ಮಲ್ಲಿಕಾರ್ಜುನ ಖರ್ಗೆ, ಪಕ್ಷದ ವರ್ಚಸ್ಸಿಗಾಗಿ ಆಡಿದ್ದಕಿಂತ, ನುಂಗಿದ್ದೇ ಹೆಚ್ಚು: ಆ ಸ್ಥಾನ ಅವರಿಗೆ ಒಲಿಯುತ್ತಾ?
ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಯಾರಿಗೆ ಒಲಿಯಲಿದೆ ಎನ್ನುವ ಹೊಸ ಚರ್ಚೆ ಸದ್ಯಕ್ಕೆ ಆರಂಭವಾಗಿದೆ. ಇದನ್ನು ಅಂತಿಮಗೊಳಿಸಲು ಇನ್ನೂ ಐದಾರು ತಿಂಗಳ ಸಮಯವಿದ್ದರೂ, ಅದಕ್ಕಾಗಿ ಕೆಲವು ಹಿರಿಯರಿಂದ ಲಾಬಿ ಆರಂಭವಾಗಿದೆ ಎನ್ನುವ ಮಾತು ಕೇಳಿಬರುತ್ತಿದೆ.
Recommended Video
ಮೋದಿ ಸರಕಾರದ ಮೊದಲ ಅವಧಿಯಲ್ಲಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ, 2019ರ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಸೋನಿಯಾ ಗಾಂಧಿಗೆ ಬೇರೆ ದಾರಿಯಿಲ್ಲದೇ, ಅಧೀರ್ ರಂಜನ್ ಚೌಧುರಿಯವರನ್ನು ಕಾಂಗ್ರೆಸ್ಸಿನ ನಾಯಕರನ್ನಾಗಿ ಮಾಡಿದ್ದರು.
ಆದರೆ, ಖರ್ಗೆಯವರ ಮಾತಿನ ತೂಕ, ಚೌಧುರಿಯವರ ಲೂಸ್ ಟಾಕ್ ನಡುವೆ, ಕಾಂಗ್ರೆಸ್ಸಿನೊಳಗೆಯೇ ತುಲನೆಯಾಗಿತ್ತು. ಯಾಕೆಂದರೆ, ಹಲವು ಬಾರಿ ಮೋದಿ ಸರಕಾರವನ್ನು ಟೀಕಿಸಲು ಹೋಗಿ, ಖುದ್ದು ,ಕಾಂಗ್ರೆಸ್ ಪಕ್ಷವೇ ಮುಜುಗರ ಎದುರಿಸಬೇಕಾಯಿತು.
ಹಾಲೀ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಗುಲಾಂ ನಬಿ ಆಜಾದ್ ಅವರ ಅವಧಿ ಫೆಬ್ರವರಿ 15, 2021ಕ್ಕೆ ಮುಕ್ತಾಯಗೊಳ್ಳಲಿದೆ. ಆ ಸ್ಥಾನಕ್ಕೆ, ಕಾಂಗ್ರೆಸ್ಸಿನ ಹಿರಿಯ ಮುಖಂಡರೊಬ್ಬರು ಈಗಲೇ ಟವೆಲ್ ಹಾಕಿದ್ದಾರಂತೆ.

ರಾಜ್ಯಸಭೆಯಲ್ಲಿ ಕಾಂಗ್ರೆಸ್ಸಿನ ಬಲ ನಲವತ್ತು
ಕಾಂಗ್ರೆಸ್ಸಿಗೆ, ರಾಜ್ಯಸಭೆಯಲ್ಲಿ ತಮ್ಮ ಪಕ್ಷವನ್ನು ಮುನ್ನಡೆಸಲು ಹಲವು ಸಮರ್ಥ ನಾಯಕರಿದ್ದಾರೆ. ಆದರೆ, ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗದಂತೆ, ಸಮರ್ಥವಾಗಿ ವಿಚಾರ ಮಂಡಿಸುವ ವಿಚಾರಕ್ಕೆ ಬಂದಾಗ, ಹೈಕಮಾಂಡ್ ಆಯ್ಕೆ ಮಲ್ಲಿಕಾರ್ಜುನ ಖರ್ಗೆ ಆಗುವ ಸಾಧ್ಯತೆಯಿದೆ. ಆದರೆ, ಇತ್ತೀಚೆಗಷ್ಟೇ ಮಧ್ಯಪ್ರದೇಶದ ಕೋಟಾದಿಂದ ಆಯ್ಕೆಯಾದ ಹಿರಿಯ ಮುಖಂಡರೊಬ್ಬರು ಈಗಾಗಲೇ ಲಾಬಿ ಆರಂಭಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ರಾಜ್ಯಸಭಾ ಸದಸ್ಯರಾಗಿರುವ ದಿಗ್ವಿಜಯ್ ಸಿಂಗ್
ಕಳೆದ ಜೂನ್ ತಿಂಗಳಲ್ಲಿ ರಾಜ್ಯಸಭಾ ಸದಸ್ಯರಾಗಿರುವ ದಿಗ್ವಿಜಯ್ ಸಿಂಗ್, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಪ್ರಯತ್ನಿಸುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಹೈಕಮಾಂಡ್ ಜೊತೆಗೆ ಉತ್ತಮ ಬಾಂಧವ್ಯ ದಿಗ್ವಿಜಯ್ ಸಿಂಗ್ ಇಟ್ಟುಕೊಂಡಿದ್ದರೂ, ಅವರಿಗೆ ಕೆಲವೊಮ್ಮೆ ನಾಲಿಗೆ ಮೇಲೆ ಹಿಡಿತ ಕಮ್ಮಿ ಎನ್ನುವುದು ಹಲವು ಬಾರಿ ರುಜುವಾತಾಗಿದೆ.

ಸೋನಿಯಾ ಗಾಂಧಿ ಇನ್ನೂ ಚಿಂತಿಸಿರಲಿಕ್ಕಿಲ್ಲ
ಅಹಮದ್ ಪಟೇಲ್, ಆನಂದ್ ಶರ್ಮಾ, ಜೈರಾಂ ರಮೇಶ್, ಪಿ.ಚಿದಂಬರಂ, ಕಪಿಲ್ ಸಿಬಲ್, ಎ.ಕೆ.ಆಂಟನಿ, ಕೆ.ಸಿ.ವೇಣುಗೋಪಾಲ್, ಅಭಿಷೇಕ್ ಮನು ಸಿಂಘ್ವಿ ಮುಂತಾದ ನಾಯಕರು ಕಾಂಗ್ರೆಸ್ಸಿನಲ್ಲಿದ್ದಾರೆ. ಇದರಲ್ಲಿ ಕೆಲವರಿಗೆ ಆರೋಗ್ಯದ ಸಮಸ್ಯೆ, ಇನ್ನಷ್ಟು ಜನರಿಗೆ ಪಕ್ಷ ಸಂಘಟನೆಯ ಜವಾಬ್ದಾರಿ ಇರುವುದರಿಂದ, ಮತ್ತು, ಇದಕ್ಕೆ ಇನ್ನೂ ಸಮಯ ಇರುವುದರಿಂದ, ಯಾರಿಗೆ ಈ ಸ್ಥಾನ ಕೊಡಬೇಕು ಎನ್ನುವುದರ ಬಗ್ಗೆ, ಸೋನಿಯಾ ಗಾಂಧಿ ಇನ್ನೂ ಚಿಂತಿಸಿರಲಿಕ್ಕಿಲ್ಲ.

ದಲಿತ ಸಿಎಂ ಎನ್ನುವ ವಿಚಾರ ಬಂದಾಗಲೆಲ್ಲಾ ಖರ್ಗೆಯವರ ಹೆಸರು ಮುನ್ನಲೆಗೆ
ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಮುಖ್ಯಮಂತ್ರಿಯಾಗಬೇಕಾಗಿತ್ತು ಎನ್ನುವ ಮಾತು ಅದೆಷ್ಟೋ ಬಾರಿ ಕೇಳಿಬಂದಿತ್ತು. ದಲಿತ ಸಿಎಂ ಎನ್ನುವ ವಿಚಾರ ಬಂದಾಗಲೆಲ್ಲಾ ಖರ್ಗೆಯವರ ಹೆಸರು ಮುನ್ನಲೆಗೆ ಬರುತ್ತಿತ್ತು. ದಲಿತ ಎನ್ನುವ ಕಾರಣಕ್ಕಾಗಿ, ನಾನು ಸಿಎಂ ಆಗಬೇಕಾಗಿಲ್ಲ ಎಂದು ಖರ್ಗೆ ಸ್ಪಷ್ಟನೆಯನ್ನೂ ನೀಡಿದ್ದರು. ಯಾವುದನ್ನೂ ಡಿಮಾಂಡ್ ಮಾಡದೇ, ಹೈಕಮಾಂಡ್ ಮಾತಿಗೆ ಎಂದಿಗೂ ವಿರೋಧಿಸದೇ, ಪಕ್ಷದ ವರ್ಚಸ್ಸಿಗಾಗಿ ಆಡಿದ್ದಕಿಂತ, ನುಂಗಿದ್ದೇ ಹೆಚ್ಚು ಎನ್ನಬಹುದಾದ, ಖರ್ಗೆಯವರಿಗೆ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸಿಕ್ಕರೆ ಆಶ್ಚರ್ಯವಿಲ್ಲ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications