Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ
Tamarind Cultivation: ಹುಣಸೆ ಹಾಗೂ ಕಡಲೆ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ಈಚೆಗೆ ವಿಜಯನಗರದ ಕಸಾಪುರದಲ್ಲಿ ನಬಾರ್ಡ್ನ ರೈತ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉದ್ಘಾಟಿಸಿದ್ದರು. ಈ ಯೋಜನೆಗೆ 4.3 ಕೋಟಿ ರೂ. ವೆಚ್ಚವಾಗಿದ್ದು, ಕಡಲೆಕಾಯಿ ಮತ್ತು ಹುಣಸೆ ಉತ್ಪನ್ನಗಳಿಂದ 7.4 ಕೋಟಿ ರೂ. ಭರ್ಜರಿ ಆದಾಯ ಗಳಿಸುವ ನಿರೀಕ್ಷೆ ಇದೆ. ಇದೀಗ ವಿಶ್ವಬ್ಯಾಂಕ್ ಸದಸ್ಯರ ತಂಡವು ಹೊಸಪೇಟೆಗೆ ಭೇಟಿ ನೀಡಲಿದೆ.
ಇಲ್ಲಿನ ಹುಣಸೆ ಸಂಸ್ಕರಣಾ ಘಟಕಕ್ಕೆ ಮಾರ್ಚ್ 9ರಂದು ವಿಶ್ವಬ್ಯಾಂಕ್ ಸದಸ್ಯರ ತಂಡವು ಭೇಟಿ ನೀಡಲಿದೆ. ವಿಶ್ವಬ್ಯಾಂಕ್ ತಂಡವು ಈ ಪ್ರದೇಶಕ್ಕೆ ಭೇಟಿ ನೀಡುತ್ತಿರುವುದರಿಂದಾಗಿ ಕಾಸಾಪುರ ಭಾಗದಲ್ಲಿ ಘಟಕ ವಿಸ್ತರಣೆಯಾಗುವ ನಿರೀಕ್ಷೆ ಮೂಡಿದೆ. ಇಲ್ಲಿನ ಕೂಡ್ಲಿಗಿ ತಾಲ್ಲೂಕು ಸಂಪೂರ್ಣ ಮಳೆಯಾಶ್ರಿತ ಮತ್ತು ನೀರಾವರಿ ಸೌಲಭ್ಯದ ಕೊರತೆಯನ್ನು ಎದುರಿಸುತ್ತಿದೆ. ಈ ಭಾಗದ ಜನರ ಆರ್ಥಿಕ ಹಾಗೂ ಸಾಮಾಜಿಕ ಜೀವನವನ್ನು ಸುಧಾರಿಸುವ ಉದ್ದೇಶದಿಂದ ಈ ಘಟಕವನ್ನು ಸ್ಥಾಪನೆ ಮಾಡಲಾಗಿದೆ.

ಇನ್ನು ಈ ಘಟಕವು 400 ಶೇಂಗಾ ಮತ್ತು 200 ಮೆಟ್ರಿಕ್ ಟನ್ ಹುಣಸೆ ಹಣ್ಣನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸಂಸ್ಕರಿಸುವ ಸೀತಾರಾಮನ್ ಅವರ ಕನಸಿನ ಯೋಜನೆ ಇದಾಗಿದ್ದು. ಈ ಯೋಜನೆಯನ್ನು ವಿಸ್ತರಿಸುವುದಕ್ಕೆ ಮುಂದಾಗಿದ್ದಾರೆ. ಗುಡೇಕೋಟೆ ಈ ಘಟಕವನ್ನು ಇನ್ನೂ ಹಲವು ಪಟ್ಟು ವಿಸ್ತರಿಸುವ ಉದ್ದೇಶವಿದೆ. ಇದೀಗ ವಿಶ್ವಬ್ಯಾಂಕ್ನ 'ರಿವಾರ್ಡ್' ಯೋಜನೆಯ ಉನ್ನತ ಮಟ್ಟದ ತಂಡ, ಮಾರ್ಚ್ 9ರಂದು ಭೇಟಿ ನೀಡಲಿದೆ. ವಿಶ್ವಬ್ಯಾಂಕ್ ತಂಡದ ನಾಯಕಿ ನೋರಾ ಕೌಸ್ ನೇತೃತ್ವದಲ್ಲಿ ಕುಲರಂಜನ್ ಕುಜು ಮತ್ತು ಅಮಿತ್ ಅರೋರಾ ಅವರನ್ನು ಒಳಗೊಂಡ ತಂಡದ ಸದಸ್ಯರು ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಸಿಎಸ್ಆರ್ ನಿಧಿಯಡಿ ಒಂದು ಲಕ್ಷ ಹುಣಸೆ ಸಸಿಗಳನ್ನು ಬೆಳೆಸಿ ರೈತರಿಗೆ ವಿತರಿಸುವ ನರ್ಸರಿ ಸ್ಥಾಪನೆಯಂತಹ ಪ್ರಮುಖ ಯೋಜನೆಗಳನ್ನು ಪರಿಚಯಿಸುವ ಸಾಧ್ಯತೆ ಇದೆ. ಹೀಗಾಗಿ ವಿಶ್ವಸಂಸ್ಥೆಯ ತಂಡದ ಸದಸ್ಯರ ಭೇಟಿಯು ಮಹತ್ವ ಪಡೆದುಕೊಂಡಿದೆ.
ಯೋಜನೆಯ ಹಿನ್ನೆಲೆ ಏನು
ಇನ್ನು ಈಚೆಗೆ ವಿಜಯ ನಗರ ಪ್ರದೇಶಕ್ಕೆ ಭೇಟಿ ನೀಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಲ್ಯಾಣ ಕರ್ನಾಟಕದ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದರು. ಕರ್ನಾಟಕದ ವಿಜಯನಗರದ ಕಸಾಪುರ ಗ್ರಾಮದಲ್ಲಿ ಕಡಲೆಕಾಯಿ ಮತ್ತು ಹುಣಸೆಗೆ ಸಂಬಂಧಿಸಿದ ನಾಲ್ಕನೇ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ (FT-CFC)ವನ್ನು ಉದ್ಘಾಟಿಸಿದ್ದರು.
ಕೇಂದ್ರ ಮತ್ತು ನಬಾರ್ಡ್ ಜೊತೆಗೂಡಿ ಸಚಿವರ MPLAD ಯೋಜನೆಯಡಿಯಲ್ಲಿ ಹಣಕಾಸು ಸಹಕಾರ ನೀಡಲಾಗಿದ್ದ ಈ ಉಪಕ್ರಮವು, ಸಮಗ್ರ, ತಂತ್ರಜ್ಞಾನ ಆಧಾರಿತ ಮತ್ತು ಸುಸ್ಥಿರ ಅಭಿವೃದ್ಧಿಯ ಮೂಲಕ ಗ್ರಾಮೀಣ ಸಮುದಾಯಗಳನ್ನು ಸಬಲೀಕರಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ನಬಾರ್ಡ್ ಹೇಳಿತ್ತು. ಇದೀಗ ಈ ಪ್ರದೇಶಕ್ಕೆ ವಿಶ್ವಬ್ಯಾಂಕ್ ಸದಸ್ಯರ ತಂಡವು ಭೇಟಿ ನೀಡಲಿದೆ.
ಯಾವ ಪ್ರದೇಶಗಳಲ್ಲಿ ಕೇಂದ್ರ
ಇನ್ನು ಕರ್ನಾಟಕದ ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿಯಲ್ಲಿ ಯುನಿಸ್ಟರ್ ಈ ಹಿಂದೆ FT-CFC ಕೇಂದ್ರಗಳನ್ನು ಉದ್ಘಾಟಿಸಿತು. ಆಧುನಿಕ ಕೃಷಿ-ಮೂಲಸೌಕರ್ಯ, ತರಬೇತಿ ಮತ್ತು ಮಾರುಕಟ್ಟೆ ಸಂಪರ್ಕಗಳ ಮೂಲಕ ರೈತರನ್ನು ಸಬಲೀಕರಣಗೊಳಿಸುವ ಮೂಲಕ ಸ್ವಾವಲಂಬಿ ಗ್ರಾಮೀಣ ಆರ್ಥಿಕತೆಯನ್ನು ಸೃಷ್ಟಿಸುವ ಉದ್ದೇಶವನ್ನು ಈ ಯೋಜನೆಯು ಒಳಗೊಂಡಿದೆ. ಹೊಸದಾಗಿ ಕೇಂದ್ರದಿಂದ ಕಡಲೆಕಾಯಿ ಚಿಕ್ಕಿ ಮತ್ತು ಕಡಲೆಕಾಯಿ ಬೆಣ್ಣೆಯ ಮೊದಲ ಸರಕನ್ನು ಈ ಹಿಂದೆ ನಿರ್ಮಲಾ ಸೀತಾರಾಮನ್ ಅವರು ಉದ್ಘಾಟಿಸಿದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications