ರಾತ್ರಿ 11 ಗಂಟೆವರೆಗೆ ಅಂಚೆ ಕಚೇರಿ ಓಪನ್; ವಿವರ, ಮಾಹಿತಿ
ಬೆಂಗಳೂರು, ಜೂನ್ 27; ಭಾರತೀಯ ಅಂಚೆ ಇಲಾಖೆಯು ಮತ್ತಷ್ಟು ಜನಸ್ನೇಹಿಯಾಗುವತ್ತ ಹೆಜ್ಜೆ ಹಾಕಿದೆ. ಆರ್ಎಂಎಸ್ ಸೇವೆಗಳನ್ನು ನೀಡುವ ಕಚೇರಿಗಳ ಕಾರ್ಯ ನಿರ್ವಹಣೆಯನ್ನು ಪರಿಷ್ಕರಣೆ ಮಾಡಿದೆ. ಇದರಿಂದಾಗಿ ಈ ಕೌಂಟರ್ಗಳು ರಾತ್ರಿ 11ರ ತನಕ ತೆರೆದಿರುತ್ತವೆ.
ಅಂಚೆ ಇಲಾಖೆಯು RMS (Railway Mail Service) ಕಚೇರಿಗಳ ಸಮಯ ಪರಿಷ್ಕರಣೆ ಮಾಡಿದೆ. ಇದರಿಂದಾಗಿ ಆರ್ಎಂಎಸ್ ಕಚೇರಿ ಕೌಂಟರ್ಗಳು ಸಂಜೆ 6 ರಿಂದ ರಾತ್ರಿ 11 ಗಂಟೆಯವರೆಗೆ ತ್ವರಿತ ಅಂಚೆ ಸೇವೆಯ ಜೊತೆಗೆ ನೋಂದಾಯಿತ ಅಂಚೆ ಸೇವೆಯನ್ನು ಒದಗಿಸಲಾಗುತ್ತವೆ.

ಈ ಕೌಂಟರ್ಗಳಲ್ಲಿ ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್, ಪಾರ್ಸೆಲ್ ಸೇರಿದಂತೆ ಕೆಲವು ನೋಂದಾಯಿತ ಸೇವೆಗಳು ಲಭ್ಯವಿದೆ. ಇದಲ್ಲದೇ ಪೋಸ್ಟಲ್ ಸ್ಟಾಂಪ್ಗಳನ್ನು ಪಡೆಯುವ ಸಮಯವನ್ನು ಸಹ ಪರಿಷ್ಕರಣೆ ಮಾಡಲಾಗಿದೆ. ಇದರಿಂದಾಗಿ ಜನರಿಗೆ ಸಹಕಾರಿಯಾಗಿದೆ.
ಆರ್ಎಂಎಸ್ ಕಚೇರಿ ಕೌಂಟರ್ಗಳಲ್ಲಿ ಅಂಚೆ ಚೀಟಿಗಳು ಕೂಡಾ ಲಭ್ಯವಿದ್ದು, ಎಲ್ಲಾ ಸೇವೆಗಳ ಶುಲ್ಕವನ್ನು ಗ್ರಾಹಕರು ಡಿಜಿಟಲ್ ಪಾವತಿ ಅಥವಾ ಕ್ಯೂ ಆರ್ ಕೋಡ್ ಮೂಲಕ ಪಾವತಿಸಬಹುದು ಎಂದು ಇಲಾಖೆ ಹೇಳಿದೆ.
ರೈಲು ಟಿಕೆಟ್ ಕಚೇರಿಯಲ್ಲಿ ಲಭ್ಯ; ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೆಲವು ದಿನಗಳ ಹಿಂದೆ ಘೋಷಣೆಯೊಂದನ್ನು ಮಾಡಿದ್ದರು. ರೈಲಿನಲ್ಲಿ ಸಂಚಾರ ನಡೆಸಬೇಕಾದ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಘೋಷಣೆ ಇದಾಗಿತ್ತು. ದೇಶಾದ್ಯಂತ 45,000 ಅಂಚೆ ಕಚೇರಿಗಳಲ್ಲಿ ರೈಲ್ವೆ ಟಿಕೆಟ್ ಪಡೆಯಲು ವ್ಯವಸ್ಥೆ ಮಾಡಿದ್ದು, ಪ್ರಯಾಣಿಕರು ಯಾವುದೇ ತೊಂದರೆಯಿಲ್ಲದೆ ಇಲ್ಲಿಂದ ಟಿಕೆಟ್ ತೆಗೆದುಕೊಳ್ಳಬಹುದು ಎಂದು ಸಚಿವರು ಹೇಳಿದ್ದರು.
ಅಂಚೆ ಕಚೇರಿಗಳಲ್ಲಿಯೂ ರೈಲ್ವೆ ಟಿಕೆಟ್ ಬುಕ್ಕಿಂಗ್ ಮಾಡಲು ವ್ಯವಸ್ಥೆ ಮಾಡುವ ಮೂಲಕ ಸರ್ಕಾರ ಒಂದು ಕಡೆ ಅಂಚೆ ಕಚೇರಿಗಳಲ್ಲಿ ವಹಿವಾಟು ಹೆಚ್ಚಿಸಲು ಸಹ ಮುಂದಾಗಿದೆ. ಅಲ್ಲದೇ ಜನರು ಸುಲಭವಾಗಿ ರೈಲು ಟಿಕೆಟ್ ಬುಕ್ ಮಾಡಲು ಇದು ಸಹಕಾರಿಯಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಪ್ರಮುಖ ಅಂಚೆ ಯೋಜನೆಗಳನ್ನು ಪ್ರಚಾರ ಪಡಿಸಲು 'ಪಂಚತಾರಾ ಗ್ರಾಮಗಳು' ಎಂಬ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಸಾರ್ವಜನಿಕ ಜಾಗೃತಿ ಮತ್ತು ಅಂಚೆ ಉತ್ಪನ್ನಗಳು ಮತ್ತು ಸೇವೆಗಳ ವ್ಯಾಪ್ತಿಯಲ್ಲಿರುವ ಅಂತರವನ್ನು ಕಡಿಮೆ ಮಾಡಲಿದೆ.
ಪಂಚತಾರಾ ಗ್ರಾಮಗಳ ಯೋಜನೆಯಡಿಯಲ್ಲಿ ಎಲ್ಲಾ ಅಂಚೆ ಉತ್ಪನ್ನಗಳು ಮತ್ತು ಸೇವೆಗಳನ್ನು ಲಭ್ಯವಾಗುವಂತೆ ಮಾಡಲಾಗುತ್ತದೆ ಮತ್ತು ಮಾರಾಟ ಮಾಡಲಾಗುತ್ತದೆ ಮತ್ತು ಗ್ರಾಮ ಮಟ್ಟದಲ್ಲಿ ಪ್ರಚಾರ ಮಾಡಲಾಗುತ್ತದೆ.
ಈ ಯೋಜನೆಯಡಿ ಉಳಿತಾಯ ಬ್ಯಾಂಕ್ ಖಾತೆಗಳು, ಮರುಕಳಿಸುವ ಠೇವಣಿ ಖಾತೆಗಳು, NSC/ KVP ಪ್ರಮಾಣಪತ್ರಗಳು, ಸುಕನ್ಯಾ ಸಮೃದ್ಧಿ ಖಾತೆಗಳು/ PPF ಖಾತೆಗಳು, ನಿಧಿಯ ಪೋಸ್ಟ್ ಆಫೀಸ್ ಉಳಿತಾಯ ಖಾತೆ ಲಿಂಕ್ ಮಾಡಿದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಖಾತೆಗಳು ಸೇರಿವೆ.
ಜನರಿಗೆ ಅನುಕೂಲ; ಭಾರತೀಯ ಅಂಚೆ ಇಲಾಖೆಯ ಸೇವೆಗಳನ್ನು ಜನರಿಗೆ ಇನ್ನಷ್ಟು ಹತ್ತಿರವಾಗಿಸಲು ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. 2018ರಲ್ಲಿ ಶ್ರೀಸಾಮಾನ್ಯನಿಗೆ ಕೈಗೆಟಕುವ ದರದಲ್ಲಿ, ವಿಶ್ವಾಸಾರ್ಹ ಬ್ಯಾಂಕಿಗ್ ಸೇವೆ ಒದಗಿಸಲು ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತೀಯ ಅಂಚೆ ಪಾವತಿ ಬ್ಯಾಂಕ್ (ಐಪಿಪಿಬಿ)ಗಳ ಸ್ಥಾಪನೆಯ ಯೋಜನಾ ಗಾತ್ರವನ್ನು 800 ಕೋಟಿ ರೂಪಾಯಿಗಳಿಂದ 1435 ಕೋಟಿ ರೂಪಾಯಿಗಳಿಗೆ ಪರಿಷ್ಕರಿಸಲು ಅನುಮೋದನೆ ನೀಡಿತ್ತು.
-
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ: ಇಂದು 10 ಗ್ರಾಂ ಬಂಗಾರದ ಬೆಲೆ 1,58,620 ರೂಪಾಯಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ












Click it and Unblock the Notifications