ಕೃಷಿ ಕ್ಷೇತ್ರದಲ್ಲಿ ದಿಟ್ಟ ಹೆಜ್ಜೆ ಇಟ್ಟ ದೊಡ್ಡಬಳ್ಳಾಪುರದ ಉಮಾದೇವಿ
ದೊಡ್ಡಬಳ್ಳಾಪುರ, ಮಾರ್ಚ್ 08: ಮಹಿಳೆಯರಿಗೂ ಸಮಾನ ನ್ಯಾಯ ಹಾಗೂ ಸಮಾನವಾದ ಮಿಸಲಾತಿ ಸಿಗಬೇಕೆಂಬ ಕಾನೂನು ನಮ್ಮ ದೇಶದಲ್ಲಿ ಈಗಾಗಲೇ ಜಾರಿಯಲ್ಲಿದೆ. ಆದ್ರೆ ಅದೆಷ್ಟೋ ಮಹಿಳೆಯರು ಇವತ್ತಿನ ದಿನದಲ್ಲಿ ಮದುವೆಯಾದ ನಂತರ ಸಮಾಜದ ಮುಖ್ಯವಾಹಿನಿಗೆ ಬರುವುದಕ್ಕೆ ಹೆದರುತ್ತಾರೆ. ಆದ್ರೆ ಇಲ್ಲೊಬ್ಬ ದಿಟ್ಟ ಮಹಿಳೆ ನಾವು ಸಮಾಜದಲ್ಲಿ ಯಾರಿಗೆನೂ ಕಮ್ಮಿಯಿಲ್ಲ ಎಂಬಂತೆ ಬದುಕುತ್ತಿದ್ದಾರೆ. ಈ ಮಹಿಳೆ ಕೃಷಿಗೂ ಸೈ, ಉಳುಮೆಗೂ ಸೈ, ಹೋರಾಟಕ್ಕೂ ಸೈ ಅಲ್ಲದೆ ಮಹಿಳೆಯರಿಗೆ ಸಾಮಾಜಿಕ ನ್ಯಾಯ ಕೊಡಿಸೊಕ್ಕೂ ಸೈ ಎಂಬಂತೆ ಕೆಲಸ ಮಾಡ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಆಲಹಳ್ಳಿ ಗ್ರಾಮದ ನಿವಾಸಿಯಾದ ಈಕೆ ಪುರುಷರಿಗಿಂತಲೂ ಕಮ್ಮಿಯಿಲ್ಲ ಎಂಬಂತೆ ಕೃಷಿಯನ್ನ ಮಾಡುತ್ತಿದ್ದಾರೆ. ಕೃಷಿಯೊಂದೇ ಅಲ್ಲದೆ ಬೆಳೆದ ಬೆಳೆಗೆ ನ್ಯಾಯಬೆಲೆ ಸಿಗಬೇಕೆಂದು ಸರ್ಕಾರದ ವಿರುದ್ಧ ನಿರಂತರ ಹೊರಾಟವನ್ನ ಮಾಡುತ್ತಿದ್ದಾರೆ ಉಮಾದೇವಿ. ಓದಿರೋದು ಕೇವಲ 10 ನೇ ತರಗತಿ ಮಾತ್ರ. 18 ವರ್ಷಗಳ ಹಿಂದೆ ತಾವು ವಾಸವಿದ್ದ ಗ್ರಾಮದಲ್ಲಿ ಚನ್ನೆಗೌಡ ಎಂಬುವವರನ್ನ ಪ್ರೀತಿಸಿ ಮದುವೆಯಾಗಿದ್ದಾರೆ.
ಅಂತರ್ಜಾತೀಯ ವಿವಾಹವಾಗಿದ್ದರಿಂದ ಹಲವು ಸಂಕಷ್ಟಗಳು ಎದುರಾದರೂ ಅವರು ಧೃತಿಗೆಡಲಿಲ್ಲ. ಪತಿಯ ಹೆಸರಲಿನಲ್ಲಿದ್ದ ನಾಲ್ಕು ಎಕರೆ ಜಮೀನಿನಲ್ಲಿ ಕೃಷಿ ಆರಂಭಿಸಿದರು. ತಮ್ಮ ಅತ್ತೆಯಿಂದ ಸಾಕಷ್ಟು ಸಂಕಷ್ಟ ಎದುರಿಸಬೇಕಾಯಿತಾದರೂ ಯಾವುದನ್ನೂ ಲೆಕ್ಕಿಸದೆ ಕೃಷಿಯನ್ನೇ ಬದುಕು ಎಂದುಕೊಂಡರು.

ತಾವೇ ಸ್ವತಃ ಬ್ಯಾಂಕಿಗೆ ತೆರಳಿ ಸಾಲಮಾಡಿ, ಬೋರ್ ವೆಲ್ ಕೊರೆಸಿ, ಟ್ರ್ಯಾಕ್ಟರ್ ತಂದಿದ್ದಾರೆ. ತಾವೇ ಟ್ರ್ಯಾಕ್ಟರ್ ಓಡಿಸಿ ಉಳುಮೆ ಮಾಡುತ್ತಾರೆ. ಅಷ್ಟೇ ಅಲ್ಲ, ಬೆಳೆದ ತರಕಾರಿಗಳನ್ನ ಟ್ರಾಕ್ಟರ್ಗೆ ತುಂಬಿಕೊಂಡು ಮಾರ್ಕೆಟ್ ಗೂ ಹೋಗ್ತಾರೆ.
ಕಳೆದ ಒಂದು ವಾರದ ಹಿಂದೆ ದೊಡ್ಡಬಳ್ಳಾಪುರದಲ್ಲಿ ಬೆಳೆದಿದ್ದ ಸೊಪ್ಪನ್ನ ಮಾರುಕಟ್ಟೆಗೆ ತೆಗೆದುಕೊಂಡು ಹೋಗಿದ್ದರು. ಅಲ್ಲಿ ದಲ್ಲಾಳಿಗಳ ಮೋಸದಿಂದ ರೈತರಿಗೆ ಬೆಲೆಯಲ್ಲಿ ಆಗುತ್ತಿರುವ ಮೋಸವನ್ನ ಖಂಡಿಸಿ ರಸ್ತೆಯಲ್ಲೆ ಹೋರಾಟವನ್ನ ಮಾಡಿದ್ರು. ಅಲ್ಲದೆ ರೈತರರಿಗೆ ಆಗುತ್ತಿರುವ ಅನ್ಯಾಯವನ್ನ ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಟ್ರಾಕ್ಟರ್ ಹಾಕಿಕೊಂಡು ವಿಧಾನಸೌಧ ಚಲೋ ಹೋರಾಟವನ್ನ ಸಹ ಮಾಡಿದ್ದಾರೆ. ಇನ್ನೂ ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಉಮಾದೇವಿ ನಿರಂತರ ಹೋರಾಟವನ್ನ ಮಾಡಿಕೊಂಡು ಬಂದಿದ್ದಾರೆ.

ಶಾಶ್ವತ ನೀರಾವರಿ ಹೋರಾಟ ಟ್ರಾಕ್ಟರ್ ಯಾತ್ರೆಯಲ್ಲಿ ರೈತರ ಪರ ಟ್ರಾಕ್ಟರ್ ಓಡಿಸಿಕೊಂಡು ಹೋರಾಟದಲ್ಲಿ ಭಾಗವಹಸಿದ್ದ ಏಕೈಕ ಮಹಿಳೆಯೂ ಉಮಾದೇವಿಯೊಬ್ಬರೇ. ಕೃಷಿ ಕ್ಷೇತ್ರ ಎಂದೊಡನೆ ಮೂಗು ಮುರಿಯುವ ಈ ಕಾಲದಲ್ಲಿ ಭೂತಾಯಿಯನ್ನೇ ನಂಬಿ, ಅನ್ನದಾತರಿಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಉಮಾದೇವಿ ಮಹಿಳೆಯರಿಗೆ ಆದರ್ಶವೇ ಸರಿ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications