ವಿಶ್ವ ಪ್ರವಾಸೋದ್ಯಮ ದಿನ: ಉದ್ಯೋಗ ಸೃಷ್ಟಿಗೆ ಪ್ರವಾಸೋದ್ಯಮ ಅಗತ್ಯ ಎಂದ ರಾಜಕೀಯ ನಾಯಕರು
ಬೆಂಗಳೂರು, ಸೆಪ್ಟೆಂಬರ್ 27: ಇಂದು ವಿಶ್ವ ಪ್ರವಾಸೋದ್ಯಮ ದಿನ. ನಮ್ಮ ಮಾನಸಿಕ ಒತ್ತಡವೆಲ್ಲವನ್ನೂ ಮರೆತು ಸಹಜಸ್ಥಿತಿಗೆ ತರುವಲ್ಲಿ ನಾವು ಕೈಗೊಳ್ಳುವ ಪ್ರವಾಸ ಪ್ರಮುಖ ಪಾತ್ರ ವಹಿಸುತ್ತದೆ.
ವಿಶ್ವ ಸಂಸ್ಥೆಯು ವಿಶ್ವ ಪ್ರವಾಸೋದ್ಯಮ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್ 27ರಂದು ಆಚರಿಸುತ್ತದೆ. ಹಲವಾರು ಪ್ರವಾಸಿ ಕೇಂದ್ರಗಳು, ಸಂಘಟನೆಗಳು ಮತ್ತು ಸರ್ಕಾರಿ ಏಜೆನ್ಸಿಗಳು ಈ ದಿನವನ್ನು ಆಚರಿಸುವಲ್ಲಿ ವಿಶೇಷ ಆಸಕ್ತಿ ಹೊಂದಿದೆ.
ಕರ್ನಾಟಕದ ಮೈಸೂರು, ಕೊಡಗು ಹಾಗೂ ಇತರ ಜಿಲ್ಲೆಗಳು, ಗೋವಾ, ಕೊಡೈಕೆನಾಲ್, ಸೇರಿದಂತೆ ಅನೇಕ ಪ್ರವಾಸಿ ಸ್ಥಳಗಳನ್ನು ತೆರೆಯಲಾಗಿದೆ. ಜನರು ಮಾಸ್ಕ್ ಧರಿಸಿ ತಮ್ಮ ನೆಚ್ಚಿನ ಸ್ಥಳಗಳನ್ನು ನೋಡಲು ಹೋಗುತ್ತಿರುವುದು ನಾವು ನೋಡಬಹುದು.

ವಿಶ್ವ ಪ್ರವಾಸೋದ್ಯಮ ದಿನದ ಶುಭಾಶಯ ಕೋರಿರುವ ರಾಜ್ಯದ ಬಹುತೇಕ ಸಚಿವರು ಹಾಗೂ ರಾಜಕೀಯ ನಾಯಕರು, ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ ಪ್ರವಾಸೋದ್ಯಮದ ಅಭಿವೃದ್ಧಿ ಅತ್ಯಗತ್ಯ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ ಕೂ ಹೇಳಿಕೆ
"ಸರ್ವರಿಗೂ ವಿಶ್ವ ಪ್ರವಾಸೋದ್ಯಮ ದಿನದ ಹಾರ್ದಿಕ ಶುಭಾಶಯಗಳು. ಕರ್ನಾಟಕ- ಒಂದು ರಾಜ್ಯ ಹಲವು ಜಗತ್ತು. ಪ್ರಕೃತಿ ವೈವಿಧ್ಯ, ವನ್ಯಜೀವಿ, ಸುಂದರ ಕಡಲತೀರ, ಸಾಂಸ್ಕೃತಿಕ ವೈಭವ, ಐತಿಹಾಸಿಕ ಪರಂಪರೆ, ಧಾರ್ಮಿಕ ಪುಣ್ಯಕ್ಷೇತ್ರಗಳು, ದಿವ್ಯ, ಭವ್ಯ, ಅಸಾಧಾರಣ ಅನುಭವ ಪಡೆಯಲು ಕರ್ನಾಟಕಕ್ಕೆ ಬನ್ನಿ'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂ ಮಾಡಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಕೂ ಹೇಳಿಕೆ
"ನಾಡಿನ ಜನತೆಗೆ, ನಾಡನ್ನು ಅರಸಿ ಬರುವ ಪ್ರವಾಸಿಗರಿಗೆ ವಿಶ್ವ ಪ್ರವಾಸೋದ್ಯಮ ದಿನದ ಶುಭಾಶಯಗಳು. ನಾಡಿನ ಅದ್ವಿತೀಯ ಸೊಬಗು, ಇತಿಹಾಸ, ಸಂಸ್ಕೃತಿ, ಕಲೆ, ಜನಪದಗಳನ್ನು ಜಗತ್ತಿಗೆ ಪರಿಚಯಿಸುವ ದೊಡ್ಡ ವೇದಿಕೆ ಪ್ರವಾಸೋದ್ಯಮ. ಈ ವಲಯದ ಸುಧಾರಣೆ, ಪ್ರಗತಿಗೆ ಪೂರಕ. ನಾವೂ ನಮ್ಮ ರಾಜ್ಯದ ಪ್ರವಾಸಿ ತಾಣಗಳಿಗೆ ಭೇಟಿ ನೀಡೋಣ, ಕರ್ನಾಟಕವನ್ನು ತಿಳಿಯೋಣ,''' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂ ಮಾಡಿದ್ದಾರೆ.
ಸಚಿವ ಕೆ. ಸುಧಾಕರ್ ಕೂ ಹೇಳಿಕೆ
"ಮಂಜು ಮುಸುಕಿದ ಬೆಟ್ಟಗಳು, ವಿಸ್ಮಯಕಾರಿ ಚಾರಣ ದಾರಿಗಳು, ಸರ್. ಎಂ. ವಿಶ್ವೇಶ್ವರಯ್ಯನವರ ಹುಟ್ಟೂರು, ಐತಿಹಾಸಿಕ ಗುಡಿ- ಗೋಪುರಗಳು. ಇಷ್ಟೆಲ್ಲ ವೈಶಿಷ್ಟ್ಯತೆ, ವೈವಿಧ್ಯತೆಗಳುಳ್ಳ ಚಿಕ್ಕಬಳ್ಳಾಪುರ ಎಲ್ಲ ವಯೋಮಾನದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಬನ್ನಿ ನಮ್ಮೂರು ಚಿಕ್ಕಬಳ್ಳಾಪುರಕ್ಕೆ. ಎಲ್ಲರಿಗೂ ವಿಶ್ವ ಪ್ರವಾಸೋದ್ಯಮ ದಿನದ ಶುಭಾಶಯಗಳು'' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಕೂ ಮಾಡಿದ್ದಾರೆ.

"ಇಂದು ವಿಶ್ವ ಪ್ರವಾಸೋದ್ಯಮ ದಿನ. ಸ್ಥಳೀಯ ಆರ್ಥಿಕತೆ, ಉದ್ಯೋಗ ಸೃಷ್ಟಿಗೆ ಪ್ರವಾಸೋದ್ಯಮ ಸಹಕಾರಿಯಾಗಿರುವ ಜೊತೆಗೆ ರಾಜ್ಯದ ಪ್ರಕೃತಿ ಸೌಂದರ್ಯ, ಇತಿಹಾಸ, ಪರಂಪರೆ, ಕಲೆ, ಸಂಸ್ಕೃತಿಗಳ ಪರಿಚಯದ ವೇದಿಕೆಯೂ ಆಗಿದೆ. ಸರ್ವರಿಗೂ ವಿಶ್ವ ಪ್ರವಾಸೋದ್ಯಮ ದಿನದ ಶುಭಾಶಯಗಳು,'' ಎಂದು ಚಾಮುಂಡೇಶ್ವರಿ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ.
ಪ್ರವಾಸಿ ತಾಣಗಳ ಸ್ವಚ್ಛತೆ, ಸುರಕ್ಷತೆ
"ಪ್ರವಾಸೋದ್ಯಮದಲ್ಲಿ ಉದ್ಯೋಗ ಸೃಷ್ಟಿಗೆ, ಸುಸ್ಥಿರ ಅಭಿವೃದ್ಧಿಗೆ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ. ಪ್ರವಾಸಿ ತಾಣಗಳ ಸ್ವಚ್ಛತೆ, ಸುರಕ್ಷತೆಯನ್ನು ಕಾಪಾಡೋಣ. ಎಲ್ಲರಿಗೂ ವಿಶ್ವ ಪ್ರವಾಸೋದ್ಯಮ ದಿನದ ಶುಭಾಶಯಗಳು,'' ಶಿರಾ ಶಾಸಕ ಸಿ.ಎಂ. ರಾಜೇಶ್ ಗೌಡ ಪ್ರಸ್ತಾಪಿಸಿದ್ದಾರೆ.
ಉದ್ಯೋಗ ಸೃಷ್ಠಿಗೆ ಪ್ರವಾಸೋದ್ಯಮ ಸಹಕಾರಿ
ಇಂದು ವಿಶ್ವ ಪ್ರವಾಸೋದ್ಯಮ ದಿನ. ಸ್ಥಳೀಯ ಆರ್ಥಿಕತೆ, ಉದ್ಯೋಗ ಸೃಷ್ಠಿಗೆ ಪ್ರವಾಸೋದ್ಯಮ ಸಹಕಾರಿಯಾಗಿರುವ ಜೊತೆಗೆ ರಾಜ್ಯದ ಪ್ರಕೃತಿ ಸೌಂದರ್ಯ, ಇತಿಹಾಸ, ಪರಂಪರೆ, ಕಲೆ, ಸಂಸ್ಕೃತಿಗಳ ಪರಿಚಯದ ವೇದಿಕೆಯೂ ಆಗಿದೆ. ಪ್ರವಾಸೋದ್ಯಮ ತಾಣಗಳನ್ನು ಸಂರಕ್ಷಿಸುವುದರ ಜೊತೆಗೆ ಸ್ವಚ್ಛವಾಗಿಡೋಣ, ಸರ್ವರಿಗೂ ವಿಶ್ವ ಪ್ರವಾಸೋದ್ಯಮ ದಿನದ ಶುಭಾಶಯಗಳು,'' ಎಂದು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದ್ದಾರೆ.
-
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ












Click it and Unblock the Notifications