ಹಿಂದಿ ಸಮರ್ಥನೆ: ಸಾಹಿತಿ ದೊಡ್ಡರಂಗೇಗೌಡ ಕ್ಷಮಾಪಣೆ
ಬೆಂಗಳೂರು, ಜನವರಿ 27: ಹಿಂದಿ ಭಾಷೆಯ ಬಳಕೆಯನ್ನು ಸಮರ್ಥಿಸಿಕೊಳ್ಳುವ ಮೂಲಕ ವ್ಯಾಪಕ ಟೀಕೆ ಹಾಗೂ ಆಕ್ರೋಶಕ್ಕೆ ತುತ್ತಾಗಿದ್ದ ಹಿರಿಯ ಕವಿ, 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ದೊಡ್ಡರಂಗೇಗೌಡ ಅವರು ತಮ್ಮ ಹೇಳಿಕೆಗೆ ಕ್ಷಮಾಪಣೆ ಕೋರಿದ್ದಾರೆ.
ಮುಂದಿನ ತಿಂಗಳು ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದೊಡ್ಡರಂಗೇಗೌಡ ಅವರು, ಕನ್ನಡ ದಿನಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹಿಂದಿ ರಾಷ್ಟ್ರಭಾಷೆ ಎಂದು ಹೇಳಿಕೆ ನೀಡಿದ್ದರು. ವಿದೇಶದ ಇಂಗ್ಲಿಷ್ಅನ್ನು ಒಪ್ಪುವುದಾದರೆ ದೇಶದ್ದೇ ಆದ ಭಾಷೆಗೆ ವಿರೋಧ ಏಕೆ. ಇದು ಅರ್ಥವಾಗದ ಸಂಗತಿ ಎಂದಿದ್ದರು. ಬಳಿಕ ಬೇರೆ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿಯೂ ಅವರು ಹಿಂದಿ ಭಾಷೆಯ ಹೇರಿಕೆಯಾಗುತ್ತಿಲ್ಲ. ಹಿಂದಿಗೆ ಮಹತ್ವ ನೀಡುವುದರಲ್ಲಿ ತಪ್ಪಿಲ್ಲ ಎಂದಿದ್ದರು.
ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಗಿರಿಯಂತಹ ಮಹತ್ವದ ಗೌರವ ಪಡೆದುಕೊಂಡ ವ್ಯಕ್ತಿ, ಹಿಂದಿ ಹೇರಿಕೆಯಿಂದ ಆಗುತ್ತಿರುವ ಸಮಸ್ಯೆಗಳು, ಕನ್ನಡ ಭಾಷೆಯ ಮೇಲಾಗುತ್ತಿರುವ ದಬ್ಬಾಳಿಕೆ ಮತ್ತು ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯಗಳನ್ನು ಅರಿತುಕೊಳ್ಳದೆ, ಹಿಂದಿಯನ್ನು ರಾಷ್ಟ್ರಭಾಷೆ ಎನ್ನುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಅನೇಕರು ಟೀಕಿಸಿದ್ದರು. ಮುಂದೆ ಓದಿ.

ಕನ್ನಡವನ್ನು ಆರಾಧಿಸುತ್ತೇನೆ
ಅದಕ್ಕೆ ತಮ್ಮದೇ ಕೈ ಬರಹದಲ್ಲಿ ಕ್ಷಮಾಪಣೆ ಹಾಗೂ ಸ್ಪಷ್ಟನೆ ನೀಡಿರುವ ದೊಡ್ಡರಂಗೇಗೌಡರ ಪತ್ರ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. 'ನಾನೇನೂ ಯಾವುದೇ ಭಾಷೆಯನ್ನು ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ. ನಾನು ಭಕ್ತಿಪೂರ್ವಕವಾಗಿ-ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ' ಎಂದು ಅವರು ತಿಳಿಸಿದ್ದಾರೆ.

ಕ್ಷಮೆ ಯಾಚಿಸುತ್ತೇನೆ
'ಕನ್ನಡಿಗರ ಮೇಲೆ ಹಿಂದಿ ಭಾಷೆಯ ಮತ್ತು ಇಂಗ್ಲಿಷ್ ಹೇರಿಕೆಯ ರೀತಿ-ನೀತಿಯನ್ನು ನಾನು ಸಹಿಸುವುದಿಲ್ಲ. ನನ್ನ ಮಾತುಗಳು ಕನ್ನಡ ಜನರ ಮನಸ್ಸನ್ನು ನೋಯಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ' ಎಂದು ದೊಡ್ಡರಂಗೇಗೌಡ ತಿಳಿಸಿದ್ದಾರೆ.

ಹಿಂದಿಯನ್ನು ತಿರಸ್ಕರಿಸುವುದು ಏಕೆ?
ಇಂಗ್ಲೀಷಿಗೆ ನಾವು ಮಣೆ ಹಾಕುತ್ತೇವೆ. ಹಿಂದಿಯನ್ನು ಏಕೆ ತಿರಸ್ಕಾರ ಮಾಡಬೇಕು. ಹಿಂದಿ ನಮ್ಮ ರಾಷ್ಟ್ರ ಭಾಷೆ, ಇಲ್ಲಿ ಕನ್ನಡ ಹೇಗೋ ಅದೇ ರೀತಿ ಉತ್ತರ ಭಾರತದಲ್ಲಿ ಹಿಂದಿಗೆ ಹೆಚ್ಚಿನ ಸ್ಥಾನಮಾನವಿದೆ ಎಂದು ಹೇಳಿದ್ದಾರೆ. ಇಂಗ್ಲೀಷ್ ಒಪ್ಪುವ ನಾವು, ಹಿಂದಿ ಭಾಷೆಯನ್ನು ಏಕೆ ಒಪ್ಪಿಕೊಳ್ಳಬಾರದು ಎಂದು ದೊಡ್ಡರಂಗೇಗೌಡ ಪ್ರಶ್ನಿಸಿದ್ದರು.
Recommended Video

ಯಾವ ದೇಶಕ್ಕೆ ರಾಷ್ಟ್ರಭಾಷೆ?
ಹಿಂದಿ ಯಾವ ದೇಶಕ್ಕೆ ರಾಷ್ಟ್ರಭಾಷೆ? ಭಾರತದಲ್ಲಿರುವ ಎಲ್ಲವೂ ರಾಷ್ಟ್ರಭಾಷೆಗಳೇ. ದೊಡ್ಡರಂಗೇಗೌಡರಿಗೆ ಕನ್ನಡ ಎದುರಿಸುತ್ತಿರುವ ಸವಾಲು ಅರ್ಥವಾಗುತ್ತಿಲ್ಲ. ಅಥವಾ ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಮರೆತಿದ್ದಾರೆ. ಕನ್ನಡಕ್ಕೆ ಸಂಚಕಾರ ಬರುತ್ತಿರುವುದು ಹಿಂದಿಯಿಂದಲೇ ಹೊರತು ಇಂಗ್ಲಿಷ್ನಿಂದ ಅಲ್ಲ. ಕರ್ನಾಟಕದ ಎಲ್ಲ ಕಡೆಯೂ ಹಿಂದಿಯವರು ತುಂಬಿಕೊಳ್ಳುತ್ತಿದ್ದಾರೆ. ಹಿಂದಿಯಿಂದ ಆಗುತ್ತಿರುವ ಆಕ್ರಮಣದ ಬಗ್ಗೆ ದನಿ ಎತ್ತಬೇಕಾದವರೇ ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿತ್ತು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications