ಸೆಪ್ಟೆಂಬರ್ನಲ್ಲಿ ಯಡಿಯೂರಪ್ಪರಿಂದ ಮಧ್ಯಂತರ ಬಜೆಟ್?
Recommended Video
ಬೆಂಗಳೂರು, ಆಗಸ್ಟ್ 06 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆಯೇ?. ಮೈತ್ರಿ ಸರ್ಕಾರ ಮಂಡಿಡಿದ್ದ ವಿಧೇಯಕಕ್ಕೆ ಮೂರು ತಿಂಗಳ ಅನುಮೋದನೆಯನ್ನು ಅವರು ಈಗಾಗಲೇ ಪಡೆದಿದ್ದಾರೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ವಾರಗಳು ಕಳೆದಿವೆ. ಅವರು ಇನ್ನೂ ಸಂಪುಟ ವಿಸ್ತರಣೆ ಮಾಡಿಲ್ಲ. ಸಂಪುಟ ವಿಸ್ತರಣೆ ಮಾಡಿದರೂ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳಲು ತೀರ್ಮಾನಿಸಿದ್ದಾರೆ.
ಹಣಕಾಸು ಖಾತೆ ತಮ್ಮ ಬಳಿಯೇ ಇದ್ದರೆ ಸೆಪ್ಟೆಂಬರ್ನಲ್ಲಿ ಯಡಿಯೂರಪ್ಪ ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆ. ಹೈಕಮಾಂಡ್ ನಾಯಕರು ಹಣಕಾಸು ಖಾತೆಯನ್ನು ಯಡಿಯೂರಪ್ಪಗೆ ನೀಡಲು ಒಪ್ಪಿಗೆ ನೀಡಲಿದ್ದಾರೆಯೇ? ಕಾದು ನೋಡಬೇಕು.

ಯಡಿಯೂರಪ್ಪ ಈಗಾಗಲೇ ಸಂಪನ್ಮೂಲಗಳ ಕ್ರೋಢಿಕರಣ, ಕುಮಾರಸ್ವಾಮಿ ಮಂಡಿಸಿದ ಬಜೆಟ್ನಲ್ಲಿ ಖರ್ಚಾಗಿರುವ ಅನುದಾನ, ಹೊಸ ಕಾರ್ಯಕ್ರಮಗಳ ಘೋಷಣೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮಾಹಿತಿಯನ್ನು ಸಂಗ್ರಹ ಮಾಡುತ್ತಿದ್ದಾರೆ.
ಸೆಪ್ಟೆಂಬರ್ 2ನೇ ವಾರದಲ್ಲಿ ಅಧಿವೇಶನ ನಡೆಸಲು ಯಡಿಯೂರಪ್ಪ ಚಿಂತನೆ ನಡೆಸುತ್ತಿದ್ದಾರೆ. ಮೊದಲು ಬಜೆಟ್ ಮಂಡನೆ ಮಾಡಿ, ಎರಡು ವಾರಗಳ ಕಾಲ ಬಜೆಟ್ ಅಧಿವೇಶನ ನಡೆಸಲು ಚರ್ಚೆ ನಡೆಸಲಾಗುತ್ತಿದೆ. ಮಧ್ಯಂತರ ಬಜೆಟ್ ಮಂಡನೆ ಮಾಡಿದರೆ ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.
ಹಿಂದಿನ ಸರ್ಕಾರ ಮಂಡಿಸಿದ ಬಜೆಟ್ಗೆ ಪೂರ್ಣ ಪ್ರಮಾಣದ ಒಪ್ಪಿಗೆ ಪಡೆದರೆ ಹೊಸ ಬಜೆಟ್ ಮಂಡನೆ ಅವಕಾಶ ಸಿಗುವುದಿಲ್ಲ. ಆದ್ದರಿಂದ, ಯಡಿಯೂರಪ್ಪ ಕೇವಲ ಮೂರು ತಿಂಗಳ ಅವಧಿಗೆ ಒಪ್ಪಿಗೆ ಪಡೆದಿದ್ದಾರೆ.
-
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications