ಕೆಎಸ್ಆರ್ಟಿಸಿ ಸಿಬ್ಬಂದಿಗೆ ರೊಟೇಷನ್ ಆಧಾರದಲ್ಲಿ ಕೆಲಸ
ಬೆಂಗಳೂರು, ಜೂನ್ 25 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಿಬ್ಬಂದಿಗಳನ್ನು ರೂಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತದೆ. ಈ ಹೀಗೆ ಕೆಲಸ ಮಾಡುವ ಸಿಬ್ಬಂದಿಗಳ ವೇತನ ಕಡಿತ ಮಾಡುವುದಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.
Recommended Video
ಲಾಕ್ ಡೌನ್ ನಿಯಮಗಳಲ್ಲಿ ಬದಲಾವಣೆ ಮಾಡಿ ಬಸ್ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿಲ್ಲ. ಆದ್ದರಿಂದ ಸಿಬ್ಬಂದಿಗಳನ್ನು ಕೆಲಸಕ್ಕೆ ನಿಯೋಜನೆ ಮಾಡುವುದು ಹೇಗೆ ಎಂಬುದು ಚಿಂತನೆ ನಡೆಸುತ್ತಿದೆ.
"ಚಾಲಕರು ಮತ್ತು ನಿರ್ವಾಹಕರು ಘಟಕದಲ್ಲಿ ಕುಳಿತುಕೊಳ್ಳುವ ಬದಲು ರೊಟೇಷನ್ ಆಧಾರದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡುವಂತೆ" ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಆದೇಶ ನೀಡಿದ್ದಾರೆ.
ಆಂಧ್ರಪ್ರದೇಶ ಹೊರತುಪಡಿಸಿದರೆ ಬೇರೆ ಯಾವುದೇ ರಾಜ್ಯಕ್ಕೆ ಅಂತರರಾಜ್ಯ ಬಸ್ ಸಂಚಾರ ಆರಂಭವಾಗಿಲ್ಲ. ಶುಕ್ರವಾರದಿಂದ ಕೆಎಸ್ಆರ್ಟಿಸಿ 8 ಮಾರ್ಗದಲ್ಲಿ ಎಸಿ ಬಸ್ ಸಂಚಾರವನ್ನು ಆರಂಭಿಸಿದೆ. ಹಲವು ಜಿಲ್ಲೆಗಳಿಗೆ ಸಾಮಾನ್ಯ ಬಸ್ಗಳು ಸಂಚಾರ ನಡೆಸುತ್ತಿವೆ.

3,500 ಬಸ್ಗಳ ಸಂಚಾರ
ಕೆಎಸ್ಆರ್ಟಿಸಿಯಲ್ಲಿ 8,200 ಬಸ್ಗಳಿವೆ. ಇವುಗಳಲ್ಲಿ 3,500 ಬಸ್ಗಳು ಮಾತ್ರ ಪ್ರತಿನಿತ್ಯ ಕಾರ್ಯಾಚರಣೆ ನಡೆಸುತ್ತಿವೆ. ಅಂತರರಾಜ್ಯ ಬಸ್ಗಳ ಸಂಚಾರವಿಲ್ಲ. ಹಲವು ಹವಾನಿಯಂತ್ರಿತ ಬಸ್ಗಳು ಸಂಚಾರವನ್ನು ನಡೆಸುತ್ತಿಲ್ಲ. ಇದರಿಂದಾಗಿ ಉದ್ಯೋಗಿಗಳು ಖಾಲಿ ಕುಳಿತಿದ್ದಾರೆ.

ಶೇ 40ರಷ್ಟು ಸಿಬ್ಬಂದಿ ಕೆಲಸ
ಕೆಎಸ್ಆರ್ಟಿಸಿಗೆ ಶೇ 40ರಷ್ಟು ಸಿಬ್ಬಂದಿಗಳನ್ನು ಮಾತ್ರ ಕೆಲಸಕ್ಕೆ ನಿಯೋಜನೆ ಮಾಡುವುದು ಕಷ್ಟವಾಗಿದೆ. ಆದ್ದರಿಂದ, ರೊಟೇಷನ್ ಆಧಾರದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡಲು ಯೋಜನೆ ತಯಾರು ಮಾಡಲಾಗಿದೆ. ಘಟಕದಲ್ಲಿ ಸುಮ್ಮನೆ ಕುಳಿತುಕೊಳ್ಳುವ ಬದಲು ಈ ಪದ್ಧತಿ ಜಾರಿಗೊಳಿಸಲಾಗುತ್ತದೆ.

ಹೇಗಿರಲಿದೆ ರೂಪುರೇಷೆ
ರೊಟೇಷನ್ ಪದ್ಧತಿ ಅನ್ವಯ ಬಸ್ಗಳ ಕಾರ್ಯಾಚರಣೆಗೆ ಅನುಗುಣವಾಗಿ ಅಗತ್ಯ ಇರುವಷ್ಟು ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತದೆ. ಘಟಕಗಳಲ್ಲಿ ಹೆಚ್ಚುವರಿಯಾಗಿ 5 ಸಿಬ್ಬಂದಿ ಮಾತ್ರ ಇರುತ್ತಾರೆ. 55 ವರ್ಷ ಮೇಲ್ಪಟ್ಟವರು, ಅನಾರೋಗ್ಯ ಪೀಡಿತರಿಗೆ ಆದ್ಯತೆ ಮೇಲೆ ರಜೆ ನೀಡಲಾಗುತ್ತದೆ.

ವೇತನ ಕಡಿತವಿಲ್ಲ
ಎಲ್ಲರಿಗೂ ಸಮಾನವಾಗಿ ಕೆಲಸ ಸಿಗುವಂತೆ ನೋಡಿಕೊಳ್ಳಲಾಗುತ್ತದೆ. ರೊಟೇಷನ್ ಆಧಾರದಲ್ಲಿ ಕೆಲಸ ಮಾಡಿದರೂ ಸಿಬ್ಭಂದಿಗೆ ವೇತನ ಕಡಿತ ಮಾಡುವುದಿಲ್ಲ. ಪೂರ್ಣ ಪ್ರಮಾಣದ ಸಂಬಳ ನೀಡಲಾಗುತ್ತದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.












Click it and Unblock the Notifications