ವಾರೆಂಟ್ ಪಡೆದು ದಾಳಿ ನಡೆಸಬೇಕು. ಇಲ್ಲವೇ ಷರತ್ತು ಉಲ್ಲಂಘನೆಯಾಗಿದೆ ಎಂದು ತಿಳಿದುಬಂದರೆ, ಶೋಧ ನಡೆಸುವುದಕ್ಕೆ ಇರುವ ಅಗತ್ಯ ಕಾರಣಗಳನ್ನು ದಾಖಲಿಸಿದ ಬಳಿಕ ಮದ್ಯದಂಗಡಿ ಮೇಲೆ ದಾಳಿ ನಡೆಸಿ ಶೋಧ ಮಾಡಬಹುದು. ಜೊತೆಗೆ, ಅಲ್ಲಿ ಅಕ್ರಮ ನಡೆಯುತ್ತಿದ್ದರೆ ಜಪ್ತಿ ಕಾರ್ಯ ಮಾಡಬಹುದು. ಆದರೆ, ವಾರೆಂಟ್ ಇಲ್ಲದೆ ದಾಳಿ ನಡೆಸುವಂತಿಲ್ಲ ಎಂದು ಆದೇಶದಲ್ಲಿ ನ್ಯಾಯಪೀಠ ಅಭಿಪ್ರಾಯಟ್ಟಿದೆ.
ಅರ್ಜಿದಾರರ ವಾದ ಪರಿಗಣಿಸಿದ ನ್ಯಾಯಾಲಯ, ಅಬಕಾರಿ ಅಧಿಕಾರಿಗಳು ವಾರೆಂಟ್ ಇಲ್ಲದೆ ದಾಳಿ ಮಾಡಿ ಶೋಧ ನಡೆಸಿದ ಹಿನ್ನೆಲೆಯಲ್ಲಿ ಅರ್ಜಿದಾರರ ವಿರುದ್ಧ ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸಿದೆ.
ಪ್ರಕರಣದ ಹಿನ್ನೆಲೆ:
ಅರ್ಜಿದಾರ ಎಂ.ಸುದರ್ಶನ್ಗೌಡ ಕೊಪ್ಪಳ ಜಿಲ್ಲೆಯ ಆಗಲಕೆರೆ ಎಂಬಲ್ಲಿ ಸಿಎಲ್-2 ಪರವಾನಿಗೆ ಪಡೆದಿದ್ದರು. ಈ ಮಳಿಗೆಯಲ್ಲಿ ಮಾರಾಟಕ್ಕೆ ಮಾತ್ರ ಅವಕಾಶವಿದ್ದರೂ, ಗ್ರಾಹಕರಿಗೆ ಮದ್ಯಪಾನ ಮಾಡಲು ಅವಕಾಶ ನೀಡಿದ ಮತ್ತು ಎಂಆರ್ಪಿಗಿಂತ (ಗರಿಷ್ಠ ಚಿಲ್ಲರೆ ದರ) ಅಧಿಕ ದರಕ್ಕೆ ಮದ್ಯಬಾಟಲಿ ಮಾರಾಟ ಮಾಡಿದ ಸಂಬಂಧ ಅರ್ಜಿದಾರರ ಮೇಲೆ ಆರೋಪ ಕೇಳಿಬಂದಿತ್ತು.
ಹಾಗಾಗಿ ಕೊಪ್ಪಳ ವಲಯ ಅಬಕಾರಿ ನಿರೀಕ್ಷಕರು, ಅರ್ಜಿದಾರರ ಮದ್ಯದಂಗಡಿ ಮೇಳೆ ದಾಳಿ ನಡೆಸಿ ಶೋಧ ನಡೆಸಿದ್ದರು. ನಂತರ ಎಫ್ಐಆರ್ ದಾಖಲಿಸಿದ್ದರು. ಅದನ್ನು ರದ್ದುಪಡಿಸಲು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಸುದರ್ಶನ್, ವಾರೆಂಟ್ ಇಲ್ಲದೆ ದಾಳಿ ನಡೆಸಲಾಗಿದೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ವಾದ ಮಂಡಿಸಿದ್ದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
ಪಬ್-ವೈನ್ ಸೆಂಟರ್ಗಳಿಗೆ ಅಪ್ರಾಪ್ತರ ಪ್ರವೇಶ ನಿಷೇಧಕ್ಕೆ ಹೈಕೋರ್ಟ್ ಸೂಚನೆ; ಐಡಿ ಪರಿಶೀಲಿಸಲು ಸಲಹೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ












Click it and Unblock the Notifications