H S Venkatesh Murthy: 'ಮರೆಯಾದ ಭಾವ ಗೀತೆಗಳ ಭಾವ' ಎಚ್ಎಸ್ವಿ ನಿಧನಕ್ಕೆ ಗಣ್ಯರ ಸಂತಾಪ
ಬೆಂಗಳೂರು, ಮೇ 30: ಕನ್ನಡ ಅಕ್ಷರ ಲೋಕಕ್ಕೆ ಸಾಕಷ್ಟು ಕೊಡುಗೆ ನೀಡಿರುವ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಡಾ. ಎಚ್.ಎಸ್. ವೆಂಕಟೇಶ್ ಮೂರ್ತಿ ಅವರು ಇಂದು ನಿಧನರಾದರು. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಬೆಳಗ್ಗೆ ಕೆಂಗೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಗಮ ಸಂಗೀತ ಕ್ಷೇತ್ರದಲ್ಲೂ ಸಕ್ರಿಯವಾಗಿದ್ದ ಇವರು 'ಎಚ್ಎಸ್ವಿ' ಎಂದೇ ಹೆಸರುವಾಸಿಯಾದವರು. ಅವರ ಅಗಲಿಕೆಗೆ ಆಪ್ತ ಬಳಗ, ಗಣ್ಯರು, ಸಾಹಿತ್ಯಾಸಕ್ತರು ಕಂಬನಿ ಮಿಡಿದಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು, ಕನ್ನಡದ ಹಿರಿಯ ಕವಿ, ಸಾಹಿತಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ನೋವಾಯಿತು. ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ತಮ್ಮ ಕವನಗಳ ಮೂಲಕ ನಾಡಿನ ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ಅವರು ಟ್ವೀಟ್ (ಎಕ್ಸ್) ಮಾಡಿದ್ದಾರೆ.

85 ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೌರವಕ್ಕೆ ಪಾತ್ರರಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕ ಬಡವಾದಂತಾಗಿದೆ. ಅವರ ಅಗಲಿಕೆಯ ದುಃಖವನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಅವರ ಆತ್ಮಕ್ಕೆ ಚಿರ ಶಾಂತಿ ನೀಡಲಿ, ಓಂ ಶಾಂತಿಃ ಎಂದು ಪ್ರಾರ್ಥಿಸಿದ್ದಾರೆ.
'ಮರೆಯಾದ ಭಾವ ಗೀತೆಗಳ ಭಾವ'
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು, 'ಮರೆಯಾದ ಭಾವಗೀತೆಗಳ ಭಾವ'. ಅಗಲಿದ ಕಾವ್ಯ ಚೇತನ ಡಾ.ಹೆಚ್ ಎಸ್ ವೆಂಕಟೇಶಮೂರ್ತಿ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಭಾವಗೀತೆಗಳ ಭವ್ಯ ಪರಂಪರೆಯ ಪ್ರತಿನಿಧಿ ಡಾ. ಎಚ್ಎಸ್ ವೆಂಕಟೇಶಮೂರ್ತಿ ಅವರ ನಿಧನ ಕನ್ನಡ ಕಾವ್ಯ ಲೋಕಕ್ಕೆಅತಿ ದೊಡ್ಡ ಆಘಾತ ತಂದಿದೆ ಎಂದು ಹೇಳಿದ್ದಾರೆ.
ಡಾ. ಎಚ್ಎಸ್ ವಿ ಅವರ ನಿಧನದ ಸುದ್ದಿ ಬಂದ ಕೂಡಲೇ ದಿಗ್ಭ್ರಮೆ ಆಯಿತು. ಕನ್ನಡ ಸಾಹಿತ್ಯದ ಕಾವ್ಯ ಪರಂಪರೆಗೆ ಹೊಸ ಭಾಷ್ಯ ಬರೆದ ಕವಿ ಎಚ್ಎಸ್ ವಿ ಅವರು. ಸದಾ ನಮ್ಮ ಕಿವಿಗಳಲ್ಲಿ ಅನುರಣಿಸುವ ಅವರ ಗೀತೆಗಳು ಸೊಗಸು ಅನನ್ಯವಾಗಿದೆ. ಅದು ತೂಗು ಮಂಚದಲ್ಲಿ, ಅಮ್ಮ ನಾನು ದೇವರಾಣೆ, ಲೋಕದ ಕಣ್ಣಿಗೆ ರಾಧೆಯು ಕೂಡ, ಹುಚ್ಚು ಕೋಡಿ ಮನಸು, ಇಂತಹ ಯಾವುದೇ ಗೀತೆಗಳು ನಮ್ಮನ್ನು ಬೇರೊಂದು ಲೋಕದ ಭಾವಲಹರಿಗೆ ಕೊಂಡೊಯ್ಯುತ್ತವೆ.
ಇಂತಹ ಗೀತೆಗಳನ್ನು ಕೊಟ್ಟ ಕವಿ ನಮ್ಮನ್ನು ಇಂದು ಅಗಲಿದ್ದಾರೆ. ನೂರಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಕೊಟ್ಟ ಡಾ. ಎಚ್ ಎಸ್ ವಿ ಬರೀ ಕವಿಯಾಗಿಯಲ್ಲ, ನಾಟಕಕಾರರಾಗಿ, ಅಂಕಣಕಾರರಾಗಿ, ಅನುವಾದ ,ಶಿಶು ಸಾಹಿತ್ಯ, ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ತಮ್ಮ ಅನನ್ಯ ಕೊಡುಗೆ ಕೊಟ್ಟಿದ್ದಾರೆ. ಬುದ್ಧ ಚರಣ ಮಹಾ ಕಾವ್ಯದ ಮೂಲಕ ಅವರು ಸಾಹಿತ್ಯದ ಮತ್ತೊಂದು ಮಜಲನ್ನು ಸ್ಪರ್ಶಿಸಿದ್ದಾರೆ ಎಂದು ಕವಿಗಳ ಕಾರ್ಯ ಸ್ಮರಿಸಿದರು.
ಕನ್ನಡ ಸಾಹಿತ್ಯ ಅದರಲ್ಲಿಯೂ ವಿಶೇಷವಾಗಿ ಭಾವಗೀತೆಗಳ ಕ್ಷೇತ್ರಕ್ಕೆ ಅವರು ಕೊಟ್ಟ ಕೊಡುಗೆ ಅದ್ಭುತವಾದದ್ದು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಸೇರಿದಂತೆ ನೂರಾರು ಗೌರವ ಸನ್ಮಾನಗಳಿಗೆ ಪಾತ್ರರಾಗಿದ್ದರು. ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಮಹತ್ವದ ಚೇತನವೊಂದನ್ನು ಕಳೆದುಕೊಂಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ವಿಶಿಷ್ಟ ಬರಹಗಾರ: ಅಲಿಕೆಯಿಂದ ಸಾರಸ್ವತ ಲೋಕ ಬಡ
ಹಿರಿಯ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿಯವರ ನಿಧನ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕವಿತೆ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ, ಪ್ರಬಂಧ, ಕಾದಂಬರಿ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತೊಡಗಿಸಿಕೊಂಡು, ಅಪಾರ ಓದುಗ ಬಳಗ ಹೊಂದಿದ್ದ ವಿಶಿಷ್ಟ ಬರಹಗಾರ ವೆಂಕಟೇಶ ಮೂರ್ತಿಯವರ ಅಗಲಿಕೆಯಿಂದ ಸಾರಸ್ವತ ಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.
ನಗುತ ಹುಟ್ಟಿ ನಗುತ ಮುಗಿವ ನಗುವ ಹೂವೆ ಮಾದರಿ
ಕನ್ನಡ ಸಾಹತ್ಯ ಲೋಕ ಶ್ರೀಮಂತಿಕೆಯನ್ನು ಭಾವಗೀತೆಗಳ ಮೂಲಕ ಹೆಚ್ಚಿಸಿದ ಹಿರಿಯ ಕವಿ ಎಚ್ ಎಸ್ ವೆಂಕಟೇಶ್ ಮೂರ್ತಿ ಅವರು. ಎಚ್ಎಸ್ವಿ ಎಂದೇ ಜನಜನಿತರಾಗಿದ್ದ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ.
ಕನ್ನಡದಲ್ಲಿ ಕಾದಂಬರಿ, ಕತೆ, ವಿಮರ್ಶೆ, ಕವನ, ಮಕ್ಕಳ ಸಾಹಿತ್ಯ, ಸಿನಿಮಾ ಸಾಹಿತ್ಯ, ರಂಗಭೂಮಿ ಹೀಗೆ ಎಲ್ಲಾ ಸಾಹಿತ್ಯ ಪ್ರಕಾರಗಳಲ್ಲೂ ಎಚ್ಚೆಸ್ವಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದರು. ಮೃತರ ಆತ್ಮಕ್ಕೆ ಸದ್ಗತಿ ದೊರಕಲಿ. ಅವರ ಅಪಾರ ಅಭಿಮಾನಿ ವರ್ಗಕ್ಕೆ, ಕುಟುಂಬಕ್ಕೆ, ಆಪ್ತರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಅಪರೂಪದ ಕೊಡುಗೆ ನೀಡಿದ ಸಾಹಿತಿ: ಎಂಬಿ ಪಾಟೀಲ್
ಕನ್ನಡದ ಖ್ಯಾತ ಕವಿ, ನಾಟಕಕಾರ ಹಾಗೂ ಸಾಹಿತಿ ಪ್ರೊ. ಎಚ್.ಎಸ್. ವೆಂಕಟೇಶಮೂರ್ತಿ ಅವರ ನಿಧನದ ಸುದ್ದಿ ಆಘಾತಕಾರಿಯಾಗಿದೆ. ಸಾಹಿತ್ಯಿಕ ಕೃತಿಗಳ ಮೂಲಕ ಕನ್ನಡ ಭಾಷೆ ಹಾಗೂ ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಷ್ಟು ಮಾತ್ರವಲ್ಲದೇ ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಅನುವಾದ, ಮಕ್ಕಳ ಸಾಹಿತ್ಯ, ವಿಮರ್ಶೆ ಮೊದಲಾದ ಪ್ರಕಾರಗಳಲ್ಲಿ ಅವರ ಸೇವೆ ಮಹತ್ವದ್ದಾಗಿದ. ಅವರ ನಿಧನದಿಂದ ನಮ್ಮ ಸಾಹಿತ್ಯ ವಲಯಕ್ಕೆ, ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ರಾಜ್ಯ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ತಿಳಿಸಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications