ಸಾಲ ಮನ್ನಾ ಮಾಡಲು ಸಂಪೂರ್ಣ ಬದ್ಧ: ಕುಮಾರಸ್ವಾಮಿ ಪುನರುಚ್ಚಾರ
ಬೆಂಗಳೂರು, ಜೂನ್ 15: ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ.
ಈ ಕುರಿತು ಟ್ಟೀಟ್ ಮಾಡಿರುವ ಅವರು, ಸಾಲ ಮನ್ನಾದಿಂದ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಪ್ರಯೋಜನ ಸಿಗಬೇಕು. ಈ ನಿಟ್ಟಿನಲ್ಲಿ ಸಾಲ ಮನ್ನಾದ ಮಾದರಿಗಳ ಬಗ್ಗೆ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬಜೆಟ್ ನಲ್ಲಿ ಸಾಲಮನ್ನಾ ಘೋಷಿಸುತ್ತೇನೆ: ಕುಮಾರಸ್ವಾಮಿ
"ರೈತ ಬಾಂಧವರೇ, ಸಾಲ ಮನ್ನಾ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸಿಗಬೇಕು ಎನ್ನುವ ಉದ್ಧೇಶ ನನ್ನದು. ನಾನು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಅತಿ ಶೀಘ್ರದಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇನೆ," ಎಂದು ಸಾಲ ಮನ್ನಾ ಘೋಷಣೆಗಾದ ವಿಳಂಬದ ಬಗ್ಗೆ ಮುಖ್ಯಮಂತ್ರಿ ಟ್ಟೀಟ್ ಮಾಡಿದ್ದಾರೆ.
ರೈತ ಬಾಂಧವರೇ, ಸಾಲ ಮನ್ನಾ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸಿಗಬೇಕು ಎನ್ನುವ ಉದ್ಧೇಶ ನನ್ನದು. ನಾನು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಅತಿ ಶೀಘ್ರದಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇನೆ.#farmers #farmloanwaiver
— CM of Karnataka (@CMofKarnataka) June 15, 2018
ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಸಾಲಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದರು. ನಂತರ ರೈತ ನಾಯಕ ಸಭೆ ನಡೆಸಿ 15 ದಿನ ಕಾಲವಕಾಶ ಕೋರಿದ್ದು. ಈ ಅವಧಿಗೆ ನಿನ್ನೆಗೆ ಮುಗಿದಿದ್ದು, ಬಜೆಟ್ ನಲ್ಲಿ ಸಾಲ ಮನ್ನಾ ಘೋಷಿಸುವುದಾಗಿ ಹೇಳಿದ್ದಾರೆ.
ಸಾಲ ಮನ್ನಾದಿಂದ ಕುಮಾರಸ್ವಾಮಿ ಹಿಂದಕ್ಕೆ ಸರಿಯುತ್ತಾರೆ ಎಂಬ ಭಯ ರೈತ ಸಮುದಾಯದಲ್ಲಿದೆ. ಇದೇ ಸಂದರ್ಭದಲ್ಲಿ ಸಾಲ ಮನ್ನಾ ಮಾಡಲು ಬದ್ಧ ಎಂದು ಮುಖ್ಯಮಂತ್ರಿ ಪುನರುಚ್ಚರಿಸಿದ್ದಾರೆ.