ಯಡಿಯೂರಪ್ಪ ವಿರುದ್ಧ ಪೋಕ್ಸೋ ದಾಖಲಿಸಿದ್ದ ಮಹಿಳೆ ಸಾವು
ಬೆಂಗಳೂರು, ಮೇ 27: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣದ ದಾಖಲಾಗಿತ್ತು, ಸಿಐಡಿ ಪ್ರಕರಣದ ತನಿಖೆ ನಡೆಸುತ್ತಿದೆ.
17 ವರ್ಷದ ತಮ್ಮ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಮಾರ್ಚ್ 14ರಂದು ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣದ ದಾಖಲು ಮಾಡಲಾಗಿತ್ತು.

ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದ ಮಹಿಳೆ ಮೇ 26ರ ಭಾನುವಾರ ಬೆಂಗಳೂರಿನ ಹುಳಿಮಾವು ಪ್ರದೇಶದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಉಸಿರಾಟದ ತೊಂದರೆಯ ಕಾರಣ ಮಹಿಳೆ ಆಸ್ಪತ್ರೆಗೆ ಭೇಟಿ ನೀಡಿದ್ದರು.
53 ವರ್ಷದ ಮಹಿಳೆ ಚಿಕಿತ್ಸ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪೊಲೀಸ್ ಇಲಾಖೆ ಮೂಲಗಳ ಮಾಹಿತಿ ಪ್ರಕಾರ ಮಹಿಳೆ ಶ್ವಾಸಕೋಶ ಕ್ಯಾನ್ಸರ್ನಿಂದ ಬಳಲುತ್ತಿದ್ದಳು. ಮಹಿಳೆಗೆ 17 ವರ್ಷದ ಪುತ್ರಿ ಇರುವುದು ಬಿಟ್ಟರೆ ಕುಟುಂಬದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಸಿಐಡಿ ತನಿಖೆ: ಸಹಾಯ ಕೇಳಲು ಹೋದಾಗ ಬಿ. ಎಸ್. ಯಡಿಯೂರಪ್ಪ ಡಾಲರ್ಸ್ ಕಾಲೋನಿ ನಿವಾಸದಲ್ಲಿ ತಮ್ಮ 17 ವರ್ಷದ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಸದಾಶಿವ ನಗರ ಠಾಣೆಗೆ ದೂರು ನೀಡಿದ್ದರು.
ಈ ದೂರು ಆಧರಿಸಿ ಮಾರ್ಚ್ 14ರಂದು ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣದ ದಾಖಲು ಮಾಡಲಾಗಿತ್ತು. ಮಾರ್ಚ್ 15ರಂದು ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು.
ಪ್ರಕರಣದ ತನಿಖೆ ಆರಂಭಿಸಿದ್ದ ಸಿಐಡಿ ಅಧಿಕಾರಿಗಳು ಮಹಿಳೆ ಮತ್ತು ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ಸಿಆರ್ಪಿಸಿಯ ಸೆಕ್ಷನ್ 164ರ ಅಡಿ ದಾಖಲಿಸಿಕೊಂಡಿದ್ದರು. ಬಿ. ಎಸ್. ಯಡಿಯೂರಪ್ಪ ಸಹ ಸಿಐಡಿ ಕಛೇರಿಗೆ ತೆರಳಿ ಧ್ವನಿಯ ಮಾದರಿಯನ್ನು ಪರೀಕ್ಷೆಗೆ ನೀಡಿದ್ದರು.
ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ಫೆಬ್ರವರಿ 2, 2024ರಂದು ಭೇಟಿ ನೀಡಿದಾಗ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ರಾಜ್ಯದ ರಾಜಕೀಯ ವಲಯದಲ್ಲಿ ಈ ಪ್ರಕರಣದ ಚರ್ಚೆಗೆ ಕಾರಣವಾಗಿತ್ತು.
ಈ ದೂರಿನ ಕುರಿತು ಬಿ. ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದರು, "ಅನ್ಯಾಯವಾಗಿದೆ. ನ್ಯಾಯ ಕೊಡಿಸಿ ಎಂದು ತಾಯಿ, ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು. ಅವರನ್ನು ಪೊಲೀಸ್ ಆಯುಕ್ತರ ಬಳಿ ಕಳಿಸಿಕೊಟ್ಟಿದ್ದೆ. ಆದಾದ ಮೇಲೆ ನನ್ನ ವಿರುದ್ಧ ಏನೇನೋ ಆರೋಪ ಮಾಡಿದರು" ಎಂದು ಹೇಳಿದ್ದರು.
ಮಾರ್ಚ್ 16ರಂದು ದೇಶದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೊಂಡಿತು. ಯಡಿಯೂರಪ್ಪ ವಿರುದ್ಧದ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications