ಜಗದ್ವಿಖ್ಯಾತ ಗಣಿತಶಾಸ್ತ್ರಜ್ಞ ಎಂ ಆರ್ ಎಸ್ ರಾವ್ ನಿಧನ: ಸಿಎಂ ಸಂತಾಪ
ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಅಮೆರಿಕಾದಲ್ಲಿ ನೆಲೆಸಿದ್ದ ಕರ್ನಾಟಕ ಮೂಲದ ಸಿ.ಆರ್ ರಾವ್ ಅವರಿಗೆ 102 ವರ್ಷ ವಯಸ್ಸಾಗಿತ್ತು.
ಎಂ ಆರ್ ಎಸ್ ರಾವ್ ಎಂದೇ ಖ್ಯಾತರಾಗಿದ್ದ ವಿಜ್ಞಾನಿ ಮಂಚನಹಳ್ಳಿ ರಂಗಸ್ವಾಮಿ ಸತ್ಯನಾರಾಯಣ ರಾವ್ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಜನಿಸಿದರು. ಸಿ.ಆರ್ ರಾವ್ ಅವರು ಗಣಿತ ಮತ್ತು ಸಂಖ್ಯಾಶಾಸ್ತ್ರದಲ್ಲಿ ಪರಿಣಿತರಾಗಿದ್ದರು.

ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ 'ಪದ್ಮವಿಭೂಷಣ' ಮಾತ್ರವಲ್ಲದೆ, 'ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ - 2023', 'ನ್ಯಾಷನಲ್ ಮೆಡಲ್ ಆಫ್ ಸೈನ್ಸ್' ಇನ್ನು ಮುಂತಾದ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಭಾರತದ ಕೀರ್ತಿ ಹೆಚ್ಚಿಸಿದ್ದರು.
ರಾವ್ ರವರು 1943 ರಲ್ಲಿ ಆಂಧ್ರ ವಿಶ್ವವಿದ್ಯಾಲಯದಿಂದ ಗಣಿತಶಾಸ್ತ್ರದಲ್ಲಿ ಎಂ.ಎಸ್ಸಿ. ಮತ್ತು ಕಲ್ಕತ್ತಾ ಯುನಿವರ್ಸಿಟಿಯಲ್ಲಿ ಎಮ್.ಎ ಪದವಿಯನ್ನು ಪಡೆದರು. 1948 ರಲ್ಲಿ ಆರ್.ಎ.ಫಿಶರ್ ಅವರ ನೇತೃತ್ವದಲ್ಲಿ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಕಿಂಗ್ಸ್ ಕಾಲೇಜಿನಲ್ಲಿ ಪಿ.ಹೆಚ್.ಡಿ ಪದವಿಯನ್ನು ಪಡೆದರು. ೧೯೬೫ ರಲ್ಲಿ ಕೇಂಬ್ರಿಡ್ಜ್ ನಿಂದ ಇವರು ಎಸ್ಸಿ.ಡಿ ಪದವಿಯನ್ನು ಪಡೆದರು. ಬಳಿಕ ಕೇಂಬ್ರಿಡ್ಜ್ ನಿಂದ ಇವರು ಎಸ್ಸಿ.ಡಿ ಪದವಿಯನ್ನು ಪಡೆದರು.
ರಾವ್ ರವರು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್ಸ್ಟಿಟ್ಯೂಟ್ ಮತ್ತು ಕೇಂಬ್ರಿಡ್ಜ್ ನ ಮಾನವಶಾಸ್ತ್ರದ ಮ್ಯೂಸಿಯಂನಲ್ಲಿ ಕೆಲಸ ಮಾಡಿದ್ದು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್ಸ್ಟಿಟ್ಯೂಟ್ ನ ನಿರ್ದೇಶಕ, ಜವಹರಲಾಲ್ ನೆಹರೂ ಪ್ರಾಧ್ಯಾಪಕ ಮತ್ತು ಭಾರತದ ರಾಷ್ಟ್ರೀಯ ಪ್ರೊಫೆಸರ್, ಪಿಟ್ಸ್ಬರ್ಗ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಮತ್ತು ಅಂಕಿಅಂಶಗಳ ಅಧ್ಯಕ್ಷರು ಪೆನ್ಸಿಲ್ವೇನಿಯಾ ಸ್ಟೇಟ್ ಯುನಿವರ್ಸಿಟಿಯ ಮಲ್ಟಿವೇರಿಯೇಟ್ ಅನಾಲಿಸಿಸ್ ಕೇಂದ್ರದ ನಿರ್ದೇಶಕರಾಗಿದ್ದು ಹೀಗೆ ಇವರು ಹಲವಾರು ಪ್ರಮುಖ ಸ್ಥಾನಗಳನ್ನು ಹೊಂದಿದ್ದರು.
ಎಂ ಆರ್ ಎಸ್ ರಾವ್ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರ ನಿಧನದ ಸುದ್ದಿ ಕೇಳಿ ನೋವಾಯಿತು.
ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ 'ಪದ್ಮವಿಭೂಷಣ' ಮಾತ್ರವಲ್ಲದೆ, 'ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ - 2023', 'ನ್ಯಾಷನಲ್ ಮೆಡಲ್ ಆಫ್ ಸೈನ್ಸ್' ಇನ್ನು ಮುಂತಾದ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಭಾರತದ ಕೀರ್ತಿ ಹೆಚ್ಚಿಸಿದ್ದರು. ಇಂತಹ ಮೇರು ಸಾಧಕರ ನಿಧನ ನಾಡಿಗೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬವರ್ಗಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
-
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು












Click it and Unblock the Notifications