ನಾಲ್ಕು ವಿಮಾನ ನಿಲ್ದಾಣದ ಕನಸು ನನಸಾಗೋಲ್ಲ!

ಸೋಮವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಾರ್ತಾ ಮತ್ತು ಮೂಲಭೂತ ಸೌಕರ್ಯ ಸಚಿವ ಸಂತೋಷ್ ಲಾಡ್, ಶಿವಮೊಗ್ಗ, ಗುಲ್ಬರ್ಗ, ಬಿಜಾಪುರ, ಹಾಸನ ವಿಮಾನ ನಿಲ್ದಾಣ ಸ್ಥಾಪನೆಯ ಸಹಭಾಗಿತ್ವ ವಹಿಸಿಕೊಳ್ಳಲು ಖಾಸಗಿ ಕಂಪನಿಗಳು ಮುಂದಾಗುತ್ತಿಲ್ಲ ಎಂದು ಹೇಳಿದ್ದಾರೆ. ಆದ್ದರಿಂದ ಯೋಜನೆ ಸ್ಥಗಿತಗೊಳ್ಳುವುದು ಬಹುತೇಕ ಖಚಿತವಾಗಿದೆ.
ಗುಲ್ಬರ್ಗದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗಾಗಿ ಖಾಸಗಿ ಕಂಪನಿಯೊಂದಿಗೆ ಸರ್ಕಾರ ಒಪ್ಪಂದ ಮಾಡಿಕೊಂಡಿತ್ತು. ಶೇ.50ರಷ್ಟು ಪ್ರಕ್ರಿಯೆ ನಂತರ ಸಂಸ್ಥೆ ಯೋಜನೆಯಿಂದ ಹಿಂದೆ ಸರಿದಿದೆ. ಆದ್ದರಿಂದ ನಾಲ್ಕು ವಿಮಾನ ನಿಲ್ದಾಣಗಳ ಪ್ರಸ್ತಾವನೆ ಕೈ ಬಿಟ್ಟಂತೆಯೇ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಒಂದು ವೇಳೆ ಖಾಸಗಿ ಕಂಪನಿಯೊಂದು ಗುಲ್ಬರ್ಗ, ಶಿವಮೊಗ್ಗ, ಬಿಜಾಪುರ, ಹಾಸನ ಜಿಲ್ಲೆಗಳ ವಿಮಾನ ನಿಲ್ದಾಣಗಳ ಸಂಸ್ಥೆ ಮುಂದಾಗಿ ಒಪ್ಪಂದ ಮಾಡಿಕೊಂಡರೆ ಆ ಯೋಜನೆ ಮುಂದುವರಿಸುವ ಸಾಧ್ಯತೆಯಿದೆ ಎಂದರು. ಕೆಲವು ದಿನಗಳ ಹಿಂದೆ ಸಹ ಸಚಿವ ಸಂತೋಷ್ ಲಾಡ್ ವಿಮಾನ ನಿಲ್ದಾಣ ಯೋಜನೆ ಕೈ ಬಿಡುವ ಬಗ್ಗೆ ಸುಳಿವು ನೀಡಿದ್ದರು. ಸದ್ಯ ಅದನ್ನೇ ಪುನರುಚ್ಚರಿಸಿದ್ದಾರೆ. ಆದ್ದರಿಂದ ಯೋಜನೆ ಸ್ಥಗಿತಗೊಳ್ಳುವುದು ಖಚಿತವಾಗಿದೆ.
ಸೆ.17ರಂದು ಪತ್ರಿಕಾಗೋಷ್ಠಿ ನಡೆಸಿದ್ದ ಸಂತೋಷ್ ಲಾಡ್ ಗುಲ್ಬರ್ಗ, ಶಿವಮೊಗ್ಗ, ಬಿಜಾಪುರ, ಬಳ್ಳಾರಿ ಹಾಗೂ ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆಗೆ ಭೂಸ್ವಾಧೀನ ಪಡಿಸಿಕೊಳ್ಳಲು ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ನಗರಗಳಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದು ಲಾಭದಾಯಕವಲ್ಲ ಎಂದು ತಜ್ಞರು ವರದಿ ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಅಗತ್ಯವಿಲ್ಲ ಎಂದು ವಿಮಾನ ನಿಲ್ದಾಣ ಪ್ರಾಧಿಕಾರವೇ ಸರ್ಕಾರಕ್ಕೆ ವರದಿ ನೀಡಿದೆ. ಅಲ್ಲದೇ ಇಲ್ಲಿಯ ಭೂ ಸ್ವಾಧೀನ ಪ್ರಕ್ರಿಯೆ ಸಹ ಮುಗಿದಿಲ್ಲ. ಆದ್ದರಿಂದ ಯೋಜನೆಯನ್ನು ಸ್ಥಗಿತಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದರು. (ಜಿಲ್ಲೆಗಳ ಮಿನಿ ಏರ್ ಪೋರ್ಟ್ ಕನಸು ದೂರ)
ಎರಡನೇ ಹಂತದ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಬಿಜೆಪಿ ಸರ್ಕಾರ ಶಿವಮೊಗ್ಗ, ಬಳ್ಳಾರಿ, ಗುಲ್ಬರ್ಗ, ಬಿಜಾಪುರ ಮತ್ತು ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆಯನ್ನು ಜಾರಿಗೆ ತಂದಿತ್ತು. ಸದ್ಯ ಖಾಸಗಿ ಸಹಭಾಗಿತ್ವ ದೊರೆಯದ ಕಾರಣ ಕಾಂಗ್ರೆಸ್ ಸರ್ಕಾರ ಯೋಜನೆ ಸ್ಥಗಿತಗೊಳಿಸಲು ಚಿಂತನೆ ನಡೆಸುತ್ತಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications