Women’s Reservation: ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ.. ಆದರೆ ಈ ವಿಚಾರಕ್ಕೆ ಒಪ್ಪಿಗೆ ಇಲ್ಲ: ಸಿಎಂ ಸಿದ್ದರಾಮಯ್ಯ

Women's Reservation: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ , ಸಂವಿಧಾನದ 73,74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Women s Reservation

ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ದಕ್ಷಿಣದಲ್ಲಿ 50% ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ನಾವು ಮಹಿಳಾ ಮೀಸಲಾತಿ ಪರವಾಗಿದ್ದೇವೆ.

ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. 50% ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು. ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಹಸಿಹಸಿ ಸುಳ್ಳು ಹೇಳುತ್ತಿದ್ದಾರೆ. ತಮಿಳುನಾಡು, ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ನಮ್ಮನ್ನು ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಬಿಂಬಿಸಿ,ರಾಜಕೀಯ ಲಾಭ ಪಡೆಯುವುದು ಅವರ ಉದ್ದೇಶವಾಗಿದೆ.

2023ರಲ್ಲೇ 450 ಮತಗಳನ್ನು ಪಡೆದು ಅಂಗೀಕಾರವಾಗಿರುವ ಮಸೂದೆಯನ್ನು ನರೇಂದ್ರ ಮೋದಿಯವರು ಏಕೆ ಜಾರಿಮಾಡಲಿಲ್ಲ? ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ತಂದಿದ್ದರೆ, ಯಾರೂ ವಿರೋಧಿಸುತ್ತಿರಲಿಲ್ಲ. ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ ಎಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

Women's Reservation: ಕರ್ನಾಟಕ ಬಿಜೆಪಿ ಟೀಕೆ

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿಯು ಟೀಕೆ ಮಾಡಿದೆ. ಕ್ಷೇತ್ರ ಪುನರ್ ವಿಂಗಡಣೆಯಿಂದ ಕರ್ನಾಟಕದ ಲೋಕಸಭಾ ಸೀಟುಗಳು 28 ರಿಂದ 42 ಕ್ಕೆ ಏರಿಕೆಯಾಗುತ್ತವೆ. ದಕ್ಷಿಣ ಭಾರತದ ಒಟ್ಟು ಬಲ ಹೆಚ್ಚಾಗುತ್ತದೆ. ಕರ್ನಾಟಕದ ಪ್ರಾತಿನಿಧ್ಯದ ಪಾಲು 5.15% ಯಥಾವತ್ತು ಇರುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ.

ವಾಸ್ತವ ಹೀಗಿರುವಾಗ ಕರ್ನಾಟಕಕ್ಕೆ ಅನ್ಯಾಯವಾಗುತ್ತದೆ ಎಂದು ಬೊಬ್ಬೆ ಹೊಡೆದು ಕ್ಷೇತ್ರ ಪುನರ್'ವಿಂಗಡಣೆ ವಿರೋಧಿಸುವ Indian National Congress - Karnataka ನಾಯಕರೇ, ಹೇಗೆ ಅನ್ಯಾಯವಾಗುತ್ತದೆ ತಿಳಿಸುವಿರಾ? ಕನ್ನಡಿಗರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗುವುದು ಕಾಂಗ್ರೆಸ್ ಗೆ ಸಹಿಸಲು ಸಾಧ್ಯವಾಗುವುದಿಲ್ಲವೇ? ರಾಜ್ಯದ ಹಿತಾಸಕ್ತಿಗಿಂತ ಕಾಂಗ್ರೆಸ್ಸಿಗರಿಗೆ ರಾಜಕೀಯವೇ ಮುಖ್ಯವಾಗಿದೆ ಎಂದು ಕರ್ನಾಟಕ ಬಿಜೆಪಿ ಟೀಕೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+