ವಿಶ್ವ ಬೈಸಿಕಲ್ ದಿನ: ಜೂ.3ರಂದು ಕರ್ನಾಟಕದ ಏಳು ಕಡೆ ಬೈಸಿಕಲ್ ರ್ಯಾಲಿ
ಬೆಂಗಳೂರು, ಜೂ.2: ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಎನ್ಎಸ್ಎಸ್ ಸಹಯೋಗದೊಂದಿಗೆ ವಿಶ್ವ ಸೈಕಲ್ ದಿನಾಚರಣೆ ಪ್ರಯುಕ್ತ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಸೈಕಲ್ ರ್ಯಾಲಿ ಆಯೋಜಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
Koo AppOn this #WorldBicycleDay, let’s commit ourselves to living healthy by pedaling our way. Let us hop on to a cycle & reinvent the age-old tradition of cycling in #NammaBengaluru. Let us pledge for a healthier and prosperous world. #Cycle4India #FitIndiaFreedomRider @BJP4Karnataka @CMOKarnataka @ianuragthakur - Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 3 June 2022
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ವಿಧಾನಸೌಧದ ಮುಂಭಾಗದಲ್ಲಿ ಜೂನ್ 3ರಂದು ಸಚಿವರಾದ ಡಾ.ಅಶ್ವಥ್ ನಾರಾಯಣ್ ಅವರು, ಮುರುಗೇಶ್ ನಿರಾಣಿಯವರು ಸೇರಿದಂತೆ ಹಲವು ಗಣ್ಯರು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಸೈಕಲ್ ಬಳಕೆಯಿಂದ ಆರೋಗ್ಯದಲ್ಲಾಗುವ ಉತ್ತಮ ಬದಲಾವಣೆಗಳ ಕುರಿತು ಜನರಿಗೆ ತಿಳಿಸುವುದಕ್ಕಾಗಿ ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಿಗೆ ಸೈಕಲ್ ಬಳಸುವಂತೆ ಪ್ರೇರೇಪಿಸುವ ಸಲುವಾಗಿ ವಿಶ್ವ ಬೈಸಿಕಲ್ ದಿನಾಚರಣೆಯನ್ನು ಆಯೋಜಿಸಲಾಗುತ್ತಿದೆ.
ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಎನ್ಎಸ್ಎಸ್ ಸಹಯೋಗದೊಂದಿಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದೀಗ ಸೈಕಲ್ ರ್ಯಾಲಿ ಕೂಡ ಆಯೋಜಿಸಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಸೈಕಲ್ ಬಳಕೆ ಹೆಚ್ಚಿಸಿದ್ದಷ್ಟು ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದಾಗಿದೆ. ಹಾಗೂ ಮನುಷ್ಯ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಜೊತೆಗೆ ಟ್ರಾಫಿಕ್ ಸಮಸ್ಯೆಯನ್ನು ಕೂಡ ಕಡಿಮೆಗೊಳಿಸಬಹುದು. ಹಾಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಸೈಕಲ್ ಬಳಸಬೇಕು ಎಂದು ಸಚಿವ ಡಾ.ನಾರಾಯಣಗೌಡ ಅವರು ಕರೆ ನೀಡಿದರು.
ಕರ್ನಾಟಕದ 7 ಸ್ಥಳಗಳಲ್ಲಿ ಐತಿಹಾಸಿಕ ಬೈಸಿಕಲ್ ರ್ಯಾಲಿ
ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದ 75 ಐತಿಹಾಸಿಕ ಸ್ಥಳಗಳಲ್ಲಿ ರ್ಯಾಲಿ ನಡೆಯಲಿದೆ. ನಮ್ಮ ಕರ್ನಾಟಕದ 7 ಐತಿಹಾಸಿಕ ಸ್ಥಳಗಳಾದ ಹಂಪಿ, ಬೇಲೂರು, ರಾಣಿ ಅಬ್ಬಕ್ಕ ಕೋಟೆ, ಗೋಲ್ ಗುಂಬಜ್, ಮೈಸೂರು ಅರಮನೆ, ಮಲ್ಪೆ ಮತ್ತು ಮಡಿಕೇರಿ ಕೋಟೆಗಳಲ್ಲಿ ಬೈಸಿಕಲ್ ರ್ಯಾಲಿಯನ್ನು ಆಯೋಜಿಸಲಾಗಿದೆ. ನಮ್ಮ-ನಿಮ್ಮ ಸೈಕಲ್ ಫೌಂಡೇಷನ್, ಇವರು ಸ್ಟಾರ್ಟ್ ಅಪ್ ಸೆಲ್, ಬೆಂಗಳೂರು ಇವರ ಸಹಯೋಗದಲ್ಲಿ "ಲೀಡ್ ಬೆಂಗಳೂರು ರೈಡ್-2022' ಆಯೋಜಿಸುತ್ತಿದ್ದು ಇದರಲ್ಲಿ ಜರ್ಮನಿಯ ವಿವಿಧ ಕಂಪನಿಗಳ CEOಗಳು ಭಾಗವಹಿಸುತ್ತಿದ್ದಾರೆ. ಇದರ ಜೊತೆಗೆ ಸುಮಾರು 200 ಸೈಕ್ಲಿಸ್ಟ್ಗಳು ಪಾಲ್ಗೊಳ್ಳಲಿದ್ದಾರೆ.

ಜರ್ಮನಿ ರಾಷ್ಟ್ರದ ವಿವಿಧ ಕಂಪನಿಗಳ ಕಾರ್ಯನಿರ್ವಾಹಕರ ತಂಡವು ಈ ಪ್ರಮುಖ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದು, ಇವರು ಭಾರತ ಮತ್ತು ಜರ್ಮನಿ ದೇಶಗಳ ನಡುವಣ ಸೈಕಲ್ ಸಂಸ್ಕೃತಿಗೆ ಸಾಕ್ಷಿಯಾಗಲಿದ್ದಾರೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications