ದೇವೇಗೌಡ-ಕುಮಾರಸ್ವಾಮಿ ಬೆಂಬಲವಿಲ್ಲದೆ ನಾಲ್ಕು ಬಾರಿ ಗೆದ್ದಿದ್ದೆ: ಮರಿತಿಬ್ಬೇಗೌಡ
ಮಂಡ್ಯ, ಜೂನ್ 09: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಬೆಂಬಲವಿಲ್ಲದೇ ಕಳೆದ ನಾಲ್ಕು ಬಾರಿ ವಿಧಾನ ಪರಿಷತ್ ಚುನಾವಣೆ ಎದುರಿಸಿ ಗೆದ್ದಿದ್ದೇನೆ, ಈ ಚುನಾವಣೆಯಲ್ಲಿ ಇವರ ಅನುಪಸ್ಥಿತಿ ಪರಿಣಾಮ ಬೀರಲಿಲ್ಲ ಎಂದು ಕಾಂಗ್ರೆಸ್ ಮುಖಂಡ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮರಿತಿಬ್ಬೇಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ನಿಂದಲೇ ನಾನು ಅಂತರ ಕಾಯ್ದುಕೊಂಡಿದ್ದೆ ಆದರೆ ಇದು ಬಹಿರಂಗವಾಗಿರಲಿಲ್ಲ, ಯಾವಾಗಲು ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಿಕೊಂಡು ಬಂದಿದ್ದೇನೆ, ಈ ಬಾರಿ ನನಗೆ ಸೋಲಾಗಿರಬಹುದು ಆದರೂ ಸಹ ಶಿಕ್ಷಕರ ಪರವಾಗಿ ಇಡೀ ನಾಲ್ಕು ಜಿಲ್ಲೆಯಲ್ಲಿಯೂ ಹೋರಾಟ ಮಾಡುವುದು ನಿರಂತರವಾಗಿರುತ್ತದೆ ಎಂದು ಭರವಸೆ ನೀಡಿದರು.

ನಾಲ್ಕು ಜಿಲ್ಲೆಯ ಅಭಿವೃದ್ಧಿಗೆ ನನ್ನ ಅಧಿಕಾರದ ಅವಧಿಯಲ್ಲಿ ಕೆಲಸ ಮಾಡಿದ್ದೇನೆ, ಸಹಕಾರಿ ಕ್ಷೇತ್ರದಲ್ಲಿ ಹಲವು ಸಹಕಾರಿ ಬ್ಯಾಂಕ್ಗಳಲ್ಲಿಯೂ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದೇನೆ, ಕಾಂಗ್ರೆಸ್ ಪಕ್ಷದ ವರಿಷ್ಠರು ನನಗೆ ಯಾವ ಜವಾಬ್ದಾರಿ ವಹಿಸುವರೋ ಅದರಂತೆ ನಾಲ್ಕು ಜಿಲ್ಲೆಯಲ್ಲಿಯೂ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿ ಸದೃಢವಾಗಿ ಕಾಂಗ್ರೆಸ್ ಪಕ್ಷವನ್ನು ಕಟ್ಟುತ್ತೇನೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಶಿಕ್ಷಕರು ಯಾವ ಕಾಣರಣಕ್ಕೆ ಸೋಲಿಸಿದರು ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ನೈತಿಕತೆ ಇಟ್ಟುಕೊಂಡು ಕೆಲಸ ಮಾಡಿದ್ದೇನೆ, ತತ್ವಸಿದ್ಧಾಂತ ಬಿಟ್ಟು ಎಂದಿಗೂ ರಾಜಕಾರಣ ಮಾಡಿದವನಲ್ಲ, ಆದರೂ ನನ್ನ ಸೋಲಿಗೆ ಕಾರಣ ತಿಳಿದು ಬಂದಿಲ್ಲ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುತ್ತೇನೆ, ಶಿಕ್ಷಕರ ಸಮಸ್ಯೆಗಳನ್ನ ಬಗೆಹರಿಸುವ ಹಂತದಲ್ಲಿ ನನ್ನ ಸೋಲು ಶಿಕ್ಷಕರ ಸೋಲಾಗಿದೆ, ಆಡಳಿತ ಪಕ್ಷ ಇರುವಾಗ ಹಲವು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದೆ ಆದರೆ, ಶಿಕ್ಷಕ ಸಮುದಾಯ ಈ ಬಾರಿ ತಿರಸ್ಕರಿಸಿದೆ ಎಂದು ವಿಷಾದಿಸಿದರು.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ನಾನು ಸೋತಿಲ್ಲ, ನನ್ನನ್ನು ಸೋಲಿಸಿ ಶಿಕ್ಷಕರೇ ಸೋಲಿಸಿದ್ದಾರೆ, ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಅನಿವಾರ್ಯ, ಇಬ್ಬರು ಮೂರ್ಖರನ್ನ ನೋಡಿ ಒಬ್ಬ ಸಮರ್ಥ ಅಭ್ಯರ್ಥಿಯನ್ನ ಸೋಲಿಸಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ? ಏಕೆ ಈ ರೀತಿ ಶಿಕ್ಷಕರು ಚಿಂತನೆ ಮಾಡಿದರು ಎಂಬುವ ಪ್ರಶ್ನೆ ಈಗಲೂ ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ 24 ವರ್ಷಗಳಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದು, ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲದೇ ಅದರಲ್ಲಿಯೂ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಬೆಂಬಲವಿಲ್ಲದೆ ನಾಲ್ಕು ಬಾರಿ ವಿಧಾನ ಪರಿಷತ್ ಚುನಾವಣೆ ಎದುರಿಸಿ ಗೆದ್ದಿದ್ದೇನೆ, ಈ ಚುನಾವಣೆಯಲ್ಲಿ ಇವರ ಅನುಪಸ್ಥಿತಿ ಪರಿಣಾಮ ಬೀರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಚುನಾವಣಾ ಸಂದರ್ಭದಲ್ಲಿ ನನ್ನ ಸಾಧನೆಗಳ ಕಿರುಹೊತ್ತಿಗೆಯನ್ನ ಹೊರ ತಂದಿದ್ದು, ನಾನು ಮಾಡಬೇಕಿದ್ದ ಕೆಲಸಗಳ ಬಗ್ಗೆಯೂ ಉಲ್ಲೇಖಿಸಿದ್ದೆ, ಜೊತೆಗೆ ಮಾಡಿರುವ ಸಾಧನೆಗಳ ಕುರಿತಂತೆ ಬೆಳಕು ಚೆಲ್ಲಿದ್ದೆ, ಆದರೆ ಇದೊಂದು ಅಚ್ಚರಿ ಅನಿರೀಕ್ಷಿತ ಬೆಳವಣಿಗೆಯಾಗಿದೆ, ಚಿಂತಕರು, ಸಾಹಿತಿಗಳು ಬೇರೆ ರೀತಿಯಲ್ಲಿ ಆಲೋಚನೆ ಮಾಡುತ್ತಿದ್ದಾರೆ, ಈ ಬಾರಿ ಗೆಲುವು ಸಿಗುತ್ತದೆ ಎಂಬ ಅಂಚಲ ನಂಬಿಕೆಯಿತ್ತು, ಇದು ಸುಳ್ಳಾಯಿತು. ಸೋತಿದಿದ್ದರೂ ಹೋರಾಟ ಬಿಡಲ್ಲ ಅದು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವು ನೆಲಕಚ್ಚಿದೆ, ಮುಂದಿನ ದಿನಗಳಲ್ಲಿ ಆ ಪಕ್ಷಕ್ಕೆ ಮರು ಜೀವ ಬರಲು ಸಾಧ್ಯವೇ ಇಲ್ಲ, ಈಗಾಗಲೇ ಆ ಪಕ್ಷದ ಬಹುತೇಕ ನಾಯಕರು ಬೇರೆ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ, ಅದೇನಿದ್ದರು ಮುಳುಗುವ ದೋಣಿ, ಕಾಂಗ್ರೆಸ್ ಗ್ಯಾರಂಟಿಗಳ ನಡುವೆ ಈ ಪಕ್ಷ ಚೇತರಿಸಿಕೊಳ್ಳುತ್ತದೆ ಎಂಬುವ ವಿಶ್ವಾಸವೇ ಇಲ್ಲ ಎಂದು ಭವಿಷ್ಯ ನುಡಿದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications