ಕರ್ಣನ ವೇಷದಲ್ಲಿ ಪಂಚಭೂತಗಳಲ್ಲಿ ಲೀನರಾದ ಯಕ್ಷರಾಜ ಚಿಟ್ಟಾಣಿ
ಕಾರವಾರ, ಸೆಪ್ಟೆಂಬರ್ 04: ಅಗಲಿದ ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರ ಅಂತ್ಯ ಸಂಸ್ಕಾರವು ಬುಧವಾರ ರಾತ್ರಿ ಮೃತರ ಹುಟ್ಟೂರು ಹೊನ್ನಾವರದ ಹೇರಂಗಡಿಯ ಗುಡ್ಡೆಕೇರಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಅವರಿಗೆ ಜಿಲ್ಲಾಧಿಕಾರಿಯ ಅನುಪಸ್ಥಿತಿಯಲ್ಲಿ ಭಟ್ಕಳ ಉಪವಿಭಾಗಾಧಿಕಾರಿ ಎಂ.ಎನ್.ಮಂಜುನಾಥ ಜಿಲ್ಲಾಡಳಿತದ ಪರವಾಗಿ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದರು. ಸಶಸ್ತ್ರ ಮೀಸಲು ಪಡೆಯು ಮೂರು ಸುತ್ತು ಗುಂಡು ಹಾರಿಸಿ, ಬಂದೂಕು ತಲೆಕೆಳಗೆ ಮಾಡಿ ಮೌನ ಆಚರಿಸಿತು. ಬಳಿಕ ಅವರ ಮುಖಕ್ಕೆ ಯಕ್ಷ ಪ್ರಿಯರಿಂದ ಕರ್ಣನ ವೇಷ ಬಳಿಯುವ ಮೂಲಕ ಗೌರವ ಸಲ್ಲಿಸಲಾಯಿತು.

ಅವರ ಅಂತಿಮ ಸಂಸ್ಕಾರದಲ್ಲಿ ಎ.ಎಸ್ಪಿ ಗೋಪಾಲ ಬ್ಯಾಕೋಡ್, ಭಟ್ಕಳ ಶಾಸಕ ಮಂಕಾಳು ವೈದ್ಯ, ಕುಮಟಾದ ಮಾಜಿ ಶಾಸಕ ದಿನಕರ ಶೆಟ್ಟಿ, ಬಿಜೆಪಿಯ ಮುಖಂಡರಾದ ನಾಗರಾಜ ನಾಯಕ, ಸೂರಜ ನಾಯ್ಕ ಸೋನಿ, ಖ್ಯಾತ ಯಕ್ಷಗಾನ ಕಲಾವಿದರಾದ ಗಣಪತಿ ಹೆಗಡೆ ತೋಟಿ, ವಿದ್ಯಾಧರ ಜಲವಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಉಪನಿರ್ದೇಶಕ ರಾಮಕೃಷ್ಣ ನಾಯಕ ಸೇರಿದಂತೆ ಸಾವಿರಾರು ಗ್ರಾಮಸ್ಥರು ಭಾಗವಹಿಸಿ ಕಂಬನಿ ಮಿಡಿದರು.

ಹವ್ಯಕ ಬ್ರಾಹ್ಮಣ ವಿಧಿ ವಿಧಾನದಂತೆ ಮೃತರ ಅಂತ್ಯ ಸಂಸ್ಕಾರ ನಡೆಸಲಾಯಿತು. ಹಿರಿಯ ಮಗ ಸುಬ್ರಹ್ಮಣ್ಯ ಚಿಟ್ಟಾಣಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ವಿದಾಯ ಹೇಳಿದರು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications