ಮಂಗಳೂರು ಇಸ್ಕಾನ್ ಬಿಸಿಯೂಟದಲ್ಲಿ ಹುಳು ಪತ್ತೆ

ನಗರದ ಡಾ. ಅಂಬೇಡ್ಕರ್ ವೃತ್ತದಲ್ಲಿರುವ ಸರಕಾರಿ ಶಾಲೆಯ ಮಕ್ಕಳಿಗೆ ನವೆಂಬರ್ 29ರಂದು ಪೂರೈಸಿದ್ದ ಮಧ್ಯಾಹ್ನದ ಬಿಸಿಯೂಟದಲ್ಲಿ ಭಾರಿ ಸಂಖ್ಯೆಯಲ್ಲಿ ಸಣ್ಣ ಸಣ್ಣ ಬಿಳಿ ಹುಳುಗಳು ಸತ್ತು ಬಿದ್ದಿರುವುದು ಪತ್ತೆಯಾಗಿದೆ.
ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಯೋಜನೆಯಡಿ ನಿನ್ನೆ ಶುಕ್ರವಾರ ಮಧ್ಯಾಹ್ನ ಇಲ್ಲಿನ ಸರಕಾರಿ ಶಾಲೆಯಲ್ಲಿ ಎಂದಿನಂತೆ ಹಂಚಲಾಗುತ್ತಿತ್ತು. ಆಗ ಶಾಲಾ ಬಾಲಕಿಯೊಬ್ಬಳಿಗೆ ತನ್ನ ತಟ್ಟೆಗೆ ಬಡಿಸಿದ್ದ ಅನ್ನದಲ್ಲಿ ಹುಳುಗಳು ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆಕೆ ಅದನ್ನು ಶಾಲಾ ಸಿಬ್ಬಂದಿಯ ಗಮನಕ್ಕೆ ತರಲಾಗಿ ಅವರು ಇಡೀ ಅಡುಗೆಯನ್ನು ಆಮೂಲಗ್ರವಾಗಿ ಪರೀಕ್ಷಿಸಿದ್ದಾರೆ.
ಆ ವೇಳೆ ಪಾತ್ರೆಗಳಲ್ಲಿದ್ದ ಅಡುಗೆಯಲ್ಲೂ ಹುಳುಗಳು ಕಂಡುಬಂದಿದೆ. ತಕ್ಷಣ ಎಚ್ಚೆತ್ತ ಶಿಕ್ಷಕ ಸಿಬ್ಬಂದಿ ಮಕ್ಕಳಿಗೆ ಊಟ ಮಾಡದಂತೆ ಸೂಚಿಸಿದ್ದಾರೆ. ಜತೆಗೆ, ಬಿಸಿಯೂಟ ಪೂರೈಸಿದ್ದ ಸ್ಥಳೀಯ ಇಸ್ಕಾನ್ ಸಂಸ್ಥೆಯ ಸಿಬ್ಬಂದಿಗೂ ತಕ್ಷಣ ಕರೆ ನೀಡಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಇಸ್ಕಾನ್ ಸಿಬ್ಬಂದಿ ಆಹಾರವನ್ನೆಲ್ಲಾ ವಾಪಸ್ ತೆಗೆದುಕೊಂಡು ಹೋಗಿ, ಮುಂದಿನ ದಿನಗಳಲ್ಲಿ ಹೀಗಾಗದಂತೆ ಎಚ್ಚರ ವಹಿಸುವುದಾಗಿ ಶಿಕ್ಷಕರಿಗೆ ಭರವಸೆ ನೀಡಿದ್ದಾರೆ. ಆದರೆ ಈ ಹಿಂದೆಯೂ ಇದೇ ಶಾಲೆಯಲ್ಲಿ ಇಂತಹುದೇ ಘಟನೆ ನಡೆದಿತ್ತು ಎಂದು ಪೋಷಕರು ತಿಳಿಸಿದ್ದಾರೆ.
ಗಮನಾರ್ಹವೆಂದರೆ ಇತ್ತೀಚೆಗೆ ದೇಶಾದ್ಯಂತ ಕಳಪೆ ಮಧ್ಯಾಹ್ನದ ಬಿಸಿಯೂಟ ಪೂರೈಕೆಯಲ್ಲಿ ಅನಾಹುತಗಳು ಸಂಭವಿಸಿದ ಹಿನ್ನೆಲೆಯಲ್ಲಿ ಶಾಲಾ ಬಿಸಿಯೂಟ ಪೂರೈಕೆಯ ಸಂಪೂರ್ಣ ಜವಾಬ್ದಾರಿಯನ್ನು ಸರಕಾರೇತರ ಧಾರ್ಮಿಕ ಸಂಸ್ಥೆಯಾದ ಇಸ್ಕಾನ್ ಗೆ ವಹಿಸಬೇಕು ಎಂಬುದು ಚರ್ಚೆಗೆ ಬಂದಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications