ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಾದಗಿರಿಯಲ್ಲಿ ಸಿಡಿಲು ಬಡಿದು ನಾಲ್ವರು ಸಾವು

By ನಮ್ಮ ಪ್ರತಿನಿಧಿ
|
Google Oneindia Kannada News

ಯಾದಗಿರಿ, ಸೆಪ್ಟೆಂಬರ್ 28 : ಯಾದಗಿರಿ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಮೂವರು ಮಕ್ಕಳು ಸೇರಿದ್ದಾರೆ.

ತಾಲೂಕಿನ ಗೌಡಗೇರಾ ಗ್ರಾಮದ ಬಳಿ ಕುರಿ ಮೇಯಿಸಲು ತೆರಳಿದ್ದ ಕರೆಪ್ಪ (15), ನಾಗರಾಜ್ (6) ಮತ್ತು ಮೀನಾಕ್ಷಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಈ ಕುರಿತು ಸೈದಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾಮಳೆಗೆ ತತ್ತರಿಸಿದ 'ಸಕ್ಕರೆ ನಗರಿ' ಮಂಡ್ಯಮಹಾಮಳೆಗೆ ತತ್ತರಿಸಿದ 'ಸಕ್ಕರೆ ನಗರಿ' ಮಂಡ್ಯ

Yadgir : 4 killed, 3 injured in lighting

ಸಿಡಿಲು ಬಡಿದು ಒಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸುರಪುರ ತಾಲೂಕಿನ ಎಣ್ಣೆ ವಡಗೇರಾ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ನಾಗಪ್ಪ ಹೊಸಮನಿ (40) ಎಂದು ಗುರುತಿಸಲಾಗಿದೆ.

ರೋಣ: ನಿರಂತರ ಮಳೆಯಿಂದಾಗಿ ಉಕ್ಕಿ ಹರಿದ ಬೆಣ್ಣೆಹಳ್ಳ, ಪ್ರವಾಹದ ಭೀತಿರೋಣ: ನಿರಂತರ ಮಳೆಯಿಂದಾಗಿ ಉಕ್ಕಿ ಹರಿದ ಬೆಣ್ಣೆಹಳ್ಳ, ಪ್ರವಾಹದ ಭೀತಿ

ಗಾಯಗೊಂಡ ಮೂವರನ್ನು ಬಾಗಾಲಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದಿದೆ. ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಬ್ಬರ ಸಾವು : ರಾಯಚೂರು ತಾಲೂಕಿನ ಪುಚ್ಚಲದಿನ್ನಿ ಗ್ರಾಮದ ಚಂದ್ರಮ್ಮ (35), ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ದಾಟನಾಳ ಗ್ರಾಮದ ರಾಮಪ್ಪ (40) ಸಿಡಿಲು ಬಡಿದು ಮೃತಪಟ್ಟಿದ್ದಾರೆ.

English summary
4 killed and 3 injured in lighting in Yadgir district, Karnataka. Injured admitted to Bagalkot government hospital. ಯಾದಗಿರಿಯಲ್ಲಿ ಸಿಡಿಲು ಬಡಿದು ನಾಲ್ವರು ಸಾವು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X