ಯಾದಗಿರಿ, ಅಕ್ಟೋಬರ್ 12 : ಯಾದಗಿರಿ ಜಿಲ್ಲೆಯಾದ್ಯಂತ ಕಳೆದೊಂದು ವಾರದಿಂದ ಧಾರಕಾರ ಮಳೆಯಾಗುತ್ತಿದೆ. ನಗರದ ಫಕರೂಲ್ಲಾ ಬಾಷಾ ದರ್ಗಾ ಸಂಪೂರ್ಣ ಜಲಾವೃತವಾಗಿದೆ. ತಗ್ಗು ಪ್ರದೇಶದಲ್ಲಿ ದರ್ಗಾ ಇರುವುದರಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ನುಗ್ಗಿದೆ. ನೀರಿನಿಂದಾಗಿ ದರ್ಗಾ ಮಿನಿ ಕೆರೆಯಂತಾಗಿದೆ.
* ಲಿಂಗಸುಗೂರು : ಲಿಂಗಸುಗೂರು ಸಮೀಪದ ಹಟ್ಟಿ ಪಟ್ಟಣದಲ್ಲಿ ಈಜಲು ಹೋದ ಬಾಲಕ ನೀರು ಪಾಲಾಗಿದ್ದಾನೆ. ಹಟ್ಟಿ ಕ್ಯಾಂಪ್ನ ಜಯಪ್ರಕಾಶ್ ಕಾಲೋನಿಯ ಕಿರಣ ಕುಮಾರ್ (9) ಮೃತಪಟ್ಟ ಬಾಲಕ. ಕಿರಣ ಕುಮಾರ್ ಪಟ್ಟಣದ ವಿನಾಯಕ ಶಾಲೆಯಲ್ಲಿ ಓದುತ್ತಿದ್ದ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
* ಲಿಂಗಸುಗೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಹಾಯಕ ಆಯುಕ್ತರ ಕಚೇರಿ ಎದುರು ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟದಿಂದ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಕಳೆದ ಮೂರು ದಿನಗಳಿಂದ ಧರಣಿ ಮಾಡಲಾಗುತ್ತಿದ್ದು ಅಮರಪ್ಪ ಎಂಬ ವ್ಯಕ್ತಿ ಅಸ್ವಸ್ಥಗೊಂಡಿದ್ದಾರೆ.
Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರ.subscribe to Kannada Oneindia.
ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!