ಎಚ್ಎಸ್ವಿಗೆ ಒಲಿದ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ
ಬೆಂಗಳೂರು, ಡಿಸೆಂಬರ್ 4; ಹಿರಿಯ ಸಾಹಿತಿ ಡಾ.ಎಚ್ ಎಸ್ ವೆಂಕಟೇಶಮೂರ್ತಿ ಅವರು ಮುಂದಿನ ವರ್ಷ ಕಲಬುರ್ಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕಾರ್ಯಕಾರಿ ಸಮಿತಿ ಸಭೆಯನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ ವಹಿಸಿದ್ದರು. 2020 ಫೆಬ್ರುವರಿ 5, 6 ಮತ್ತು 7 ರಂದು ಶರಣರ ನಾಡು ಕಲಬುರಗಿಯಲ್ಲಿ, ಕಲಬುರಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಸದ್ಯ ಬೆಂಗಳೂರಿನಲ್ಲಿ ನೆಲಸಿರುವ, ಕನ್ನಡದ ಪ್ರಮುಖ ಕವಿ, ಕಥೆಗಾರ, ನಾಟಕಕಾರ ಡಾ ಎಚ್ ಎಸ್ ವೆಂಕಟೇಶಮೂರ್ತಿ ಅವರು ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದವರು. ತಂದೆ ನಾರಾಯಣ ಭಟ್ಟ್ರು, ತಾಯಿ ನಾಗರತ್ನಮ್ಮ.

76 ವಯಸ್ಸಿನ ಎಚ್ ಎಸ್ ವೆಂಕಟೇಶಮೂರ್ತಿ ಅವರು, ಕನ್ನಡ ಸಾರಸ್ವತ ಲೋಕದಲ್ಲಿ ಎಚ್ಎಸ್ವಿ ಮೇಷ್ಟ್ರು ಎಂದೇ ಜನಜನಿತರಾಗಿದ್ದಾರೆ. ಬೆಂಗಳೂರಿನ ಸೇಂಟ್ ಜೋಸೆಪ್ ಕಾಮರ್ಸ್ ಕಾಲೇಜಿನಲ್ಲಿ ದಶಕಗಳ ಕಾಲ ಪ್ರಾಧ್ಯಾಪಕರಾಗಿದ್ದ ಅವರು, ಕನ್ನಡ ಕಟ್ಟುವ ಕಾಯಕದಲ್ಲಿ ಇಂದಿಗೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಈ ಹಿಂದೆ 1928 ರಲ್ಲಿ, 1949 ರಲ್ಲಿ ಹಾಗೂ 1987 ರಲ್ಲಿ ಕಲಬುರಗಿಯಲ್ಲಿ ಅಖಿಲ ಬಾರತ ಸಾಹಿತ್ಯ ಸಮ್ಮೇಳನ ನಡೆದಿದ್ದವು.. ಕಾರ್ಯಕಾರಿ ಸಮಿತಿ ಸಭೆಯನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ ವಹಿಸಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications