BJP MLA Munirathna: ಖಾಸಗಿ ರೆಸಾರ್ಟ್ ನಲ್ಲಿ ಅತ್ಯಾಚಾರ; ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ದೂರು
ಬೆಂಗಳೂರು, ಸೆಪ್ಟೆಂಬರ್ 19: ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಹಲವು ಪ್ರಕರಣಗಳು ತಡವಾಗಿ ಬೆಳಕಿಗೆ ಬರುತ್ತಿದ್ದು, ಇದೀಗ ಅತ್ಯಾಚಾರ ಕುರಿತು ದೂರು ದಾಖಲಿಸಿದ್ದಾರೆ.
ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್ನಲ್ಲಿ ಮುನಿರತ್ನ ಅವರ ವಿರುದ್ಧ ಒಕ್ಕಲಿಗ, ದಲಿತ ಸಂಘಟನೆಗಳು ಸರಣಿ ಪ್ರತಿಭಟನೆ ಮಾಡ್ತಿವೆ. ಕಾಂಗ್ರೆಸ್ಗೆ ಈ ಪ್ರಕರಣವೇ ದೊಡ್ಡ ಅಸ್ತ್ರವಾಗಿ ಸಿಕ್ಕಿದ್ದು, ಇದೀಗ ಮುನಿರತ್ನಗೆ ಮತ್ತೊಂದು ಕಂಟಕ ಎದುರಾಗಿದೆ.

ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಮುನಿರತ್ನ ವಿರುದ್ಧ ರಾಮನಗರದ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನನ್ನ ಮೇಲೆ ಅತ್ಯಾಚಾರ ಆಗಿದೆ. ಕಗ್ಗಲೀಪುರದ ರೆಸಾರ್ಟ್ನಲ್ಲಿ ಈ ಕೃತ್ಯ ನಡೆದಿದೆ ಎಂದು ಮಹಿಳೆಯೊಬ್ಬರು ಆರೋಪಿಸಿ ಮುನಿರತ್ನ ವಿರುದ್ಧ ದೂರು ನೀಡಿದ್ದಾರೆ. ಮುನಿರತ್ನ ಸೇರಿ ಒಟ್ಟು 7 ಜನರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಅಂತೆಯೇ ಪೊಲೀಸರು ಬಿಎನ್ಎಸ್ 354ಎ, 354 ಸಿ, 376, 506, 504, 120(B), 149, 384, 406, 308 ಅಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು DySP ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದಾರೆ. ಡಿವೈಎಸ್ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹಾಜರಾಗಿ ಸಂತ್ರಸ್ತೆ 2 ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಇಂದು ಸಂತ್ರಸ್ತೆ ಜೊತೆ ಪೊಲೀಸರು ಸ್ಥಳಮಹಜರು ನಡೆಸಲಿದ್ದಾರೆ.
7 ಮಂದಿ ವಿರುದ್ಧ FIR!
ಎ1 ಮುನಿರತ್ನ ನಾಯ್ಡು
ಎ2 ವಿಜಯ್ ಕುಮಾರ್
ಎ3 ಸುಧಾಕರ್
ಎ4 ಕಿರಣ್ ಕುಮಾರ್
ಎ5 ಲೋಹಿತ್ ಗೌಡ
ಎ6 ಮಂಜುನಾಥ್
ಎ7 ಲೋಕಿ
ಇಂದು ಮುನಿರತ್ನ ಭವಿಷ್ಯ ನಿರ್ಧಾರ
ವಿಚಾರಣಾಧೀನ ಕೈದಿಯಾಗಿರೋ ಮುನಿರತ್ನಗೆ ಗುತ್ತಿಗೆದಾರ ಚಲುವರಾಜು ದಾಖಲಿಸಿದ್ದ ವಂಚನೆ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದ್ರೆ ಜಾತಿ ನಿಂದನೆ ಕೇಸ್ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿರುವ ಜಾಮೀನು ಅರ್ಜಿ ಭವಿಷ್ಯ ಇಂದು ನಿರ್ಧಾರವಾಗಲಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications